Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಪ್ರೀಂ ತೀರ್ಪಿನ ಬಳಿಕ ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ನಿರ್ಧಾರ: ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸುಪ್ರೀಂ ತೀರ್ಪಿನ ಬಳಿಕ ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ನಿರ್ಧಾರ: ಮೋದಿ

Latest

ಸುಪ್ರೀಂ ತೀರ್ಪಿನ ಬಳಿಕ ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ನಿರ್ಧಾರ: ಮೋದಿ

Public TV
Last updated: January 1, 2019 9:06 pm
Public TV
Share
5 Min Read
modi
SHARE

– ಕಾಂಗ್ರೆಸ್ ಚಿಂತನೆಯೇ ಒಂದು, ಸಂಸ್ಕೃತಿಯೇ ಒಂದು
– ವರ್ಷದ ಮೊದಲ ದಿನವೇ ಮಾಧ್ಯಮಕ್ಕೆ ಸಂದರ್ಶನ
– ಸಾಲಮನ್ನಾ ರಾಜಕೀಯ ನಾಟಕ
– ಉರ್ಜಿತ್ ಪಟೇಲ್ 7-8 ತಿಂಗಳ ಮೊದಲೇ ರಾಜೀನಾಮೆ ನೀಡಿದ್ರು

ನವದೆಹಲಿ: ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ, ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂದು ಟೀಕೆಗೆ ಗುರಿಯಾಗುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಹೊಸ ವರ್ಷದ ಮೊದಲ ದಿನವೇ ಸಂದರ್ಶನ ನೀಡಿ ಸುದ್ದಿಯಾಗಿದ್ದಾರೆ. ತಮ್ಮ ಸಂದರ್ಶನಲ್ಲಿ ಕಾಂಗ್ರೆಸ್ ಸೇರಿದಂತೆ ಮಿತ್ರಪಕ್ಷಗಳ ಧೋರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಹೊಸ ವರ್ಷದಂದೆ ಎಎನ್‍ಐ ಸುದ್ದಿಸಂಸ್ಥೆಗೆ ಸಂದರ್ಶನ ನೀಡುವ ಮೂಲಕ ಲೋಕಸಭಾ ಚುನಾವಣೆಗೆ ವೇದಿಕೆಯನ್ನು ಸಿದ್ಧಪಡಿಸಿಕೊಂಡಿದ್ದಾರೆ.

95 ನಿಮಿಷದ ಸಂದರ್ಶನದಲ್ಲಿ ಮೋದಿ ಹೇಳಿದ ಪ್ರಮುಖ ವಿಚಾರಗಳು ಇಲ್ಲಿದೆ

1. ಕಾಂಗ್ರೆಸ್ ವಿರುದ್ಧ ಟೀಕೆ:
ದೇಶದ ಮೊದಲ ಕುಟುಂಬ ಎಂದು ಕರೆದುಕೊಂಡಿದ್ದ ಕುಟುಂಬ ಸದಸ್ಯರು ಇಂದು ಜಾಮೀನಿನ ಮೇಲೆ ಹೊರಗಿದ್ದಾರೆ. ಅವರ ಮೇಲೆ ಆರ್ಥಿಕ ಅಪರಾಧದ ಪ್ರಕರಣಗಳು ದಾಖಲಾಗಿದೆ. ಆದರೆ ಅವರಿಗೆ ಬೆಂಬಲವಾಗಿರುವ ಕೆಲವರು ಅದನ್ನು ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಸಂಸ್ಕೃತಿಯನ್ನು ತೊಲಗಿಸುವುದು ನಮ್ಮ ಗುರಿಯಾಗಿದ್ದು, ಇದಕ್ಕಾಗಿಯೇ ಕಾರ್ಯನಿರ್ವಸುತ್ತಿದ್ದೇವೆ. ದೇಶದಲ್ಲಿ ಕಾಂಗ್ರೆಸ್ ಸಂಸ್ಕೃತಿ ಇಲ್ಲವಾಗಿಸುವುದೇ ನಮ್ಮ ಉದ್ದೇಶ. ಕಾಂಗ್ರೆಸ್ ಚಿಂತನೆಯೇ ಒಂದು, ಸಂಸ್ಕೃತಿಯೇ ಒಂದು ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಕ್ತ ಭಾರತ ಎಂಬುವುದಕ್ಕೆ ಹೊಸ ಅರ್ಥ ನೀಡಿದರು.

#PMtoANI: Even Congress people say Congress is a thought, a culture. When I say Congress-mukt, I want to rid the country from this culture and this sort of thinking. And I say that Congress too needs to be mukt of this Congress culture. pic.twitter.com/BXoELcK36H

— ANI (@ANI) January 1, 2019

2. ಅಯೋಧ್ಯೆ ರಾಮಮಂದಿರ:
ಸುಪ್ರೀಂ ಕೋರ್ಟ್ ಅಯೋಧ್ಯೆ ಕುರಿತು ತೀರ್ಪು ನೀಡಿದ ಬಳಿಕ ಸರ್ಕಾರ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ನ್ಯಾಯಾಲಯದಲ್ಲಿ ರಾಮಮಂದಿರಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವಿಳಂಬವಾಗಲು ಕಾಂಗ್ರೆಸ್ ವಕೀಲರು ಕಾರಣ. ರಾಮಮಂದಿರ ಬಿಜೆಪಿ ಭಾವಾತ್ಮಕ ವಿಚಾರವಾಗಿದ್ದು ಅದನ್ನು ನಾವು ನಿರ್ಲಕ್ಷ್ಯ ವಹಿಸಿಲ್ಲ. ರಾಮಮಂದಿರವನ್ನು ಸಂವಿಧಾನದ ವ್ಯಾಪ್ತಿಯಲ್ಲಿ ಇತ್ಯರ್ಥ ಪಡಿಸುವುದಾಗಿ ಬಿಜೆಪಿ ಪ್ರಾಣಾಳಿಕೆಯಲ್ಲಿ ತಿಳಿಸಿದೆ. ಹೀಗಾಗಿ ನಾವು ನ್ಯಾಯಾಂಗದಲ್ಲಿ ನಂಬಿಕೆ ಇಟ್ಟಿದ್ದೇವೆ. ಸುಪ್ರೀಂ ಕೋರ್ಟ್ ತೀರ್ಪಿನ ನಂತರವಷ್ಟೇ ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆಯನ್ನು ಹೊರಡಿಸುವ ನಿರ್ಧಾರವನ್ನು ಕೈಗೊಳ್ಳಲಾಗುವುದು.

Lord Rama statue in Ayodhya 1

3. ಪಂಚರಾಜ್ಯಗಳ ಚುನಾವಣೆ:
ಪಂಚರಾಜ್ಯ ಚುನಾವಣೆಗಳು ಇಬ್ಬರ ಮೇಲೆ ಮಾತ್ರ ನಡೆದಿಲ್ಲ. ಬಿಜೆಪಿ ವಿಶ್ವದ ಅತೀ ದೊಡ್ಡ ಪಕ್ಷವಾಗಿದ್ದು, ಕಾರ್ಯಕರ್ತರ ಪಕ್ಷವಾಗಿದೆ. ಛತ್ತೀಸ್‍ಗಢದಲ್ಲಿ ಆಡಳಿತ ವಿರೋಧ ಅಲೆ ಸ್ಪಷ್ಟವಾಗಿ ಕಾಣಿಸಿಕೊಂಡಿದೆ. 15 ವರ್ಷಗಳ ಆಡಳಿತ ವಿರೋಧಿ ಅಲೆಯೇ ನಮ್ಮ ಸೋಲಿಗೆ ಕಾರಣವಾಗಿದೆ. ಆದ್ದರಿಂದ ನಾವು ಆಡಳಿತ ವಿರೋಧಿ ಅಲೆ ವಿರುದ್ಧ ಹೋರಾಟ ನಡೆಸಿದ್ದೇವೆ. ಇನ್ನುಳಿದ ಎರಡು ರಾಜ್ಯಗಳಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಆಗಿದೆ. 2019 ಲೋಕಸಭಾ ಚುನಾವಣೆ ಜನತಾ ಹಾಗೂ ಮಹಾಘಟಬಂಧನ್ ನಡುವೆ ನಡೆಯುತ್ತದೆ.

#PMtoANI on loss in 5 states: Telangana and Mizoram, nobody gave BJP any chance. In Chhattisgarh a clear mandate was given, BJP lost. But in 2 states there was a hung assembly. Secondly,15 years of anti-incumbency was being fought by our people.We are discussing what was lacking pic.twitter.com/629OXQhRDV

— ANI (@ANI) January 1, 2019

4. ಸಾಲಮನ್ನಾ ರಾಜಕೀಯ ನಾಟಕ:
ಸಾಲಮನ್ನಾ ರಾಜಕೀಯ ನಾಟಕವಾಗಿದ್ದು, ರೈತರು ಹೆಚ್ಚು ಖಾಸಗಿ ಸಾಲ ಪಡೆಯುತ್ತಾರೆ. ಕಾಂಗ್ರೆಸ್ ಪಕ್ಷ ಎಲ್ಲಾ ರೈತರ ಸಾಲಮನ್ನಾ ಮಾಡಿಲ್ಲ. ಕೇವಲ ಸುಳ್ಳನ್ನೇ ಪ್ರಚಾರ ಮಾಡುತ್ತಿದ್ದಾರೆ. ರೈತರಿಗೆ ನೀರು, ಉತ್ತಮ ಮಾರುಕಟ್ಟೆ, ಉತ್ಪನ್ನಗಳಿಗೆ ಸರಿಯಾದ ಬೆಲೆ ಸಿಗುವಂತೆ ಮಾಡಿ ಸಮಗ್ರ ಅಭಿವೃದ್ಧಿ ಆಗುವಂತೆ ಮಾಡುವತ್ತ ನಮ್ಮ ಕಾರ್ಯ ಮುಂದುವರಿದಿದೆ. ದೇಶದ ಸಂಚಾರ ವ್ಯವಸ್ಥೆಯಲ್ಲಿ ಹೊಸ ನಾಂದಿ ಹಾಡಿದ್ದೇವೆ. ಇದರಿಂದ ಉತ್ಪನ್ನಗಳ ಲಭ್ಯತೆಯ ವೇಗ ಹೆಚ್ಚಾಗುತ್ತದೆ. ರೈತರು ಸಾಲವೇ ಪಡೆಯದಂತೆ ಮಾಡುವುದು ನಮ್ಮ ಕಾರ್ಯದ ಉದ್ದೇಶ ಎಂದರು.

#PMtoANI on loan waivers by Congress state Govts: To say a lie and mislead, that is what I called lollipop. Like saying 'we have waived all farm loans'. The truth is that nothing like that has happened. Please see their own circulars, they should not mislead. pic.twitter.com/BOISilifuf

— ANI (@ANI) January 1, 2019

5. ಆರ್ಥಿಕ ಅಪರಾಧಿಗಳು ಭಾರತಕ್ಕೆ ವಾಪಸ್:
ದೇಶ ಬಿಟ್ಟು ತೆರಳಿದ ಎಲ್ಲಾ ಆರ್ಥಿಕ ಅಪರಾಧಿಗಳನ್ನು ವಾಪಸ್ ಕರೆತರಲಾಗುವುದು. ಈ ಸಂಬಂಧ ಕಾನೂನು ಪ್ರಕ್ರಿಯೆ ಮತ್ತು ರಾಜತಾಂತ್ರಿಕ ಪ್ರಕ್ರಿಯೆಗಳು ನಡೆಯುತ್ತಿದೆ. ಈಗಾಗಲೇ ತನಿಖಾ ಸಂಸ್ಥೆಗಳು ಅಕ್ರಮ ಎಸಗಿದವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿವೆ. ಇಂದು ಬಾರದೇ ಇದ್ದರೂ ನಾಳೆ ಎಲ್ಲ ಆರ್ಥಿಕ ಅಪರಾಧಿಗಳನ್ನು ಕರೆತರಲಾಗುವುದು.

ಭ್ರಷ್ಟಚಾರದ ವಿರುದ್ಧ ಬಿಜೆಪಿಯ ಹೋರಾಟ ಮುಂದುವರೆಯುತ್ತದೆ. ಜಿಎಸ್‍ಟಿ ತೆರಿಗೆ ವ್ಯವಸ್ಥೆಯನ್ನು ಸರಳಿಕೃತಗೊಳಿಸಿದೆ. ತೆರಿಗೆ ವ್ಯವಸ್ಥೆಯನ್ನು ಕ್ರಮಬದ್ಧಗೊಳಿಸಿದೆ. ದೇಶದ ಮಧ್ಯಮ ವರ್ಗದ ಆಕಾಂಕ್ಷೆಗಳಿಗೆ ನಾವು ಈ ಮೂಲಕ ರೆಕ್ಕೆಗಳನ್ನು ನೀಡಿದ್ದೇವೆ. ಸರ್ಕಾರದ ಹೆಚ್ಚಿನ ಯೋಜನೆಗಳು ಮಧ್ಯಮ ವರ್ಗದ ಜನಕ್ಕೆ ಹೆಚ್ಚು ಲಾಭ ನೀಡಿದೆ.

626916 triple talaq

6. ತ್ರಿವಳಿ ತಲಾಖ್:
ಹಲವು ಮುಸ್ಲಿಮ್ ರಾಷ್ಟ್ರಗಳು ತ್ರಿವಳಿ ತಲಾಖ್ ನಿಷೇಧಿಸಿವೆ. ಪಾಕಿಸ್ತಾನದಲ್ಲೂ ತಲಾಖ್ ನಿಷೇಧಗೊಂಡಿದೆ. ಇಲ್ಲಿ ಪ್ರಮುಖವಾಗಿ ಇರುವಂತಹದ್ದು ಲಿಂಗ ಸಮಾನತೆ ಮತ್ತು ಸಾಮಾಜಿಕ ನ್ಯಾಯ. ಇದರಲ್ಲಿ ಧಾರ್ಮಿಕ ನಂಬಿಕೆ ವಿಚಾರ ಬರುವುದಿಲ್ಲ. ಹೀಗಾಗಿ ಈ ವಿಚಾರವನ್ನು ಪ್ರತ್ಯೇಕವಾಗಿ ನೋಡಬೇಕು.

7. ಶಬರಿಮಲೆ ವಿವಾದ:
ಕೆಲವೊಂದು ದೇವಾಲಯಗಳು ತನ್ನದೇ ಸಂಪ್ರದಾಯವನ್ನು ಪಾಲಿಸಿಕೊಂಡು ಬಂದಿದೆ. ಕೆಲವು ದೇವಾಲಯಗಳಲ್ಲಿ ಪುರುಷರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಶಬರಿಮಲೆ ಪ್ರಕರಣ ಬಂದಾಗ ಮಹಿಳಾ ನ್ಯಾಯಾಧೀಶರು ಕೆಲವು ಅಭಿಪ್ರಾಯವನ್ನು ವ್ಯಕ್ತಪಡಿಸಿ ಸಲಹೆಯನ್ನು ನೀಡಿದ್ದಾರೆ. ಹೀಗಾಗಿ ಈ ವಿಚಾರ ಚರ್ಚೆಯಾಗಬೇಕು.

#WATCH #PMtoANI on different stand of BJP on triple talaq&Sabarimala: These are two separate things.Most Islamic countries have banned triple talaq. So it is not a matter of religion or faith. It is an issue of gender equality,matter of social justice. It is not an issue of faith pic.twitter.com/EA655dDqTO

— ANI (@ANI) January 1, 2019

8. ನೋಟು ನಿಷೇಧ:
2016ರಲ್ಲಿ ನಮ್ಮ ಸರ್ಕಾರ ನೀಡಿದ ಶಾಕ್ ಎನ್ನುವ ಆರೋಪವನ್ನು ತಿರಸ್ಕರಿಸಿದ ಅವರು, ಇದು ಪೂರ್ವನಿರ್ಧಾರದಂತೆ ಹೇಳುವ ಜಾತಕವಲ್ಲ. ನಾವು ಎರಡು ವರ್ಷದ ಹಿಂದೆ ಜನರಿಗೆ ಎಚ್ಚರಿಕೆ ನೀಡುತ್ತಾ ಬಂದಿದ್ದೇವೆ. ಕಪ್ಪು ಹಣ ಇರುವ ಮಂದಿಗೆ ದಂಡವನ್ನು ಪಾವತಿಸಿ ಠೇವಣಿ ಇಡುವಂತೆ ಹೇಳಿದ್ದೇವು. ಹೀಗಾಗಿ ಹಲವು ಮಂದಿ ಸ್ವಯಂಪ್ರೇರಿತವಾಗಿ ದಂಡವನ್ನು ಪಾವತಿಸಿದ್ದಾರೆ.

9. ಉರ್ಜಿತ್ ಪಟೇಲ್ ರಾಜೀನಾಮೆ:
ಆರ್‌ಬಿಐ ಗವರ್ನರ್ ಅಗಿದ್ದ ಉರ್ಜಿತ್ ಪಟೇಲ್ ತನ್ನ ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಮೊದಲೇ ಹೇಳಿದ್ದರು. ಮೊದಲ ಬಾರಿಗೆ ಈ ವಿಚಾರವನ್ನು ನಾನು ಈಗ ಹೇಳುತ್ತಿದ್ದು, 7 -8 ತಿಂಗಳ ಹಿಂದೆಯೇ ಅವರು ರಾಜೀನಾಮೆ ನೀಡುತ್ತೇನೆ ಎಂದು ಹೇಳುತ್ತಾ ಬಂದಿದ್ದರು. ಅಷ್ಟೇ ಅಲ್ಲದೇ ಬರಹದಲ್ಲೇ ರಾಜೀನಾಮೆಯನ್ನು ನೀಡಿದ್ದರು. ಇದರಲ್ಲಿ ಯಾವುದೇ ರಾಜಕೀಯ ಒತ್ತಡ ಇಲ್ಲ. ಆರ್‌ಬಿಐ ಗವರ್ನರ್ ಆಗಿ ಉರ್ಜಿತ್ ಪಟೇಲ್ ಉತ್ತಮ ನಿರ್ವಹಣೆ ಮಾಡಿದ್ದಾರೆ.

RBI URJITH PATEL

10. ಸರ್ಜಿಕಲ್ ಸ್ಟ್ರೈಕ್:
ಪಾಕಿಸ್ತಾನದ ವಿರುದ್ಧ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಉರಿ ದಾಳಿಗೆ ತಿರುಗೇಟು ನೀಡಲು ನಡೆಸಿದ್ದು, ಈ ವೇಳೆ ಭಾರತೀಯ ಯೋಧರಿಗೆ ಬೆಳಗಾಗುವ ಮುನ್ನ ವಾಪಸ್ ಬನ್ನಿ ಎಂದು ಮಾತ್ರ ತಿಳಿಸಿದ್ದೆ. ಕಾರ್ಯಾಚರಣೆ ಯಶಸ್ವಿಯಾದರೂ, ವಿಫಲವಾದರೂ ದೇಶದ ಸೈನಿಕರಿಗೆ ಆಪಾಯ ಆಗಬಾರದು ಎಂಬುದು ನನ್ನ ಉದ್ದೇಶವಾಗಿತ್ತು. ಅಂದು ನಾನು ಇಡೀ ರಾತ್ರಿ ಪ್ರತಿ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದೆ. ಬೆಳಗಾಗಿ 1 ಗಂಟೆಯಾದ ಬಳಿಕ ಸೈನ್ಯದಿಂದ ಸಂದೇಶ ಬಂತು. ಆ ವೇಳೆಗೆ ಎಲ್ಲಾ ಸೈನಿಕರು ಕ್ಯಾಪ್ ಸೇರಿದ್ದರು. ಬಳಿಕವೇ ನನಗೆ ಸಮಾಧಾನ ಆಗಿತ್ತು. ಸರ್ಜಿಕಲ್ ಸ್ಟ್ರೈಕ್ ಬಗ್ಗೆ ದೇಶದ ಜನತೆಗೆ ತಿಳಿಸುವ ಮೊದಲೇ ಪಾಕಿಸ್ತಾನಕ್ಕೆ ತಿಳಿಸಿದ್ದೇವು. ಆದರೆ ಈ ಬಗ್ಗೆ ದೇಶದ ಕೆಲ ಜನ ಸಂದೇಹ ವ್ಯಕ್ತಪಡಿಸಿದ್ದು ದುರಾದೃಷ್ಟಕರ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:2019ElectionsbjpcongressformerGathbandhangstindian armyLoan WaiversOrdinancepm narendra modiRam templerbiSabarimalatriple talaqUrjit Patelಆಯೋಧ್ಯೆಕಾಂಗ್ರೆಸ್ರಾಮಮಂದಿರಲೋಕಸಭಾ ಚುನಾವಣೆಸುಗ್ರೀವಾಜ್ಞೆ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

ಸಾಂದರ್ಭಿಕ ಚಿತ್ರ
Bengaluru City

ಜಕ್ಕೂರಿನಲ್ಲಿ ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಕ್ಲೋಸ್‌ ಡೋರ್‌ ಮೀಟಿಂಗ್‌

Public TV
By Public TV
8 minutes ago
Baldota Factory
Districts

ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ – ಮಂಗಳವಾರ ಖಾಸಗಿ ಶಾಲೆಗಳಿಗೆ ರಜೆ

Public TV
By Public TV
34 minutes ago
Rahul Gandhi Gym Trainer Mohammad Deepak
Latest

ನಿಮ್ಮ ಜಿಮ್‌ಗೆ ಸೇರುತ್ತೇನೆ: ಜಿಮ್ ಟ್ರೈನರ್ ಮೊಹಮ್ಮದ್ ದೀಪಕ್ ಭೇಟಿಯಾದ ರಾಹುಲ್ ಗಾಂಧಿ

Public TV
By Public TV
1 hour ago
Indias Big Decolonisation Move Chakravarti Rajagopalachari replaces Lutyens at Rashtrapati Bhavan Delhi 1
Latest

ವಸಾಹತುಶಾಹಿ ವಿರುದ್ಧ ಕೇಂದ್ರದ ಸಮರ – ಲುಟ್ಯೆನ್ಸ್ ಪ್ರತಿಮೆ ತೆಗೆದು ರಾಜಗೋಪಾಲಾಚಾರಿ ಪುತ್ಥಳಿ ಅನಾವರಣ

Public TV
By Public TV
2 hours ago
School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
3 hours ago
opd hospital Karnataka
Latest

ಮಾ.11 ರಿಂದ ಒಪಿಡಿ ಸೇವೆ ಬಂದ್‌ – ಸರ್ಕಾರದ ವಿರುದ್ಧ ಸಿಡಿದ ವೈದ್ಯರು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?