ದರ್ಶನ್ ಅಭಿನಯದ ಒಡೆಯರ್ ಚಿತ್ರದ ವಿರುದ್ಧ ಸಂಘಟನೆಗಳಿಂದ ದೂರು

Public TV
1 Min Read
darshan pratham 1

ಮೈಸೂರು: ಸ್ಯಾಂಡಲ್‍ವುಡ್ ನಲ್ಲಿ ಮತ್ತೊಂದು ಟೈಟಲ್ ವಿವಾದ ಶುರುವಾಗಿದೆ. ನಟ ದರ್ಶನ ಅಭಿನಯದ ‘ಒಡೆಯರ್’ ಚಿತ್ರದ ಹೆಸರು ಬದಲಾವಣೆ ಮಾಡಬೇಕೆಂದು ಎರಡು ಸಂಘಟನೆಯ ಸದಸ್ಯರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಒಡೆಯರ್ ಎಂಬ ಪದ ಮೈಸೂರು ಅರಸರ ಸ್ವತ್ತು. ನಮಗೆ ಅವರ ಮೇಲೆ ಅಪಾರ ಗೌರವ ಅಭಿಮಾನವಿದೆ. ನಮ್ಮ ನಾಡಿನ ನೆಲ ಜಲ ವಿಚಾರದಲ್ಲಿ ಅವರ ಕೊಡುಗೆ ಅಪಾರವಿದೆ. ಮೈಸೂರು ಜನತೆ ಅರಸರನ್ನ ಭಗವಂತನ ರೀತಿ ಕಾಣುತ್ತೇವೆ. ಚಿತ್ರದಲ್ಲಿ ರೌಡಿಂ, ಹಾಸ್ಯ, ವ್ಯಾಪರಿ ಚಿತ್ರಗಳಿಗೆ ಒಡೆಯರ್ ಹೆಸರು ಇಡಲು ಬಿಡುವುದಿಲ್ಲ. ಟೈಟಲ್ ಬದಲಾಯಿಸದಿದ್ದರೆ ಚಿತ್ರಿಕರಣಕ್ಕೆ ಅಡ್ಡಿ ಪಡಿಸುವುದಾಗಿ ಎಚ್ಚರಿಸುತ್ತಿದ್ದೇವೆ ಎಂದು ಕನ್ನಡ ಕ್ರಾಂತಿದಳ ಸಂಘಟನೆ ಮೈಸೂರಿನ ಕೆ.ಆರ್. ಠಾಣೆಯಲ್ಲಿ ಚಿತ್ರತಂಡದ ವಿರುದ್ಧ ದೂರು ದಾಖಲಿಸಿದೆ.

MYS MOVIE COMPLAINT 1

ಮೈಸೂರಿನ ಕೆ.ಆರ್.ಪೊಲೀಸ್ ಠಾಣೆಯಲ್ಲೇ ಅರಸು ಯುವಜನ ವೇದಿಕೆ ಒಡೆಯರ್ ಹೆಸರನ್ನು ಬದಲಾವಣೆ ಮಾಡಬೇಕೆಂದು ಆಗ್ರಹಿಸಿ ದೂರು ದಾಖಲಿಸಿದೆ. ಈ ಹಿಂದೆ ಮೈಸೂರಿನಲ್ಲಿ ಕನ್ನಡ ಕ್ರಾಂತಿ ದಳದಿಂದ `ಒಡೆಯರ್ ಟೈಟಲ್‍ಗೆ ವಿರೋಧ ವ್ಯಕ್ತಪಡಿಸಿ ಈ ಶೀರ್ಷಿಕೆಯನ್ನ ಹಿಂಪಡೆಯುವಂತೆ ಆಗ್ರಹಿಸಿತ್ತು.

ನಾಡು ನುಡಿ ಸೇವೆಗಾಗಿ ಮೈಸೂರು ಒಡೆಯರ್ ವಂಶಸ್ಥರ ಸೇವೆ ಅಪಾರವಾಗಿದೆ. ಹೀಗಾಗಿ ಒಡೆಯರ್ ಹೆಸರಲ್ಲಿ ಕಮರ್ಷಿಯಲ್ ಸಿನಿಮಾ ಮಾಡೋದು ಖಂಡನೀಯ ಎಂದು ಹೇಳಿ ಸಂಘಟನೆಗಳು ಚಿತ್ರಕ್ಕೆ ವಿರೋಧ ವ್ಯಕ್ತಪಡಿಸಿವೆ.

ದರ್ಶನ್ ಹುಟ್ಟುಹಬ್ಬದ ದಿನ ಅವರ ಮುಂದಿನ ಚಿತ್ರ ಒಡೆಯರ್ ಶೀರ್ಷಿಕೆ ಬಹಿರಂಗವಾಗಿತ್ತು. ಸಂದೇಶ್ ನಾಗರಾಜ್ ನಿರ್ಮಿಸುತ್ತಿರುವ ಒಡೆಯರ್ ಚಿತ್ರವನ್ನ ಎಂ.ಡಿ ಶ್ರೀಧರ್ ನಿರ್ದೇಶಿಸಲಿದ್ದಾರೆ.

MYS MOVIE COMPLAINT 2

Share This Article
Leave a Comment

Leave a Reply

Your email address will not be published. Required fields are marked *