– ಡಿಕೆಶಿ ಸೂಚನೆ ಮೇರೆಗೆ 750 ಕೋಟಿ ರೂ. ಬಿಡುಗಡೆಗೆ ಬಿಬಿಎಂಪಿ ಅಸ್ತು
ಬೆಂಗಳೂರು: ಅಮೃತ ನಗರೋತ್ಥಾನ ಯೋಜನೆ ಅಡಿಯಲ್ಲಿ ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿನ ಕಾಮಗಾರಿಗಳ ಹಣ ಬಿಡುಗಡೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶಿಸಿದೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸೂಚನೆ ಮೇರೆಗೆ ಬಿಬಿಎಂಪಿ ಮುಖ್ಯ ಆಯುಕ್ತರು ಅಮೃತ ನಗರೋತ್ಥಾನ ಯೋಜನೆ ಅಡಿ ಕೈಗೊಂಡ ಎಲ್ಲಾ ಕಾಮಗಾರಿಗಳ ಹಣ ಬಿಡುಗಡೆಗೆ ಸೂಚನೆ ನೀಡಿದ್ದಾರೆ. 2025-26ನೇ ಸಾಲಿನ 1ನೇ ಕಂತಿನ ಮೊತ್ತ 750 ಕೋಟಿ ರೂ. ಬಿಡುಗಡೆಗೆ ಆದೇಶ ಹೊರಡಿಸಿದ್ದಾರೆ.
ಬಿಬಿಎಂಪಿ ಮುಖ್ಯ ಆಯುಕ್ತರ ಕೋರಿಕೆಯ ಡಿಸಿಎಂ ಗುತ್ತಿಗೆದಾರರಿಗೆ ಬಿಡುಗಡೆಗೊಳಿಸಲು ಸೂಚನೆ ನೀಡಿದ್ದರು. ಈ ಹಿನ್ನೆಲೆ ಹಣ ಬಿಡುಗಡೆಗೆ ಆದೇಶಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.