ಕ್ಯಾಲಿಫೋರ್ನಿಯಾದ ಬೆವರ್ಲಿ ಹಿಲ್ಸ್ ನಲ್ಲಿ ಇಂದು ಆಸ್ಕರ್ (Oscar) ಪ್ರಶಸ್ತಿಯ ನಾಮ ನಿರ್ದೇಶನ (Nomination) ಘೋಷಣೆ ಕಾರ್ಯಕ್ರಮ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಇಂದು ಸಂಜೆ 7 ಗಂಟೆಯ ಹೊತ್ತಿಗೆ ಈ ಪ್ರಕ್ರಿಯೆ ನಡೆಯಲಿದ್ದು, ಯಾವೆಲ್ಲ ಸಿನಿಮಾಗಳು ನಾಮಿನೇಷನ್ ಆಗಲಿವೆ ಎನ್ನುವ ಕುತೂಹಲ ಮೂಡಿದೆ. ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ, ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರಗಳು ಕೂಡ ಈ ಬಾರಿ ರೇಸ್ ನಲ್ಲಿ ಇರುವುದರಿಂದ ನಾಮ ನಿರ್ದೇಶನ ಪಟ್ಟಿಯಲ್ಲಿ ಇವುಗಳಿಗೆ ಸ್ಥಾನ ಸಿಗಲಿದೆಯಾ ಎಂದು ಕಾದು ನೋಡಬೇಕು.
ಈ ಬಾರಿಯ ಪ್ರಶಸ್ತಿಗಾಗಿ ಒಟ್ಟು ಮುನ್ನೂರು ಸಿನಿಮಾಗಳನ್ನು ಆಯ್ಕೆ ಮಾಡಲಾಗಿದೆ. ಮುನ್ನೂರು ಸಿನಿಮಾಗಳಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆಯಲಿದೆ. ನಾಮಿನೇಷನ್ ಗೆ ಆಯ್ಕೆಯಾದ ಸಿನಿಮಾಗಳಲ್ಲಿ ಮತ್ತೆ ಆಸ್ಕರ್ ಪ್ರಶಸ್ತಿಗಾಗಿ ಆಯ್ಕೆ ನಡೆಯುತ್ತದೆ. ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾದ ಸಿನಿಮಾಗಳನ್ನು ಮಾರ್ಚ್ 12ರಂದು ಘೋಷಿಸಲಾಗುವುದು. ಇಂದು ಕೇವಲ ನಾಮ ನಿರ್ದೇಶನಗೊಂಡ ಸಿನಿಮಾಗಳನ್ನು ಮಾತ್ರ ಘೋಷಿಸಲಾಗುತ್ತದೆ. ಇದನ್ನೂ ಓದಿ: ವಿನಯ್ ರಾಜ್ಕುಮಾರ್ಗೆ ನಾಯಕಿಯಾದ `ವಿಕ್ರಮ್’ ನಟಿ ಸ್ವಾತಿಷ್ಟ ಕೃಷ್ಣನ್
ಕನ್ನಡದಿಂದ ಕಾಂತಾರ (Kantara)ಮತ್ತು ವಿಕ್ರಾಂತ್ ರೋಣ (Vikrant Rona) ಸ್ಪರ್ಧೆಯಲ್ಲಿ ಇದ್ದರೆ, ತೆಲುಗು ಸಿನಿಮಾ ರಂಗದಿಂದ ಆರ್.ಆರ್.ಆರ್ (RRR), ತಮಿಳಿನಿಂದ ಇರುವಿನ್ ನಿಲಳ್ ಹಾಗೂ ರಾಕೆಟ್ರಿ ದಿ ನಂಭಿ ಎಫೆಕ್ಟ್ ಚಿತ್ರಗಳು ಸ್ಪರ್ಧೆ ಮಾಡುತ್ತಿವೆ. ಹಿಂದಿಯಿಂದ ಗಂಗೂಬಾಯಿ ಕಾಠಿಯಾವಾಡಿ ಹಾಗೂ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗಳಿವೆ. ಗುಜರಾತಿನಿಂದ ಛೆಲ್ಲೋ ಶೋ, ಚಿತ್ರವೊಂದನ್ನು ಕಳುಹಿಸಲಾಗಿದೆ. ಮಿ ವಸಂತ್ ರಾವ್, ದಿ ನೆಕ್ಸ್ಸಟ್ ಮಾರ್ನಿಂಗ್, ತುಜೆ ಸಾಥಿ ಕಹಿ ಸೇರಿದಂತೆ ಭಾರತದಿಂದಲೇ ಹಲವು ಚಿತ್ರಗಳು ಸ್ಪರ್ಧಾ ಕಣದಲ್ಲಿ ಇವೆ. ಇವುಗಳಲ್ಲಿ ಯಾವೆಲ್ಲ ಚಿತ್ರಗಳು ನಾಮಿನೇಷನ್ ಸುತ್ತಿಗೆ ಅರ್ಹತೆ ಪಡೆಯುತ್ತವೆ ಎನ್ನುವುದು ಸಂಜೆ 7 ಗಂಟೆಯ ನಂತರ ಗೊತ್ತಾಗಲಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k