ಬೆಂಗಳೂರು: ನಗರದ ಎಲ್ಲಾ ಹೋಟೆಲ್, ಬಾರ್ & ರೆಸ್ಟೋರೆಂಟ್, ಕ್ಲಬ್, ಪಬ್ಗಳಲ್ಲಿನ ಅಕ್ರಮವಾಗಿ ನಿಗದಿಪಡಿಸಿರುವ ಧೂಮಪಾನ ಸ್ಥಳಗಳು ಅಥವಾ ಕೊಠಡಿಗಳನ್ನು ತೆರವುಗೊಳಿಸಬೇಕು ಎಂದು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಕೋಟ್ಪಾ ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ ನೀಡಲಾಗಿದೆ. ಬಿಬಿಎಂಪಿ ಎನ್ಒಸಿಯಲ್ಲಿ ತಿಳಿಸಿದ ಮಾನದಂಡಗಳಂತೆ ಸ್ಥಳ ನಿಗದಿ ಮಾಡಬೇಕು ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಪುಲ್ವಾಮಾ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿಲ್ಲ- ಕೈ ಸಂಸದ ವಿವಾದಾತ್ಮಕ ಹೇಳಿಕೆ
ಧೂಮಪಾನ ನಿಗದಿ ಸ್ಥಳಗಳಲ್ಲಿ ಆಹಾರ, ನೀರು ಪಾನೀಯ, ತಂಬಾಕು ಉತ್ಪನ್ನ ಒದಗಿಸುವುದನ್ನು ನಿಷೇಧಿಸಲಾಗಿದೆ. ಸೂಚನಾ ಫಲಕ ಅಳವಡಿಸಿ ಜಾಗೃತಿ ಮೂಡಿಸಬೇಕು ಎಂದು ಸೂಚಿಸಲಾಗಿದೆ. ಅಲ್ಲದೇ ನಿಗದಿತ ಧೂಮಪಾನ ಸ್ಥಳಗಳಲ್ಲಿ ಆಹಾರ ಮತ್ತು ಪಾನೀಯಗಳ ಸೇವನೆ ಲಭ್ಯವಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.
ಧೂಮಪಾನಿಗಳಲ್ಲದವರನ್ನು ಹಾನಿಕಾರ ತಂಬಾಕು ಹೊಗೆಯಿಂದ ರಕ್ಷಿಸುವುದು ಮುಖ್ಯವಾಗಿದೆ. ಹೀಗಾಗಿ ಹಲವು ಕಟ್ಟುನಿಟ್ಟಿನ ಸೂಚನೆಗಳನ್ನು ಪೊಲೀಸ್ ಆಯುಕ್ತ ದಯಾನಂದ್ ನೀಡಿದ್ದಾರೆ. ಇದನ್ನೂ ಓದಿ: ಚುನಾವಣೆಗೆ ಖರ್ಚು ಮಾಡಲು ನಮ್ಮ ಪಕ್ಷದಲ್ಲಿ ಹಣವಿಲ್ಲ: ಖರ್ಗೆ
ಮೇಲೆ ತಿಳಿಸಿದ ಮಾನದಂಡಗಳು ಸರಿಯಾಗಿ ಪಾಲನೆ ಆಗುತ್ತಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ನಿಯಮಿತವಾಗಿ ತಪಾಸಣೆ ನಡೆಸಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.