Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆ್ಯಸಿಡ್ ದಾಳಿ ಸಂತ್ರಸ್ತೆಯರಿಗೆ ನಿವೇಶನ, ಮನೆ ನೀಡಲು ಆದೇಶ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆ್ಯಸಿಡ್ ದಾಳಿ ಸಂತ್ರಸ್ತೆಯರಿಗೆ ನಿವೇಶನ, ಮನೆ ನೀಡಲು ಆದೇಶ: ಸಿಎಂ

Bengaluru City

ಆ್ಯಸಿಡ್ ದಾಳಿ ಸಂತ್ರಸ್ತೆಯರಿಗೆ ನಿವೇಶನ, ಮನೆ ನೀಡಲು ಆದೇಶ: ಸಿಎಂ

Public TV
Last updated: May 13, 2022 11:06 pm
Public TV
Share
2 Min Read
basavaraj bommai (1)
SHARE

ಬೆಂಗಳೂರು: ಆ್ಯಸಿಡ್ ದಾಳಿಗೆ ಒಳಗಾದ ಎಲ್ಲ ಹೆಣ್ಣುಮಕ್ಕಳಿಗೆ ಮನೆ, ನಿವೇಶನ ಹಾಗೂ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ 5 ಲಕ್ಷ ರೂ. ವರೆಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಕಂದಾಯ ಇಲಾಖೆಯ ಸಾಮಾಜಿಕ ಭದತ್ರೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ `ಹಲೋ ಕಂದಾಯ ಸಚಿವರೇ – 72 ಗಂಟೆಯಲ್ಲಿ ಮನೆ ಬಾಗಿಲಿಗೆ ಪಿಂಚಣಿ ಸಹಾಯವಾಣಿ’ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.  ಇದನ್ನೂ ಓದಿ; ಚಿನ್ನ, ಬೆಳ್ಳಿಯಲ್ಲ ಈಗ ನಿಂಬೆಹಣ್ಣಿನ ಮೇಲೆ ಕಳ್ಳರ ಕಣ್ಣು- 12 ಮೂಟೆ ನಿಂಬೆಹಣ್ಣು ಕಳವಾಗಿದ್ದೇಗೆ?

acid attack protest

ಆ್ಯಸಿಡ್ ದಾಳಿಗೆ ಒಳಗಾದವರು ಬಹಳಷ್ಟು ನೋವುಂಡಿರುತ್ತಾರೆ. ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗಿರುತ್ತಾರೆ. ಅವರ ನೆರವಿಗೆ ನಿಲ್ಲುವುದು ಸರ್ಕಾರದ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಅವರ ಮಾಸಾಶನವನ್ನು 3,000 ದಿಂದ 10 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ಜೊತೆಗೆ ಈಗ ಅವರಿಗೆ ಬದುಕು ಸಾಗಿಸಲು ಮನೆ ಹಾಗೂ ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಅಧಿಕಾರ ವಿಕೇಂದ್ರೀಕರಣ: ರಾಜ್ಯ ಆಳುವುದು ಅಂದರೆ ಜನರ ಸಮಸ್ಯೆಗಳನ್ನು ಅರಿತು ಹೃದಯದಿಂದ ಪರಿಹಾರ ಕೊಡುವುದು. ಅನುಷ್ಠಾನ ಮಾಡುವುದು ಆಡಳಿತ. ಈ ಚಿಂತನೆಯಿಂದ ಕಂದಾಯ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಕಾರ್ಯರೂಪಕ್ಕೆ ಬಂದಿದೆ. ಇದರಿಂದ ಜನರ ಅಲೆದಾಟ ತಪ್ಪುತ್ತದೆ. 50 ಲಕ್ಷಕ್ಕಿಂತ ಹೆಚ್ಚು ಕುಟುಂಬಗಳು ಇದರ ಪ್ರಯೋಜನ ಪಡೆಯಲಿವೆ. ವ್ಯವಸ್ಥೆ ಸರಿ ಇಲ್ಲದ್ದರಿಂದ ಇದನ್ನು ಮಾಡಬೇಕಾಗಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ರಾಜ್ ಠಾಕ್ರೆ ಬೊಗಳುವ ನಾಯಿ – ಪರೋಕ್ಷವಾಗಿ ಅಕ್ಬರುದ್ದೀನ್ ಟಾಂಗ್

acid-attack

ಸಾಮಾಜಿಕ ಭದ್ರತಾ ಯೋಜನೆಗಳಡಿಯ ಪಿಂಚಣಿಗಳು ನೇರವಾಗಿ ಮನೆ ಬಾಗಿಲಿಗೆ ಮುಟ್ಟಬೇಕು. ಸಮಾಜದಲ್ಲಿ ಆಶ್ರಯ, ಸಹಾಯವಿಲ್ಲದವರಿಗೆ ಪಿಂಚಣಿ ನೀಡಬೇಕು. ಅದಕ್ಕಾಗಿ ವ್ಯವಸ್ಥೆ ಸರಿಪಡಿಸಲು ಕಂದಾಯ ಇಲಾಖೆಯನ್ನು ಚುರುಕುಗೊಳಿಸಲಾಗಿದೆ. ವ್ಯವಸ್ಥೆಯನ್ನು ಸರಿಪಡಿಸಿ ಈ ಕೆಲಸವನ್ನು ಮಾಡಲಾಗುತ್ತಿದೆ. ಇದು ಜನಪರವಾದ ಆಡಳಿತ. ಮನೆ ಬಾಗಿಲಿಗೇ ಸರ್ಕಾರ ಬರುವುದು ಅಧಿಕಾರದ ವಿಕೇಂದ್ರೀಕರಣ. ವಿಧಾನಸಭೆಯಲ್ಲಿ ಅಧಿಕಾರ ಹೆಪ್ಪುಗಟ್ಟಬಾರದು. ಅಧಿಕಾರ ನೇರವಾಗಿ ಜೇನುತುಪ್ಪದಂತೆ ಹರಿಯುವಂತಿರಬೇಕು. ಈ ನಿಟ್ಟಿನಲ್ಲಿ ಇಂದಿನ ಕಾರ್ಯಕ್ರಮ ನೇರವಾಗಿ ಜನರಿಗೆ ತಲುಪುವಂಥದ್ದು ಎಂದು ಶ್ಲಾಘಿಸಿದ್ದಾರೆ.

ACID ATTACK 2s
ಸಾಂದರ್ಭಿಕ ಚಿತ್ರ

ಜನರೊಂದಿಗೆ ಸಂಪರ್ಕವಿದ್ದರೆ ಜನಪರ ಆಡಳಿತ: ಆಡಳಿತ ಮತ್ತು ರಾಜಕಾರಣ ಜನಪರವಾಗಿರಬೇಕು. ಆಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ಅಧಿಕಾರಕ್ಕೆ ಬಂದಾಗ ತಮ್ಮ ಸ್ವಂತ ಅಧಿಕಾರದ ಬಗ್ಗೆ ಚಿಂತೆ ಮಾಡುವವರು ದೇಶವನ್ನು ಹಾನಿ ಮಾಡಿದ್ದಾರೆ. ಅಧಿಕಾರ ಸಿಕ್ಕಾಗ ಜನಪರ ಕೆಲಸ ಮಾಡಿ ನೊಂದವರಿಗೆ ಸಹಾಯ ಮಾಡಿದವರನ್ನು ಜನ ಸದಾ ಕಾಲ ನೆನಪಿಟ್ಟುಕೊಳ್ಳುತ್ತಾರೆ. ಸಮಸ್ಯೆಗಳೊಂದಿಗೆ ಬದುಕುವುದಕ್ಕೂ, ಚರ್ಚೆ ಮಾಡುವುದಕ್ಕೂ ಅಂತರವಿದೆ. ಆಡಳಿತ ಜನರ ಬಳಿಗೆ ಸಮಸ್ಯೆಯ ಬಳಿಗೆ ಹೋದಾಗ ನೈಜ ಪರಿಹಾರ ಸಿಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಧಿಕಾರ ಸ್ವೀಕರಿಸಿದ ದಿನ ನನ್ನ ಮೊದಲನೇ ನಿರ್ಣಯ ರೈತರ ಮಕ್ಕಳಿಗೆ ವಿದ್ಯಾ ನಿಧಿ ಯೋಜನೆ ಘೋಷಣೆ ಮಾಡಿದ್ದು. ಹೆಣ್ಣುಮಕ್ಕಳಿಗೂ ಇದನ್ನು ವಿಸ್ತರಿಸಲಾಗಿದೆ. ಸಂಧ್ಯಾ ಸುರಕ್ಷಾ, ಅಂಗವಿಕಲರ, ವಿಧವಾ ವೇತನವನ್ನು ಹೆಚ್ಚಳ ಮಾಡಲಾಗಿದೆ. ಇನ್ನೊಬ್ಬರನ್ನು ಬೇಡದಂತೆ ಜೀವನ ನಡೆಸಲು ಈ ಬದಲಾವಣೆ ತರಲಾಗಿದೆ ಎಂದಿದ್ದಾರೆ.

TAGGED:acid attackBasavaraj Bommaichief ministerDecentralizationKarnataka Revenue DepartmentSocial Security Schemeಅಧಿಕಾರ ವಿಕೇಂದ್ರೀಕರಣಆ್ಯಸಿಡ್ ದಾಳಿಕಂದಾಯ ಇಲಾಖೆನಿವೇಶನಪಿಂಚಣಿ ಹಣಬಸವರಾಜ ಬೊಮ್ಮಾಯಿಮುಖ್ಯಮಂತ್ರಿಸಾಮಾಜಿಕ ಭದ್ರತಾ ಯೋಜನೆ
Share This Article
Facebook Whatsapp Whatsapp Telegram

Cinema news

yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories

You Might Also Like

Shivalingegowda
Bengaluru City

ಕುಮಾರಸ್ವಾಮಿ ಎರಡು ಬಾರಿ ಲೀಸ್ ಬೇಸ್‌ನಲ್ಲಿಯೇ ಸಿಎಂ ಆಗಿದ್ದು: ಸಿದ್ದು ಸಮರ್ಥಿಸಿ ಶಿವಲಿಂಗೇಗೌಡ ಕಿಡಿ

Public TV
By Public TV
58 seconds ago
KJ George
Bengaluru City

ಜಿಬಿಎ 5 ಪಾಲಿಕೆಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ: ಕೆ.ಜೆ.ಜಾರ್ಜ್

Public TV
By Public TV
9 minutes ago
G Parameshwar
Districts

ಕ್ರೀಡಾಪಟುಗಳು ಸೇರಿ ನನ್ನ ಹೆಸರು ಇಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ? – ಪರಮೇಶ್ವರ್

Public TV
By Public TV
23 minutes ago
Ramalinga Reddy
Bengaluru City

ಬೆಂಗಳೂರಿನ ಆಸ್ತಿ ಅಡಮಾನ ಇಟ್ಟಿದ್ದು ಬಿಜೆಪಿ ಸಾಧನೆ – ರಾಮಲಿಂಗಾರೆಡ್ಡಿ

Public TV
By Public TV
40 minutes ago
ಸಾಂದರ್ಭಿಕ ಚಿತ್ರ
Bagalkot

10 ವರ್ಷದ ಬಳಿಕ ಚಾಲುಕ್ಯ ಉತ್ಸವ – ಜ. 19 ರಂದು ಚಾಲನೆ

Public TV
By Public TV
47 minutes ago
Bengaluru Kempegowda International Airport 4
Bengaluru City

2025ರಲ್ಲಿ 4.3 ಕೋಟಿ ಪ್ರಯಾಣಿಕರ ಓಡಾಟ – ದಾಖಲೆ ಬರೆದ ಬೆಂಗಳೂರು ವಿಮಾನ ನಿಲ್ದಾಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?