ನವದೆಹಲಿ: ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆಯಲ್ಲಿ ಜೈಶ್-ಎ-ಮೊಹಮ್ಮದ್ ( JEM) ಮುಖ್ಯಸ್ಥ ಮಸೂದ್ ಅಜರ್ (Masood Azhar) ಬೇರೊಂದು ಕಟ್ಟಡದಲ್ಲಿದ್ದ ಕಾರಣ ಸಾವಿನಿಂದ ಜಸ್ಟ್ ಮಿಸ್ ಆಗಿದ್ದಾನೆ.
ಹೌದು. ಭಾರತ ಮೇ 7 ರ ನುಸಕಿನ ಜಾವ ಬಹಾವಲ್ಪುರದಲ್ಲಿರುವ (Bahawalpur) ಜೆಇಎಂ ಪ್ರಧಾನ ಕಚೇರಿಯ ಮೇಲೆ ಕ್ಷಿಪಣಿ ದಾಳಿ ನಡೆಸಿತ್ತು. ಈ ದಾಳಿಯಿಂದ ಪ್ರಧಾನ ಕಚೇರಿಯೇ ಧ್ವಂಸ ಆಗಿತ್ತು. ಅಷ್ಟೇ ಅಲ್ಲದೇ ಮಸೂದ್ ಅಜರ್ನ 10ಕ್ಕೂ ಹೆಚ್ಚು ಸಂಬಂಧಿಗಳು ಮೃತಪಟ್ಟಿದ್ದರು.
ಸಂಬಂಧಿಗಳು ಮೃತಪಟ್ಟಿದ್ದರೂ ಮಸೂದ್ ಅಜರ್ ಎಲ್ಲಿ ಹೋಗಿದ್ದ ಎಂಬ ಪ್ರಶ್ನೆ ಎದ್ದಿತ್ತು. ಈಗ ಉತ್ತರ ಸಿಕ್ಕಿದ್ದು ದಾಳಿ ನಡೆಯುವ ಸಮಯದಲ್ಲಿ ಆತ ಪಕ್ಕದ ಕಟ್ಟಡದಲ್ಲಿ ಇದ್ದ. ಹೀಗಾಗಿ ಸಾವಿನ ದವಡೆಯಿಂದ ಜಸ್ಟ್ ಪಾರಾಗಿದ್ದಾನೆ ಎಂದು ವರದಿಯಾಗಿದೆ. ಇದನ್ನೂ ಓದಿ: ತ್ರಾಲ್ ಸೇನಾ ಕಾರ್ಯಾಚರಣೆ – ಎನ್ಕೌಂಟರ್ಗೂ ಮುನ್ನ ಮನೆಗೆ ವಿಡಿಯೋ ಕಾಲ್, ಶರಣಾಗುವಂತೆ ಬೇಡಿಕೊಂಡಿದ್ದ ತಾಯಿ
ಜೈಶ್ ಪ್ರಧಾನ ಕಚೇರಿಯ ಮೇಲೆ ನಡೆಸಿದ ದಾಳಿಯಲ್ಲಿ ಮಸೂದ್ ಕುಟುಂಬದ ಒಟ್ಟು 14 ಮಂದಿ ಮೃತಪಟ್ಟಿದ್ದಾರೆ ಪಾಕ್ ಮಾಧ್ಯಮಗಳು ವರದಿ ಮಾಡಿವೆ. ಬಹಾವಲ್ಪುರದ ಸುಭಾನ್ ಅಲ್ಲಾ ಮಸೀದಿ ಮೇಲಿನ ದಾಳಿಯಲ್ಲಿ ಬಲಿಯಾದವರಲ್ಲಿ ಅಜರ್ನ ಅಕ್ಕ ಮತ್ತು ಆಕೆಯ ಪತಿ, ಸೋದರಳಿಯ ಮತ್ತು ಆತನ ಪತ್ನಿ, ಮತ್ತೊಬ್ಬ ಸೊಸೆ ಮತ್ತು ಅವರ ಕುಟುಂಬದ 5 ಮಕ್ಕಳು ಸೇರಿದ್ದಾರೆ. ಇದರ ಜೊತೆಗೆ ಮಸೂದ್ನ ಆಪ್ತ ಸಹಚರ, ಆತನ ತಾಯಿ ಸೇರಿ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಜರ್ ಹೇಳಿಕೆಯಲ್ಲಿ ತಿಳಿಸಿದ್ದಾನೆ.
ಉಗ್ರರು (Terrorists) ಮಾತ್ರವಲ್ಲ ಅವರ ಕುಟುಂಬವನ್ನು ನಾಶ ಮಾಡಬೇಕು. ಆಗ ಉಗ್ರರ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನ್ಯಾಯ ಸಿಗುತ್ತದೆ. ಅವರಿಗೂ ನೋವು ಏನು ಎನ್ನುವುದು ಗೊತ್ತಾಗಬೇಕೆಂಬ ಆಗ್ರಹ ಕೇಳಿ ಬಂದಿತ್ತು. ಈ ಜನರ ಆಗ್ರಹದಂತೆ ಮಸೂದ್ ಕುಟುಂಬವನ್ನೇ ಭಾರತ ನಾಶ ಮಾಡಿದೆ. ಇದನ್ನೂ ಓದಿ: ಮೋದಿಗೆ ಟಕ್ಕರ್ ಕೊಡಲು ಹೋಗಿ ನಗೆಪಾಟಲು – ಧ್ವಂಸಗೊಂಡ ಏರ್ಫೀಲ್ಡ್ ಮುಚ್ಚಿಕೊಳ್ಳಲು ಮೈದಾನದಲ್ಲಿ ಪಾಕ್ ಪ್ರಧಾನಿ ಸಂವಾದ
ಅಜರ್ ಹಿನ್ನೆಲೆ ಏನು?
ನಿಷೇಧಿತ ಜೈಶ್-ಎ- ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ 2001ರಲ್ಲಿ ಭಾರತದ ಸಂಸತ್ತಿನ ಮೇಲೆ ನಡೆದ ದಾಳಿ ಮತ್ತು ಪುಲ್ವಾಮಾ ದಾಳಿಯ ರೂವಾರಿ ಆಗಿದ್ದಾನೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತ ಬಾಲಾಕೋಟ್ನಲ್ಲಿರುವ ಜೈಷ್ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಅದಾದ ಬಳಿಕ 2019ರ ಮೇ 1ರಂದು ವಿಶ್ವಸಂಸ್ಥೆ ಅಜರ್ನನ್ನ ಜಾಗತಿಕ ಉಗ್ರ ಎಂದು ಘೋಷಿಸಿತ್ತು.
1994ರಲ್ಲಿ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಅಜರ್ನನ್ನ ಬಂಧಿಸಲಾಗಿತ್ತು. ಆದರೆ 1999 ಡಿಸೆಂಬರ್ನಲ್ಲಿ ಭಾರತದ ವಿಮಾನ IC814 ಅನ್ನು ಹೈಜಾಕ್ ಮಾಡಿದಾಗ ಅಜರ್ನ್ನು ಬಿಡುಗಡೆ ಮಾಡಬೇಕೆಂದು ಅಪಹರಣಕಾರರು ಬೇಡಿಕೆಯೊಡ್ಡಿದ್ದರು. ವಿಮಾನದಲ್ಲಿದ್ದ ಪ್ರಯಾಣಿಕರನ್ನು ಒತ್ತೆಯಾಳುಗಳನ್ನಾಗಿಟ್ಟುಕೊಂಡು ಅಪಹರಣಕಾರರ ಒತ್ತಾಯಕ್ಕೆ ಮಣಿದು ಸರ್ಕಾರ ಅಜರ್ನನ್ನ ಬಿಡುಗಡೆ ಮಾಡಿತ್ತು.