ಬೆಂಗಳೂರು: ಲಘು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ 5 ರೂಪಾಯಿ ಡಾಕ್ಟರ್ ಎಂದೇ ಫೇಮಸ್ ಆಗಿದ್ದ ಶಂಕರೇಗೌಡ ಅವರಿಗೆ ಇಂದು ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಓಪನ್ ಹಾರ್ಟ್ ಸರ್ಜರಿ ಮಾಡಲಾಗಿದೆ.
- Advertisement 2
ನಗರದ ಪೋರ್ಟೀಸ್ ಆಸ್ಪತ್ರೆಯಲ್ಲಿ ಬೆಳಗ್ಗೆ 8 ಗಂಟೆಗೆ ಶಂಕರೇಗೌಡರನ್ನು ಆಪರೇಷನ್ ಥೇಟರ್ಗೆ ಕರೆದುಕೊಂಡು ಹೋದ 8 ಮಂದಿ ನುರಿತ ವೈದ್ಯರ ತಂಡ ಸರ್ಜರಿ ಮಾಡಿದೆ. ಕಳೆದ ಒಂದು ತಿಂಗಳ ಹಿಂದೆ ಶಂಕರೇಗೌಡರಿಗೆ ಲಘು ಹೃದಯಾಘಾತವಾಗಿತ್ತು. ಈ ಹಿನ್ನೆಲೆ ಮೈಸೂರಿನ ಅಪೋಲೋ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಹೃದಯದ ಮೂರು ರಕ್ತನಾಳಗಳು ಬ್ಲಾಕ್ ಆಗಿದ್ದರಿಂದ ತಾತ್ಕಾಲಿಕವಾಗಿ ಸ್ಟಂಟ್ ಅಳವಡಿಸಲಾಗಿತ್ತು. ಆದರೆ ನಂತರದ ದಿನಗಳಲ್ಲಿ ಬೈಪಾಸ್ ಸರ್ಜರಿ ಮಾಡುವುದಾಗಿ ವೈದ್ಯರು ಕುಟುಂಬಸ್ಥರಿಗೆ ತಿಳಿಸಿದ್ದರು. 5ರೂ. ಡಾಕ್ಟರ್ ಎಂದೇ ಫೇಮಸ್ ಆಗಿದ್ದ ಶಂಕರೇಗೌಡಗೆ ಹೃದಯಾಘಾತ
- Advertisement 3
- Advertisement 4
ಇಷ್ಟು ದಿನ ಲವಲವಿಕೆಯಿಂದ ಚಿಕಿತ್ಸೆಗೆ ಸ್ಪಂದಿಸಿ ಆರಾಮವಾಗಿದ್ದ ಶಂಕರೇಗೌಡ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡ ಹಿನ್ನೆಲೆ ಮೇ 30ರಂದು ಡಿಸ್ಚಾರ್ಜ್ ಆಗಿದ್ದರು. ಹೃದ್ರೋಗ ತಜ್ಞರ ಸಲಹೆ ಮೇರೆಗೆ ಇದೀಗ ಶಂಕರೇಗೌಡರು ಓಪನ್ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದಾರೆ.