ಮೈಸೂರು: ವರುಣ ದೇವನ ಕೃಪೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಮೈಸೂರು ಜಿಲ್ಲೆಯ ಕಬಿನಿ ಜಲಾಶಯ ಭರ್ತಿಗೆ ಇನ್ನು 2 ಅಡಿ ಬೇಕಿದೆ.
ಗರಿಷ್ಟ 2284 ಅಡಿಗಳ ಸಾಮಾಥ್ರ್ಯವನ್ನು ಹೊಂದಿರುವ ಕಬಿನಿಯಲ್ಲಿ ಈಗ ನೀರಿನ ಮಟ್ಟ 2281 ಅಡಿಗಳಿಗೆ ತಲುಪಿದೆ. ಜಲಾಶಯದ ಸಂಪೂರ್ಣ ಭರ್ತಿಗೆ ಕೇವಲ 3 ಅಡಿಗಳು ಮಾತ್ರ ಬಾಕಿ ಉಳಿದಿದೆ.
ಕಬಿನಿ ಜಲಾನಯನ ಪ್ರದೇಶ ಹಾಗೂ ಕೇರಳದ ವೈನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಪಿಲ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇರುವ ಕಾರಣ ನದಿಯ ಪಾತ್ರದ ಇಕ್ಕೆಲಗಳ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆಯನ್ನು ಸಹ ನೀಡಲಾಗಿದೆ.
ಜಲಾಶಯದ ಒಳಹರಿವಿನ ಪ್ರಮಾಣದಲ್ಲಿಯೂ ಭಾರೀ ಹೆಚ್ಚಳ ಕಂಡುಬಂದಿದೆ. ಇಂದು ಬೆಳಿಗ್ಗೆಯ ವೇಳೆಗೆ ಒಳಹರಿವು 13 ಸಾವಿರ ಕ್ಯೂಸೆಕ್ ಒಳಹರಿವು ಇದ್ದರೆ, 2 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಮಳೆಯಿಂದಾಗಿ ಒಳಹರಿವು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇರುವ ಕಾರಣ ಪರಿಣಾಮ ಜಲಾಶಯದ ಒಳಹರಿವಿಗೆ ಅನುಗುಣವಾಗಿ ಹೊರಹರಿವಿನ ಪ್ರಮಾಣವನ್ನು ಹೆಚ್ಚಿಸುವ ಸಾಧ್ಯತೆ ಯಿದೆ.