ಚೆನ್ನೈ: ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮ ಅದು ಜಯಲಲಿತಾ. ರಜನಿ ಮೇನಿಯಾ ಎಂಬುವುದು ಕೇವಲ ಮಾಧ್ಯಮಗಳ ಸೃಷ್ಟಿಯಾಗಿದ್ದು, ಇಲ್ಲಿ ಇವೆಲ್ಲ ನಡೆಯುವುದಿಲ್ಲ ಎಂದು ಎಐಡಿಎಂಕೆ ಪಕ್ಷದ ಉಚ್ಛಾಟಿತ ನಾಯಕ ಟಿಟಿವಿ ದಿನಕರನ್ ಹೇಳಿದ್ದಾರೆ.
- Advertisement 2
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಸಂಬಂಧ ಘೋಷಣೆ ಮಾಡಿದ ನಂತರ ಪ್ರತಿಕ್ರಿಯೆ ನೀಡಿರುವ ದಿನಕರನ್, ತಮಿಳುನಾಡಿನಲ್ಲಿ ರಜನಿ ಮೇನಿಯಾ ನಡೆಯುವುದಿಲ್ಲ. ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮ. ಅಲ್ಲದೇ ಎಂಜಿಆರ್ ಮತ್ತು ಅಮ್ಮ ಅವರೊಂದಿಗೆ ನೀವು ಯಾರನ್ನು ಬೇಕಾದರೂ ಹೋಲಿಕೆ ಮಾಡಬಾರದು. ಜಯಲಲಿತ ಅವರ ನಿಷ್ಠಾವಂತ ಬೆಂಬಲಿಗ ಮುಂದೆ ಯಾರು ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
- Advertisement 3
ಇತ್ತೀಚೆಗೆ ಜಯಲಲಿತಾ ಸಾವಿನಿಂದ ತೆರವಾಗಿದ್ದ ರಾಧಾಕೃಷ್ಣ ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ದಿನಕರನ್, ಎಐಎಡಿಎಂಕೆ ಪಕ್ಷದ ಅಭ್ಯರ್ಥಿಯ ವಿರುದ್ಧ ಭರ್ಜರಿ ಜಯ ದಾಖಲಿಸಿದ್ದರು.
- Advertisement 4
ರಜನಿ ನಿರ್ಧಾರ ಖುಷಿ ತಂದಿದೆ: ತಮಿಳುನಾಡಿನಲ್ಲಿ ರಜನಿಕಾಂತ್ ರಾಜಕೀಯ ಪ್ರವೇಶ ಅವರ ಅಭಿಮಾನಿಗಳಲ್ಲಿ ಹರುಷವನ್ನು ಮೂಡಿಸಿದೆ. ರಜನಿ ಅವರ ಸಮಕಾಲೀನ ನಟ ಕಮಲ್ ಹಾಸನ್ ಈ ಕುರಿತು ತಮ್ಮ ಅಭಿಪ್ರಾಯವನ್ನು ಟ್ವೀಟ್ ಮಾಡಿದ್ದು, ರಜನಿ ಅವರ ರಾಜಕೀಯ ಪ್ರವೇಶ ಖುಷಿ ತಂದಿದೆ. ಸಹೋದರ ರಜನಿಕಾಂತ್ ಅವರ ಸಾಮಾಜಿಕ ಪ್ರಜ್ಞೆ ಬಗ್ಗೆ ನನಗೆ ತಿಳಿದಿದೆ. ಹೀಗಾಗಿ ಅವರಿಗೆ ನಾನು ಶುಭ ಕೋರುತ್ತೇನೆ ಎಂದು ಹೇಳಿದ್ದಾರೆ.