– ದೇಶದ ಸಂದೇಶವನ್ನ ವಿಶ್ವಕ್ಕೆ ತಲುಪಿಸಲು ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಹೆಮ್ಮೆ: ಬ್ರಿಜೇಶ್ ಚೌಟ
ನವದೆಹಲಿ: `ಆಪರೇಷನ್ ಸಿಂಧೂರ'(Operation Sindoor) ಕಾರ್ಯಾಚರಣೆಯ ನಂತರದ ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ, ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ(Brijesh Chowta) ಅವರನ್ನು ಒಳಗೊಂಡ ಡಿಎಂಕೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು(All-Party Delegation) ಗುರುವಾರ ಬೆಳಗ್ಗೆ ವಿದೇಶಕ್ಕೆ ಪ್ರಯಾಣ ಬೆಳೆಸಿದೆ.
This is not just a delegation, this is the united voice of Bharat led by PM Shri @narendramodi.
And at this threshold of time, when our country is striving towards being Viksit Bharat, there is no way we can let terror target our people, prospects or progress.
The world needs… pic.twitter.com/oT4sDNe057
— Captain Brijesh Chowta ಕ್ಯಾಪ್ಟನ್ ಬ್ರಿಜೇಶ್ ಚೌಟ (@CaptBrijesh) May 22, 2025
ದೆಹಲಿ(Delhi) ವಿಮಾನ ನಿಲ್ದಾಣ ಮೂಲಕ ಬೆಳಗ್ಗೆ 11ಗಂಟೆಗೆ ಹೊರಟ ತಂಡದಲ್ಲಿ ಕ್ಯಾ. ಚೌಟ ಅವರ ಜೊತೆ ಡಿಎಂಕೆ ಪಕ್ಷದ ಸಂಸದೆ ಕನಿಮೋಳಿ, ಸಮಾಜವಾದಿ ಪಕ್ಷದ ರಾಜೀವ್ ರೈ, ನ್ಯಾಷನಲ್ ಕಾನ್ಫರೆನ್ಸ್ ಸಂಸದ ಮಿಯಾನ್ ಅಲ್ತಾಫ್ ಅಹ್ಮದ್, ಆರ್ಜೆಡಿ ಪಕ್ಷದ ಪ್ರೇಮ್ ಚಂದ್ ಗುಪ್ತಾ, ಎಎಪಿ ಪಕ್ಷದ ಅಶೋಕ್ ಮಿತ್ತಲ್, ನೇಪಾಳದ ಮಾಜಿ ರಾಯಭಾರಿ ಮಂಜೀವ್ ಪುರಿ ಹಾಗೂ ಫ್ರಾನ್ಸ್ನ ಮಾಜಿ ರಾಯಭಾರಿ ಜಾವೇದ್ ಅಶ್ರಫ್ ಇದ್ದರು. ಈ ನಿಯೋಗವು ಮೊದಲು ರಷ್ಯಾ(Russia) ದೇಶಕ್ಕೆ ತೆರಳುತ್ತಿದೆ. ನಂತರ ಸ್ಲೊವೇನಿಯಾ(ಮೇ 25), ಗ್ರೀಸ್(ಮೇ 27), ಲಾಟ್ವಿಯಾ(ಮೇ 29) ಮತ್ತು ಸ್ಪೇನ್(ಮೇ 31) ದೇಶಕ್ಕೆ ಭೇಟಿ ನೀಡಲಿದೆ. ಇದನ್ನೂ ಓದಿ: ಚಿಂತಾಮಣಿಯಲ್ಲಿ ವಿವಾದಿತ ಅಂಬೇಡ್ಕರ್ ಪ್ರತಿಮೆ ತೆರವು ವಿಚಾರ – ಬಂದ್ಗೆ ಮಿಶ್ರ ಪ್ರತಿಕ್ರಿಯೆ
ವಿದೇಶಕ್ಕೆ ತೆರಳುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ದಕ್ಷಿಣ ಕನ್ನಡ(Dakshina Kannada) ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ಮೊದಲ ಬಾರಿಗೆ ಸಂಸದನಾಗಿರುವ ಹಾಗೂ ಸೇನೆಯಲ್ಲಿ ಸೇವೆ ಸಲ್ಲಿಸಿದ ಓರ್ವ ಯೋಧನಾಗಿರುವ ನನಗೆ, ಭಯೋತ್ಪಾದನೆ ವಿರುದ್ಧ ಅದರಲ್ಲೂ ನಿರ್ದಿಷ್ಟವಾಗಿ ಪಾಕಿಸ್ತಾನ(Pakistan) ಪ್ರೇರಿತ ಜಿಹಾದಿ ಉಗ್ರಗಾಮಿತ್ವದ ಅಪಾಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಭಾರತದ ದೃಢ ಮತ್ತು ಒಗ್ಗಟ್ಟಿನ ಸಂದೇಶವನ್ನು ಜಾಗತಿಕ ಮಟ್ಟದಲ್ಲಿ ಸಾರುವುದಕ್ಕೆ ಈ ಅಪರೂಪದ ಅವಕಾಶ ದೊರಕಿದೆ. ನಿಯೋಗದ ಭಾಗವಾಗಿರುವುದು ಬಹಳ ಹೆಮ್ಮೆ ಮತ್ತು ಸೌಭಾಗ್ಯದ ಸಂಗತಿ ಎಂದರು. ಇದನ್ನೂ ಓದಿ: ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ – ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ ಓಪನ್
ಮೋದಿ ಅವರ ಸಂದೇಶದಂತೆ ಭಯೋತ್ಪಾದನೆ ಮತ್ತು ಮಾತುಕತೆ ಒಟ್ಟಿಗೆ ನಡೆಯಲು ಸಾಧ್ಯವಿಲ್ಲ. ಹಾಗೆಯೇ ಭಯೋತ್ಪಾದನೆ ಮತ್ತು ವ್ಯಾಪಾರ ಒಟ್ಟಿಗೆ ಸಾಗಲು ಸಾಧ್ಯವಿಲ್ಲ. ಅಷ್ಟೇ ಅಲ್ಲ ನೀರು ಮತ್ತು ರಕ್ತ ಎಂದಿಗೂ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು ಏರ್-ಸ್ಟ್ರಿಪ್ ನಿರ್ಮಾಣ: ಭೂಸ್ವಾಧೀನಕ್ಕೆ ಬಾಕಿ ಇರುವ 17 ಕೋಟಿ ಬಿಡುಗಡೆಗೆ ಕ್ರಮ
ಭಾರತದ ನಿಲುವು ಬಹಳ ಸ್ಪಷ್ಟವಾಗಿದ್ದು, ಹೀಗಿರುವಾಗ ಪಾಕಿಸ್ತಾನ ಹರಡಲು ಯತ್ನಿಸುತ್ತಿರುವ ಸುಳ್ಳಿನ ಕಥೆಯನ್ನು ಜಾಗತಿಕವಾಗಿಯೂ ಬಯಲಿಗೆಳೆಯಲಿದೆ. ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ದೃಢವಾಗಿದೆ. ನಮ್ಮ ದೇಶವು ವಿಕಸಿತ ಭಾರತದತ್ತ ಹೆಜ್ಜೆ ಹಾಕುತ್ತಿರುವ ಈ ಮಹತ್ವದ ಕಾಲಘಟ್ಟದಲ್ಲಿ, ನಮ್ಮ ದೇಶದ ಜನತೆ, ಭವಿಷ್ಯ ಮತ್ತು ಪ್ರಗತಿಯ ಮೇಲೆ ಭಯೋತ್ಪಾದನೆಯ ಕರಿನೆರಳು ಬೀಳಲು ನಾವೆಂದಿಗೂ ಬಿಡುವುದಿಲ್ಲ ಎಂದು ಹೇಳಿದರು.