Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 27 ಹಕ್ಕುದಾರರಿರುವ ಪಿತ್ರಾರ್ಜಿತ ಆಸ್ತಿಯನ್ನು ಒಬ್ಬನ ಸಹಿಯಿಂದ ಪಡೆದ ಸಿಎಂ, ಅಕ್ರಮವಾಗಿ ಜಮೀನು ಖರೀದಿ: ಆರ್‌.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 27 ಹಕ್ಕುದಾರರಿರುವ ಪಿತ್ರಾರ್ಜಿತ ಆಸ್ತಿಯನ್ನು ಒಬ್ಬನ ಸಹಿಯಿಂದ ಪಡೆದ ಸಿಎಂ, ಅಕ್ರಮವಾಗಿ ಜಮೀನು ಖರೀದಿ: ಆರ್‌.ಅಶೋಕ್

Bengaluru City

27 ಹಕ್ಕುದಾರರಿರುವ ಪಿತ್ರಾರ್ಜಿತ ಆಸ್ತಿಯನ್ನು ಒಬ್ಬನ ಸಹಿಯಿಂದ ಪಡೆದ ಸಿಎಂ, ಅಕ್ರಮವಾಗಿ ಜಮೀನು ಖರೀದಿ: ಆರ್‌.ಅಶೋಕ್

Public TV
Last updated: August 7, 2024 5:43 pm
Public TV
Share
3 Min Read
R Ashoka 1
SHARE

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಖರೀದಿಸಿದ ಜಮೀನು ಪಿತ್ರಾರ್ಜಿತ ಆಸ್ತಿಯಾಗಿದ್ದು, ಅದಕ್ಕೆ 27 ಹಕ್ಕುದಾರರಿದ್ದರೂ ಕೇವಲ ಒಬ್ಬರ ಬಳಿ ಸಹಿ ಹಾಕಿಸಿಕೊಳ್ಳಲಾಗಿದೆ. ಇದು ಸಂಪೂರ್ಣ ಅಕ್ರಮ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ (R.Ashok) ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು. ಜಮೀನಿನ ಮೂಲ ಹಕ್ಕುದಾರರು, ಇತಿಹಾಸದ ಕುರಿತು ವಿವರಿಸಿದರು. ಇದನ್ನೂ ಓದಿ: MUDA Scam | ಆರೋಪ ನಿರಾಧಾರ, ನೋಟಿಸ್‌ ನೀಡಿರುವುದು ಕ್ರಮಬದ್ದವಲ್ಲ: ರಾಜ್ಯಪಾಲರಿಗೆ ಸಿಎಂ ಉತ್ತರ

Siddaramaiah MUDA SCAM

ಸಿಎಂ ಸಿದ್ದರಾಮಯ್ಯ ಖರೀದಿಸಿದ ಜಾಗ ನಿಂಗ ಎಂಬುವರಿಗೆ ಸೇರಿದ ಜಮೀನಾಗಿದ್ದು, 1936 ರಲ್ಲಿ ನಿಂಗ ಜಮೀನು ಖರೀದಿಸಿದ್ದರು. ಅವರು 28 ವರ್ಷಗಳ ಹಿಂದೆ ನಿಧನರಾಗಿದ್ದು, ಅವರ ಪತ್ನಿ ನಿಂಗಮ್ಮ 1990 ರಲ್ಲಿ ಮೃತರಾಗಿದ್ದರು. ಇದು ನಿಂಗ ಮತ್ತು ನಿಂಗಮ್ಮ ಅವರ ಸ್ವಯಾರ್ಜಿತ ಆಸ್ತಿಯಾಗಿದ್ದು, ಅವರ ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಾಗಿದೆ. ನಿಂಗ ಅವರಿಗೆ ಮೂರು ಮಕ್ಕಳಿದ್ದು, ಅವರ ಕುಟುಂಬದವರು 27 ಜನರಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ದೇವರಾಜು ಎಂಬ ಒಬ್ಬ ವ್ಯಕ್ತಿಯಿಂದ ಮಾತ್ರ ಸಹಿ ಹಾಕಿಸಿಕೊಂಡಿದ್ದಾರೆ ಎಂದು ತಿಳಿಸಿದರು.

1968 ರಲ್ಲಿ ಸರ್ವೆ ಸಂಖ್ಯೆ 464 ರಲ್ಲಿ ನಿಂಗ ಅವರ ಪುತ್ರ ಮಲ್ಲಯ್ಯ ಅವರ ಹೆಸರಿಗೆ ಈ ಜಮೀನು ನೋಂದಣಿಯಾಗಿತ್ತು. 1990 ರಲ್ಲಿ ಒಟ್ಟು 462 ಎಕರೆ ಜಮೀನಿನಲ್ಲಿ ದೇವನೂರು ಬಡಾವಣೆ ಮುಡಾ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. ಬಳಿಕ ಜಮೀನು ಸಂಬಂಧ ದೇವರಾಜು ಅವರಿಗೆ ಮುಡಾದಿಂದ 3 ಲಕ್ಷ ರೂ. ಅವಾರ್ಡ್ ನೀಡಲಾಗಿತ್ತು. ಈ ಅವಾರ್ಡ್ ನೋಟಿಸ್‌ಗೆ ಮಲ್ಲಯ್ಯ ಸಹಿ ಹಾಕಿದ್ದರು. ನಂತರ 1998 ರಲ್ಲಿ ಮುಡಾ ಸರ್ವೆ ಸಂಖ್ಯೆ 464 ನ್ನು ಭೂ ಸ್ವಾಧೀನದಿಂದ ಕೈ ಬಿಟ್ಟಿತ್ತು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ರಾಜ್ಯಾದ್ಯಂತ ಮುಂದಿನ 5 ದಿನ ಮಳೆಯ ಮುನ್ಸೂಚನೆ

ಈ ಜಮೀನು 1998 ರಲ್ಲಿ ಮುಡಾದಿಂದ ಡಿ ನೋಟಿಫಿಕೇಶನ್‌ ಆಗಿತ್ತು. ಆಗ ಸಿದ್ದರಾಮಯ್ಯನವರೇ ಉಪಮುಖ್ಯಮಂತ್ರಿಯಾಗಿದ್ದರು. ತಂದೆ-ತಾಯಿ ಸತ್ತ ನಂತರ ಕುಟುಂಬದ ಎಲ್ಲರ ಸಹಿ ಪಡೆಯಬೇಕಾಗುತ್ತದೆ. 2004 ರಲ್ಲಿ ದೇವರಾಜು ಅವರಿಂದ ಸಿದ್ದರಾಮಯ್ಯ ಅವರ ಭಾಮೈದುನ ಮಲ್ಲಿಕಾರ್ಜುನ ಸ್ವಾಮಿ 3 ಎಕರೆ 16 ಗುಂಟೆ ಜಮೀನನ್ನು ಕ್ರಯಕ್ಕೆ ಪಡೆದು ಕಾನೂನು ಬಾಹಿರವಾಗಿ ನೋಂದಣಿ ಮಾಡಿಸಿಕೊಂಡಿದ್ದರು. 2005 ರಲ್ಲಿ ಇದು ಭೂ ಪರಿವರ್ತನೆಯಾಯಿತು. 2001 ರಲ್ಲೇ ಬಡಾವಣೆ ಮಾಡಲು ಇದನ್ನು ಎಲ್‌ & ಟಿಗೆ ನೀಡಲಾಗಿತ್ತು. ಅದಾದ ನಂತರ ಈ ಜಮೀನು ಪರಿವರ್ತನೆಯಾಗಿದೆ ಎಂದು ಹೇಳಿದರು.

R Ashoka

ಈ ಜಮೀನು ಮೂಲೆಯಲ್ಲಿದ್ದುದರಿಂದ ಇದು ಬೇಕಿಲ್ಲ ಎಂದು ಕೈ ಬಿಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಆದರೆ ಇದು ಮಧ್ಯಭಾಗದಲ್ಲಿ ಬರುತ್ತದೆ. ದಲಿತ ವ್ಯಕ್ತಿ ನಿಂಗನಿಗೆ ಸೇರಿದ ಜಮೀನಿನ ದಾಖಲೆಗಳ ವಿವರ ದೊಡ್ಡ ದೊಡ್ಡ ಹುದ್ದೆಗಳಲ್ಲಿದ್ದ ಸಿದ್ದರಾಮಯ್ಯನವರಿಗೆ ತಿಳಿಯಲೇ ಇಲ್ಲ. ಈ ಜಮೀನನ್ನು ಸಿದ್ದರಾಮಯ್ಯ ಪತ್ನಿಗೆ ಭಾವ ಅರಿಶಿನ ಕುಂಕುಮಕ್ಕೆ ನೀಡಿದ್ದಾರೆ. ಇದು ಪೂರ್ವ ಯೋಜಿತ ಅಕ್ರಮವಾಗಿದೆ ಎಂದರು.

ಸಿಎಂ ಸಿದ್ದರಾಮಯ್ಯ ಪತ್ನಿ 2014 ರಲ್ಲಿ ಮುಡಾಗೆ ಪತ್ರ ಬರೆದು ಬದಲಿ ಪರಿಹಾರ ಜಮೀನು ನೀಡುವಂತೆ ಕೋರಿದ್ದರು. ಇದಕ್ಕೆ ಉತ್ತರ ಬರೆದ ಮುಡಾ ಆಯುಕ್ತರು, ಬದಲಿ ಜಮೀನು ಇಲ್ಲವೆಂದು, ಅದಕ್ಕೆ ತತ್ಸಮಾನ ಜಮೀನು ನೀಡಲಾಗುವುದು ಎಂದು ತಿಳಿಸುತ್ತಾರೆ. ನಂತರ 2014 ರಲ್ಲಿ 50:50 ವಿಧಾನದಲ್ಲಿ ಪರಿಹಾರ ನೀಡಲಾಯಿತು. 2023 ರಲ್ಲಿ ನಗರಾಭಿವೃದ್ಧಿ ಇಲಾಖೆ ಇವೆಲ್ಲವೂ ನಿಯಮಬಾಹಿರ ಎಂದು ಆದೇಶ ಮಾಡಿತ್ತು ಎಂದು ತಿಳಿಸಿದರು. ಇದನ್ನೂ ಓದಿ: ಕಾಳಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಕುಸಿತ – ನೀರಿಗೆ ಬಿದ್ದ ಲಾರಿ, ಚಾಲಕನ ರಕ್ಷಣೆ

ಈ ಜಮೀನಿನ ಮಾಲೀಕತ್ವದ ವಿಷಯದಲ್ಲೇ ಇನ್ನೂ ತೀರ್ಮಾನ ಆಗಿಲ್ಲ. ಆದರೂ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರು ಅದನ್ನು ಪರಿಶೀಲಿಸಿಲ್ಲ. ಈ ಜಮೀನನ್ನು ಮೃತರಾದ ನಿಂಗ ಅವರ ಹೆಸರಿನಲ್ಲಿ ಡಿ ನೋಟಿಫೈ ಮಾಡಿದ್ದಾರೆ. ಬದಲಿ ಜಮೀನು ಪರಿಹಾರ ನೀಡುವುದಾದರೆ ಅದೇ ಜಾಗದಲ್ಲಿ ನಿವೇಶನ ನೀಡಬೇಕು. ಆದರೆ ಬೆಲೆಬಾಳುವ ಸೈಟುಗಳನ್ನು ನೀಡಿದ್ದಾರೆ. ಇದಕ್ಕೆ ಅಧಿಕಾರಿಗಳ ಮೇಲೆ ಯಾರು ಒತ್ತಡ ಹೇರಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ 40 ವರ್ಷಗಳ ರಾಜಕೀಯದಲ್ಲಿ ಕ್ಲೀನ್‌ ಎಂದು ಹೇಳಿ, ಕ್ಲೀನ್‌ ಆಗಿ 14 ಸೈಟುಗಳನ್ನು ನುಂಗಿದ್ದಾರೆ. ಈ ಹಿಂದೆ ರೀಡು ಪ್ರಕರಣದಲ್ಲಿ ಕೆಂಪಣ್ಣ ಆಯೋಗ ನೇಮಿಸಿ ಆರು ವರ್ಷ ಕಳೆದರೂ ವರದಿ ಬರಲಿಲ್ಲ. ಅದೇ ತಂತ್ರವನ್ನು ಪ್ರಯೋಗಿಸಿ ದೇಸಾಯಿ ಆಯೋಗ ರಚಿಸಿದ್ದು, ಇದಕ್ಕೆ 60 ವರ್ಷ ಅವಧಿ ನೀಡುತ್ತಾರಾ ಎಂದು ಸ್ಪಷ್ಟಪಡಿಸಬೇಕು ಎಂದರು.

ಕ್ಲೀನ್‌ ಎಂಬ ಪಟ್ಟವನ್ನು ರಾಜ್ಯದ ಜನರು ನೀಡಬೇಕಿದ್ದರೂ, ಮುಖ್ಯಮಂತ್ರಿಯವರು ತಮ್ಮನ್ನು ತಾವೇ ಕ್ಲೀನ್‌ ಎಂದು ಹೇಳಿಕೊಳ್ಳುತ್ತಿದ್ದಾರೆ. ಸದನದಲ್ಲಿ ಮಾತನಾಡಿದ್ದನ್ನು ಮರುದಿನ ಪತ್ರಿಕೆಗಳಲ್ಲಿ ಜಾಹೀರಾತು ನೀಡುತ್ತಾರೆ. ಹಣದ ಬಲ ಇದ್ದವರಿಗೆ ಮಾತ್ರ ಸದನದಲ್ಲಿ ಸ್ಥಾನ ಎಂದು ಅವರೇ ತೋರಿಸಿದಂತಾಗಿದೆ. ಈಗ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

TAGGED:MUDA Scamr ashoksiddaramaiahಆರ್‌.ಅಶೋಕ್‌ಮುಡಾ ಹಗರಣಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಕೇಸ್‌ – ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ

Public TV
By Public TV
4 minutes ago
delay in compensation for farmer dharwad taluk office computer furniture seized
Court

ರೈತನಿಗೆ ಪರಿಹಾರ ವಿಳಂಬ – ಧಾರವಾಡ ಉಪವಿಭಾಗಾಧಿಕಾರಿ ಕಚೇರಿ ಕಂಪ್ಯೂಟರ್‌, ಪೀಠೋಪಕರಣಗಳು ಜಪ್ತಿ

Public TV
By Public TV
6 minutes ago
Vaibhav Suryavanshi
Cricket

ವೈಭವ್ ಸೂರ್ಯವಂಶಿ ಬ್ಯಾಟ್‌ನಲ್ಲಿ AI ಚಿಪ್ ಇರಬಹುದು, ಲ್ಯಾಬ್ ಟೆಸ್ಟ್‌ಗೆ ಕಳಿಸಿ: ಪಾಕ್ ಕ್ರಿಕೆಟ್ ತಜ್ಞ

Public TV
By Public TV
11 minutes ago
hc balkrishana
Latest

ಸಿದ್ದರಾಮಯ್ಯ ನಂತರ ಸಿಎಂ ರೇಸ್‌ನಲ್ಲಿರೋದು ಡಿಕೆಶಿ ಮಾತ್ರ‌: ಹೆಚ್.ಸಿ.ಬಾಲಕೃಷ್ಣ

Public TV
By Public TV
43 minutes ago
virat kohli 3
Cricket

IPLನಲ್ಲಿ ಮತ್ತೊಂದು ರೆಕಾರ್ಡ್‌ ಬರೆಯಲು ಸಜ್ಜಾದ ಕೊಹ್ಲಿ -‌ ಆ ದಾಖಲೆಗೆ ಬೇಕು ಕೇವಲ 11 ರನ್

Public TV
By Public TV
1 hour ago
Surat man kills dietitian wife hides body in cement filled crate
Crime

ಪತ್ನಿಯನ್ನು ಕೊಂದು ಮರದ ಬಾಕ್ಸ್‌ಗೆ ಹಾಕಿ ಸಿಮೆಂಟ್‌ ತುಂಬಿದ ಪತಿ – ಚೀಟಿಯ ಸುಳಿವಿಂದ ಪ್ರಕರಣ ಬಯಲಿಗೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?