ಮೈಸೂರು: ಭಾರೀ ಚರ್ಚೆಯಾಗುತ್ತಿರುವ ಮಹಿಷ ದಸರಾದ (Mahisha Dasara) ವೇದಿಕೆ ಕಾರ್ಯಕ್ರಮಕ್ಕೆ ಮಾತ್ರ ಪೊಲೀಸ್ ಇಲಾಖೆ ಅನುಮತಿ ನೀಡಿದೆ. ಅಲ್ಲದೇ ಕಾರ್ಯಕ್ರಮದಲ್ಲಿ ಯಾವುದೇ ಪ್ರಚೋದನಕಾರಿ ಭಾಷಣ ಮಾಡದಂತೆ ಪೊಲೀಸ್ ಆಯುಕ್ತ ಡಾ.ರಮೇಶ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪುರಭವನದಲ್ಲಿ ಬೆ.10 ರಿಂದ 12ರವರೆಗೆ ಮಹಿಷ ದಸರಾ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಪುರಭವನದ ಒಳಗಿನ ಸಭಾಂಗಣ ಬಿಟ್ಟು ನಗರದ ಎಲ್ಲಾ ಕಡೆ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ. ಇದರಿಂದಾಗಿ ಮೆರವಣಿಗೆ ಹಾಗೂ ಬೈಕ್ ರ್ಯಾಲಿ ನಡೆಸಬಾರದು. ಪರ ಹಾಗೂ ವಿರೋಧ ಘೋಷಣೆ ಕೂಗಬಾರದು. ಅಲ್ಲದೇ ಪ್ರಚೋದನಕಾರಿ ಹೇಳಿಕೆ ನೀಡಬಾರದು ಎಂದಿದ್ದಾರೆ. ಇದನ್ನೂ ಓದಿ: ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡ ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ
ಭದ್ರತೆಗೆ 2 ಸಾವಿರ ಪೊಲೀಸರ (Police) ನಿಯೋಜನೆ ಮಾಡಲಾಗಿದೆ. ಮಹಿಷ ದಸರಾ ವಿಚಾರವಾಗಿ ಪ್ರಚೋದನಕಾರಿಯಾಗಿ ಹೇಳಿಕೆ ಹಾಗೂ ಪೋಸ್ಟ್ ಹಾಕಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಷಾ ದಸರಾ ಪರ, ವಿರೋಧ – ಮೈಸೂರಿನಲ್ಲಿ ಸೆಕ್ಷನ್ 144 ಜಾರಿ
Web Stories