ನವದೆಹಲಿ: ಕಳೆದ ಮೇ 7ರಂದು ನಡೆದ ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆ ಕುರಿತು ಇಂಡೋನೇಷ್ಯಾದಲ್ಲಿರುವ ಭಾರತೀಯ ವಾಯು ಸೇನೆ (IAF) ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ಭಾರೀ ಕೋಲಾಹಲ ಎಬ್ಬಿಸಿದೆ.
ʻಮೇ 7ರ ʻಆಪರೇಷನ್ ಸಿಂಧೂರʼ ಕಾರ್ಯಾಚರಣೆ ವೇಳೆ ಭಾರತೀಯ ವಾಯು ಸೇನೆಯ ಯುದ್ಧ ವಿಮಾನಗಳನ್ನು (Fighter Gets) ಪಾಕಿಸ್ತಾನವು ಹೊಡೆದುರುಳಿಸಿದೆ. ರಾಜಕೀಯ ನಾಯಕತ್ವವು ನಿರ್ಬಂಧ ಹೇರಿದ್ದರಿಂದಲೇ ನಾವು ವಿಮಾನಗಳನ್ನು ಕಳೆದುಕೊಳ್ಳಬೇಕಾಯಿತುʼ ಎಂದು ವಾಯುಸೇನೆ ಅಧಿಕಾರಿಯೊಬ್ಬರು ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಗಗನಯಾತ್ರಿ ಶುಭಾಂಶು ಜೊತೆಗೆ ಮೋದಿ ಸಂವಾದ – 16 ಬಾರಿ ಸೂರ್ಯೋದಯ, ಸೂರ್ಯಾಸ್ತ ನೋಡ್ತಿದ್ದೇವೆ ಎಂದ ಶುಕ್ಲಾ
First the Chief of Defence Staff makes important revelations in Singapore. Then a senior defence official follows up from Indonesia.
But why is the PM refusing to preside over an all-party meeting and take the Opposition into confidence? Why has the demand for a special session…
— Jairam Ramesh (@Jairam_Ramesh) June 29, 2025
ಇಂಡೋನೇಷ್ಯಾದ (Indonesian) ವಿಶ್ವವಿದ್ಯಾಲಯವೊಂದರಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಭಾರತೀಯ ವಾಯು ಸೇನೆಯ ಕ್ಯಾಪ್ಟನ್ ಶಿವಕುಮಾರ್ ಹಿಂದೆ ಮಾತನಾಡಿದ್ದರು. ಈ ಬಗ್ಗೆ ಸುದ್ದಿ ಸಂಸ್ಥೆಯೊಂದು ವರದಿ ಮಾಡಿತ್ತು. ಇದನ್ನೂ ಓದಿ: ಕೆಂಪೇಗೌಡ ಏರ್ಪೋರ್ಟ್ ಬಳಿ ಕೇಂದ್ರ ಸರ್ಕಾರದಿಂದ NIMHANS ಪಾಲಿಟ್ರೌಮಾ ಘಟಕಕ್ಕೆ ಅನುಮೋದನೆ
ವಾಯು ಸೇನೆಯ ಅಧಿಕಾರಿ ಹೇಳಿದ್ದೇನು?
ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ನೇರ ಮಿಲಿಟರಿ ದಾಳಿಯಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿತು. ಈ ಸಮಯದಲ್ಲಿ ಭಾರತೀಯ ವಾಯು ಸೇನೆಯ 5 ಯುದ್ಧ ವಿಮಾನಗಳನ್ನು ಪಾಕಿಸ್ತಾನವು ಹೊಡೆದುರುಳಿಸಿದೆ. ಮೂರು ರಫೇಲ್ಗಳು, 1 ಮಿಗ್-29 ಮತ್ತು ಸುಖೋಯ್ -30 ಯುದ್ಧ ವಿಮಾನಗಳು ಹಾಗೂ ಒಂದು ಯುದ್ಧತಂತ್ರದ ಡ್ರೋನ್ ಅನ್ನು ಕಳೆದುಕೊಳ್ಳಬೇಕಾಯಿತು. ರಾಜಕೀಯ ನಾಯಕತ್ವವು ನಿರ್ಬಂಧ ಹೇರಿದ್ದರಿಂದಲೇ ನಾವು ವಿಮಾನಗಳನ್ನು ಕಳೆದುಕೊಳ್ಳಬೇಕಾಯಿತು. ಇದನ್ನೂ ಓದಿ: Operation Sindoor | ತಲೆ ಕೆಡಿಸಿಕೊಂಡು ʻಸಿಂಧೂರʼ ಅರ್ಥ ಹುಡುಕಾಡ್ತಿದೆ ಪಾಕ್ – ಗೂಗಲ್ನಲ್ಲಿ ಟ್ರೆಂಡ್
ಭಾರತವು ಹಲವು ವಿಮಾನಗಳನ್ನು ಕಳೆದುಕೊಂಡಿದೆ. ಅವರು ಈ ಮಾತನ್ನು ಒಪ್ಪದೇ ಇರಬಹುದು. ಆದ್ರೆ ನಾವು ಕೆಲವು ವಿಮಾನಗಳನ್ನು ಕಳೆದುಕೊಂಡಿದ್ದೇವೆ. ಅದು ಮಿಲಿಟರಿ ನೆಲೆಗಳ ಮೇಲೆ ಮತ್ತು ವಾಯುರಕ್ಷಣಾ ವ್ಯವಸ್ಥೆಗಳ ಮೇಲೆ ದಾಳಿ ಮಾಡದಂತೆ ರಾಜಕೀಯ ನಾಯಕತ್ವವು ನಿರ್ಬಂಧ ಹೇರಿದ್ದರಿಂದಾಗಿದೆ. ಇದಾದ ಬಳಿಕ ನಾವು ನಮ್ಮ ತಂತ್ರಗಳನ್ನ ಸಂಪೂರ್ಣ ಬದಲಾಯಿಸಿದೆವು. ಅವರ ಮಿಲಿಟರಿ ನೆಲೆಗಳು, ವಾಯುರಕ್ಷಣಾ ವ್ಯವಸ್ಥೆಗಳ ಮೇಲೆ ದಾಳಿ ಮಾಡಿ ನಾಶಪಡಿಸಿದೆವು. (ಮಿಲಿಟರಿ ಭಾಷೆಯಲ್ಲಿ SEAD ಮತ್ತು DEAD ಎಂದು ಕರೆಯಲಾಗುತ್ತದೆ). ಮೇ 8, 9, 10ರಂದು ಸಂಪೂರ್ಣ ಹಿಡಿತ ಸಾಧಿಸಲಾಯಿತು ಎಂದು ಹೇಳಿರುವುದಾಗಿ ವರದಿಯಾಗಿದೆ. ಕ್ಯಾಪ್ಟನ್ ಶಿವಕುಮಾರ್ ಅವರು ಹೇಳಿದ್ದಾರೆ ಎನ್ನಲಾದ ಹೇಳಿಕೆ ಕುರಿತು ಕೇಂದ್ರ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಈ ವರದಿಯನ್ನು ತನ್ನ ಎಕ್ಸ್ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ ನಾಯಕರು, ಕೇಂದ್ರ ಸರ್ಕಾರವು ದೇಶದ ಜನರ ದಾರಿ ತಪ್ಪಿಸುವ ಕೆಲಸ ಮಾಡಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಸಂವಿಧಾನದ ಪೀಠಿಕೆ ರಾಷ್ಟ್ರದ ಆತ್ಮ, ತಿದ್ದುಪಡಿಯಿಂದ ಸಂವಿಧಾನದ ಆಶಯಕ್ಕೆ ಧಕ್ಕೆಯಾಗಿದೆ: ಜಗದೀಪ್ ಧನ್ಕರ್ ಕಳವಳ
ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಪಕ್ಷಗಳ ಸಭೆ ಕರೆದು ಅದರ ನೇತೃತ್ವ ವಹಿಸಿಕೊಳ್ಳಲು ಯಾಕೆ ನಿರಾಕರಿಸುತ್ತಿದ್ದಾರೆ. ಪಹಲ್ಗಾಮ್ ದಾಳಿ ಮತ್ತು ʻಆಪರೇಷನ್ ಸಿಂಧೂರʼದ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ಕರೆಯಬೇಕು ಎನ್ನುವ ವಿರೋಧ ಪಕ್ಷಗಳ ಆಗ್ರಹವನ್ನು ಯಾಕಾಗಿ ಒಪ್ಪಿಕೊಳ್ಳುತ್ತಿಲ್ಲ? ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.
ದೇಶದ ಭದ್ರತೆಯ ವಿಚಾರದಲ್ಲಿ ರಾಜಿ ಮಾಡಿಕೊಂಡಿದ್ದೇವೆ ಎಂದು ಕೇಂದ್ರ ಸರ್ಕಾರಕ್ಕೆ ತಿಳಿಸಿದೆ. ಇದನ್ನು ಭಾರತದ ಜನರ ಎದುರು ಕಾಂಗ್ರೆಸ್ ತೆರೆದಿಡುತ್ತದೆ ಎಂದು ಅವರು ಭಯಭೀತರಾಗಿದ್ದಾರೆ. ಅದಕ್ಕಾಗಿಯೇ ವಿಶೇಷ ಅಧಿವೇಶನ ಕರೆಯುತ್ತಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ವೇಳೆ S-400 ಯಶಸ್ವಿ ಕಾರ್ಯಾಚರಣೆ; S-500 ರಕ್ಷಣಾ ವ್ಯವಸ್ಥೆ ಖರೀದಿಗೂ ಆಸಕ್ತಿ ತೋರಿದ ಭಾರತ