ಶ್ರೀನಗರ: ಆಪರೇಷನ್ ಸಿಂಧೂರ (Operation Sindoor) ಪಾಕ್ಗೆ (Pakistan) ಸದಾ ಕಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಪಾಕಿಸ್ತಾನಕ್ಕೆ ತಿವಿದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಅವರು ಮಾತಾಡಿದರು. ಈ ವೇಳೆ, ಭಾರತದ ದಿಟ್ಟ ಉತ್ತರವನ್ನು ಪಾಕ್ ಸೇನೆ ಹಾಗೂ ಉಗ್ರರು ಊಹಿಸಿರಲಿಲ್ಲ. ಕೆಲವೇ ನಿಮಿಷದಲ್ಲಿ ನಡೆದ ಈ ದಾಳಿಯಲ್ಲಿ ದಶಕಗಳಿಂದ ನಿರ್ಮಾಣವಾಗಿದ್ದ ಉಗ್ರರ ಅಡಗುತಾಣಗಳು ನಾಶವಾಗಿವೆ. ಪಾಕ್ ಆಪರೇಷನ್ ಸಿಂಧೂರ ಹೆಸರನ್ನು ಕೇಳಿದಾಗಲೆಲ್ಲಾ, ಅದು ಅವಮಾನಕರ ಸೋಲನ್ನು ನೆನಪಿಸಿಕೊಳ್ಳುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ – ಅಶೋಕ ವಿಶ್ವವಿದ್ಯಾಲಯದ ಪ್ರೊಫೆಸರ್ ಅರೆಸ್ಟ್
ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿಯು ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಪ್ರವಾಸೋದ್ಯಮವನ್ನು ಹಾಳುಮಾಡುವ ಉದ್ದೇಶವನ್ನು ಹೊಂದಿತ್ತು. ನಾವು ಕಾಶ್ಮೀರದ ರಕ್ಷಣೆಗೆ ಬದ್ಧರಾಗಿದ್ದೇವೆ. ಇಲ್ಲಿನ ಬೆಳವಣೆಗೆ ತಡೆಯಲು ಯಾರಿಗೂ ಸಾಧ್ಯವಿಲ್ಲ ಎಂದಿದ್ದಾರೆ. ಇನ್ನೂ, ಇದೇ ವೇಳೆ, ಭಯೋತ್ಪಾದಕರ ವಿರುದ್ಧ ಹೋರಾಡಿ ಪ್ರಾಣ ಕಳೆದುಕೊಂಡ ಯುವಕ ಆದಿಲ್ನ ಧೈರ್ಯವನ್ನು ಮೋದಿ ಶ್ಲಾಘಿಸಿದ್ದಾರೆ.
ಏ.22 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಮೇ 6 ರ ಮಧ್ಯರಾತ್ರಿ ಪಾಕಿಸ್ತಾನದಲ್ಲಿನ ಭಯೋತ್ಪಾದಕರ ನೆಲೆಗಳ ಮೇಲೆ ವಾಯುದಾಳಿ ನಡೆಸಿತ್ತು. ಈ ದಾಳಿಯಲ್ಲಿ ಪಾಕ್ನ ಏರ್ ಬೇಸ್ ಹಾಗೂ ಹಲವು ಉಗ್ರರ ನೆಲೆಗಳು ಧ್ವಂಸವಾಗಿದ್ದವು. ಹಲವಾರು ಉಗ್ರರು ಬಲಿಯಾಗಿದ್ದರು. ಇದನ್ನೂ ಓದಿ: ʻಆಪರೇಷನ್ ಸಿಂಧೂರʼ ವೇಳೆ ಭಾರತ ಧ್ವಂಸಗೊಳಿಸಿದ್ದ ಮುರಿಡ್ಕೆ ಮಸೀದಿಯಲ್ಲಿ ಮತ್ತೆ ತಲೆಎತ್ತಿದ ಲಷ್ಕರ್ ಗುಂಪು; ವಿಡಿಯೋ ವೈರಲ್