Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಳೆ ಮೈಸೂರು ಭಾಗದಲ್ಲಿ ಆಪರೇಷನ್ ಕಮಲ – ಹಲವು ಪ್ರಭಾವಿಗಳು ಬಿಜೆಪಿ ಸೇರ್ಪಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಳೆ ಮೈಸೂರು ಭಾಗದಲ್ಲಿ ಆಪರೇಷನ್ ಕಮಲ – ಹಲವು ಪ್ರಭಾವಿಗಳು ಬಿಜೆಪಿ ಸೇರ್ಪಡೆ

Bengaluru City

ಹಳೆ ಮೈಸೂರು ಭಾಗದಲ್ಲಿ ಆಪರೇಷನ್ ಕಮಲ – ಹಲವು ಪ್ರಭಾವಿಗಳು ಬಿಜೆಪಿ ಸೇರ್ಪಡೆ

Public TV
Last updated: January 30, 2023 3:07 pm
Public TV
Share
3 Min Read
bengaluru bjp 1
SHARE

ಬೆಂಗಳೂರು: ಮೈಸೂರು ಕರ್ನಾಟಕ ಭಾಗದಲ್ಲಿ ಬಿಜೆಪಿಯ (BJP) ಆಪರೇಷನ್ ಕಮಲ ಕಾರ್ಯಾಚರಣೆಗೆ ಮತ್ತಷ್ಟು ಬಲ ಬಂದಿದೆ. ಆಪರೇಷನ್ ಕಮಲದ ಭಾಗವಾಗಿ ಸೋಮವಾರ ಹಾಸನ, ಮೈಸೂರು ಹಾಗೂ ರಾಮನಗರ ಭಾಗದ ಹಲವರು ಬಿಜೆಪಿ ಸೇರಿದ್ದಾರೆ.

ಬೆಂಗಳೂರಿನ (Bengaluru) ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel), ಸಚಿವ ಗೋಪಾಲಯ್ಯ ಸಮ್ಮುಖದಲ್ಲಿ ಹಲವರು ಸೋಮವಾರ ಪಕ್ಷ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ಯುವ ಮುಖಂಡ ಕವೀಶ್‌ಗೌಡ ವಾಸು, ಜೆಡಿಎಸ್ ತಾಲೂಕು ಘಟಕದ ಮಾಜಿ ಅಧ್ಯಕ್ಷ ಸೋಮಶೇಖರ್, ಕಾಂಗ್ರೆಸ್ ಮಾಜಿ ಪದಾಧಿಕಾರಿ ವೆಂಕಟೇಶ್, ರೈತ ಸಂಘಟನೆ ಜಿಲ್ಲಾ ಅಧ್ಯಕ್ಷ ದಿವಾಕರ್ ಗೌಡ, ಕಾಂಗ್ರೆಸ್ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿವಿ ರಾಜಪ್ಪ, ಜೆಡಿಎಸ್ ಪರಾಜಿತ ಅಭ್ಯರ್ಥಿ ಗಿರೀಶ್ ನಾಶಿ, ಪುಣ್ಯ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕಿ ಡಾ.ಪುಣ್ಯವತಿ ನಾಗರಾಜ್ ಅವರು ಬಿಜೆಪಿ ಸೇರಿದರು. ಬಿಜೆಪಿ ಸೇರ್ಪಡೆಗೊಂಡವರಿಗೆ ಪಕ್ಷದ ಬಾವುಟ ನೀಡಿ, ಶಾಲು ಹೊದಿಸಿ ಬರಮಾಡಿಕೊಳ್ಳಲಾಯಿತು.

bengaluru BJP

ಕಾಂಗ್ರೆಸ್‌ನ ಮಾಜಿ ಶಾಸಕ ವಾಸು ಅವರ ಪುತ್ರ ಕವೀಶ್ ಗೌಡ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇವರು ಚಾಮುಂಡೇಶ್ವರಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದಾರೆ ಎನ್ನಲಾಗಿದೆ. ಹುಣಸೂರು ಕ್ಷೇತ್ರದ ಪರಾಜಿತ ಜೆಡಿಎಸ್ ಅಭ್ಯರ್ಥಿ ಸೋಮಶೇಖರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಸಕಲೇಶಪುರದ ನಿವೃತ್ತ ಎಂಜಿನಿಯರ್ ವೆಂಕಟೇಶ್, ಅರಕಲಗೂಡು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ದಿವಾಕರ್ ಗೌಡ, ಹಾಸನದ ಕಾಂಗ್ರೆಸ್ ಮುಖಂಡ ಸಿವಿ ರಾಜಪ್ಪ, ಮಹಾಲಕ್ಷ್ಮಿ ಲೇಔಟ್‌ನ ಜೆಡಿಎಸ್ ಮುಖಂಡ ಗಿರೀಶ್ ನಾಶಿ ಹಾಗೂ ರಾಮನಗರದ ಡಾ. ಪುಣ್ಯವತಿ ನಾಗರಾಜ್ ಬಿಜೆಪಿ ಸೇರ್ಪಡೆಯಾದ ಪ್ರಮುಖರು. ಗಿರೀಶ್ ನಾಶಿಯವರು ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪರಾಜಿತ ಅಭ್ಯರ್ಥಿಯಾಗಿದ್ದರು.

bengaluru bjp 2

ಬಿಜೆಪಿ ಸೇರಿದ ಬಳಿಕ ಮಾತಾಡಿದ ಕವೀಶ್ ಗೌಡ ವಾಸು, ನಾನು ಮೈಸೂರಿನ ಮಾಜಿ ಶಾಸಕ ವಾಸು ಅವರ ಪುತ್ರ. ವಿದ್ಯಾವಿಕಾಸ್ ಶಿಕ್ಷಣ ಸಂಸ್ಥೆಯ ಟ್ರಸ್ಟೀ ಸದಸ್ಯ. ನನ್ನ ತಂದೆಯವರ ಕ್ಷೇತ್ರದಲ್ಲಿ ರಾಜಕೀಯ, ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದೆ. ವಾಸು ಅವರು ಕಳೆದ 35 ವರ್ಷಗಳಿಂದ ಕಾಂಗ್ರೆಸ್‌ನಲ್ಲಿದ್ದಾರೆ. ಕಳೆದ ಸಲ ನಮ್ಮ ತಂದೆ ಸೋತಿದ್ದರು. ನಾನು ಬಿಜೆಪಿ, ತಂದೆ ಕಾಂಗ್ರೆಸ್ ಹೇಗೆ ಎನ್ನುವ ಪ್ರಶ್ನೆ ಸಹಜವಾಗಿ ಏಳುತ್ತದೆ. ಆದರೆ ನಾನು ಸೈದ್ಧಾಂತಿಕವಾಗಿ ಬಿಜೆಪಿ ಮೆಚ್ಚಿ, ಮೋದಿಯವರ ಕೆಲಸಗಳನ್ನು ಒಪ್ಪಿ ಬಿಜೆಪಿ ಸೇರಿದ್ದೇನೆ. ಪಕ್ಷವು ನನಗೆ ಏನೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ಪಕ್ಷದ ಚಟುವಟಿಕೆಗಳಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಭಾಗವಹಿಸುತ್ತೇನೆ ಎಂದರು. ಇದನ್ನೂ ಓದಿ: ಬಿಜೆಪಿಗೆ ಸಿದ್ದರಾಮಯ್ಯ, ಖರ್ಗೆ, ಡಿಕೆಶಿ ಮಕ್ಕಳು ಬರ್ತಾರೆ: ಕಟೀಲ್

ಬಳಿಕ ಮಾತಾಡಿದ ಸಚಿವ ಗೋಪಾಲಯ್ಯ, ಮೈಸೂರು, ಹಾಸನ, ಬೆಂಗಳೂರಿನ ಅನೇಕರು ಬಿಜೆಪಿ ಸೇರಿದ್ದಾರೆ. ಬಿಜೆಪಿ ಸೇರಿದ ಎಲ್ಲರಿಗೂ ಇಲ್ಲಿ ಉತ್ತಮ ಭವಿಷ್ಯ ಇದೆ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದೆ. ನಾನು ಸ್ವಇಚ್ಛೆಯಿಂದ ಬಿಜೆಪಿಗೆ ಬಂದೆ. ಪಕ್ಷ ನಮಗೆ ಎಲ್ಲಾ ಸ್ಥಾನಮಾನ ಕೊಟ್ಟಿದೆ. 2013 ರಲ್ಲಿ ಬಿಜೆಪಿ ಇಬ್ಭಾಗ ಆದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಇಲ್ಲದಿದ್ದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿರಲಿಲ್ಲ. ನಾವೆಲ್ಲಾ ಬಿಜೆಪಿಯಲ್ಲಿ ಒಂದಾಗಿದ್ದೇವೆ, 150+ ಸ್ಥಾನ ಗೆಲ್ಲುತ್ತೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜನ ನಮ್ಮ ಪಕ್ಷ ಸೇರುತ್ತಾರೆ ಎಂದು ಗೋಪಾಲಯ್ಯ ತಿಳಿಸಿದರು.

nalin kumar kateel

ನಂತರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತಾಡಿ, ಇದೀಗ ಹಳೆ ಮೈಸೂರು (Old Mysuru) ಭಾಗದ ಇತರ ಪಕ್ಷಗಳ ಹತ್ತಾರು ಪ್ರಮುಖರು ಬಿಜೆಪಿ ಸೇರಿದ್ದಾರೆ. ಪರಿವಾರ ವಾದ, ಕುಟುಂಬ ವಾದದಿಂದ ರಾಷ್ಟ್ರೀಯ ವಾದಕ್ಕೆ ಬಂದ ನಿಮಗೆಲ್ಲರಿಗೂ ಸ್ವಾಗತ. ದೇಶವನ್ನು ಸರ್ವತೋಮುಖ ಅಭಿವೃದ್ಧಿಯತ್ತ ಮುನ್ನಡೆಸುವ ನರೇಂದ್ರ ಮೋದಿಯವರ ಚಿಂತನೆಗೆ ಅನುಗುಣವಾಗಿ ಕ್ಷೇತ್ರ, ಮತಗಟ್ಟೆಗಳಲ್ಲಿ ನೀವು ಕೆಲಸ ಮಾಡುತ್ತೀರೆಂದು ಆಶಿಸುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯದ ಅಬಕಾರಿ ಸಚಿವ ಕೆ ಗೋಪಾಲಯ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಎಸ್‌ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮೈಸೂರು ಜಿಲ್ಲೆ ಅಧ್ಯಕ್ಷ ಶ್ರೀವತ್ಸ, ಹಾಸನ ಜಿಲ್ಲೆ ಅಧ್ಯಕ್ಷ ಹೆಚ್‌ಕೆ ಸುರೇಶ್, ಮೈಸೂರು ಮಹಾಪೌರ ಶಿವಕುಮಾರ್, ಮಾಜಿ ಶಾಸಕ ಹೆಚ್ ವಿಶ್ವನಾಥ್ ಅವರು ಭಾಗವಹಿಸಿದ್ದರು. ಇದನ್ನೂ ಓದಿ: ಟಿಕೆಟ್ ಕೊಡಲು ‘ತ್ರೀ’ ಸೂತ್ರಕ್ಕೆ ಬಿಜೆಪಿ ಮೊರೆ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:assembly electionbengalurubjpKarnataka ElectionOld Mysuruoperation kamalaಕರ್ನಾಟಕ ಎಲೆಕ್ಷನ್ಬಿಜೆಪಿಬೆಂಗಳೂರುವಿಧಾನಸಭಾ ಚುನಾವಣೆಹಳೆ ಮೈಸೂರು
Share This Article
Facebook Whatsapp Whatsapp Telegram

Cinema news

man removes beard mustache gilli nata bigg boss winner
ಗಿಲ್ಲಿ ಬಿಗ್‌ ಬಾಸ್‌ ವಿನ್ನರ್‌ ಆದ್ರೆ ಅರ್ಧ ಗಡ್ಡ, ಮೀಸೆ ತೆಗೆಯುತ್ತೇನೆ ಅಂತ ಚಾಲೆಂಜ್‌ – ನುಡಿದಂತೆ ನಡೆದ ವ್ಯಕ್ತಿ
Cinema Latest Top Stories TV Shows
Rakshita Shetty 1
ಟ್ರೋಫಿ ಸಿಕ್ಕಿಲ್ಲ ಅಷ್ಟೇ.. ನನಗೆ ಎಲ್ಲ ಸಿಕ್ಕಿದೆ, ನಾನೇ ವಿನ್ನರ್: ರಕ್ಷಿತಾ ಶೆಟ್ಟಿ
Cinema Latest Main Post Sandalwood Top Stories
gilli nata hd kumaraswamy
ಅಪ್ಪಟ ಗ್ರಾಮೀಣ ಪ್ರತಿಭೆ ಗಿಲ್ಲಿಗೆ ಅಭಿನಂದನೆ: ಬಿಗ್‌ ಬಾಸ್‌ ವಿನ್ನರ್‌ಗೆ ಕೇಂದ್ರ ಸಚಿವ ಹೆಚ್‌ಡಿಕೆ ವಿಶ್‌
Bengaluru City Cinema Latest Top Stories TV Shows
gilli nata 4
ಬಂದಿರೋ 50 ಲಕ್ಷದಲ್ಲಿ ಜಮೀನು ತಗೊಂಡು ವ್ಯವಸಾಯ ಮಾಡ್ತೀನಿ: ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ ಫಸ್ಟ್ ರಿಯಾಕ್ಷನ್‌
Cinema Latest Main Post TV Shows

You Might Also Like

Hanumanth
Districts

ರಾಜಕಾರಣಿಗಳು ಕಾಲಿಗೆ ಬಿದ್ರೂ ಮತ ಹಾಕಲ್ಲ, ಕೋಟ್ಯಂತರ ಜನ ವೋಟ್ ಮಾಡಿ ಗಿಲ್ಲಿಯನ್ನು ಗೆಲ್ಲಿಸಿದ್ದಾರೆ: ಹನುಮಂತ

Public TV
By Public TV
25 minutes ago
Ashok Nagar Road Accident
Bengaluru City

ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ – ತಾಯಿ, ಮಗ ಸಾವು

Public TV
By Public TV
2 hours ago
spain train accident
Latest

ಸ್ಪೇನ್‌ನಲ್ಲಿ 2 ಹೈಸ್ಪೀಡ್‌ ರೈಲುಗಳ ನಡುವೆ ಡಿಕ್ಕಿ; 21 ಮಂದಿ ಸಾವು, 70ಕ್ಕೂ ಹೆಚ್ಚು ಜನರಿಗೆ ಗಾಯ

Public TV
By Public TV
2 hours ago
Bigg Boss Gilli
Bengaluru City

`ದೊಡ್ಮನೆ’ ದೊರೆಯಾದ ದಡದಪುರದ ಹೈದ – ಗಿಲ್ಲಿ ಗೆಲುವಿಗೆ ಸಂಭ್ರಮಿಸಿದ ಕರುನಾಡು

Public TV
By Public TV
4 hours ago
Gilli Nata 3
Cinema

ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿ ಗೌಡಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು?

Public TV
By Public TV
11 hours ago
Bermingham Pink sky
Latest

ಗುಲಾಬಿ ಬಣ್ಣಕ್ಕೆ ತಿರುಗಿದ ಬರ್ಮಿಂಗ್‌ಹ್ಯಾಮ್ ಆಕಾಶ – ಈ ಅಚ್ಚರಿ ಹಿಂದಿನ ಕಾರಣವೇನು? 

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?