Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಮಕ್ಕಳು ಲೆಹೆಂಗಾ ಧರಿಸಿ ಶಾಲೆಗೆ ಹೋಗ್ತಾರೆ: ಹಿಜಬ್‌ ವಿರುದ್ಧ ಬಿಜೆಪಿ ಶಾಸಕ ಹೇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಮ್ಮ ಮಕ್ಕಳು ಲೆಹೆಂಗಾ ಧರಿಸಿ ಶಾಲೆಗೆ ಹೋಗ್ತಾರೆ: ಹಿಜಬ್‌ ವಿರುದ್ಧ ಬಿಜೆಪಿ ಶಾಸಕ ಹೇಳಿಕೆ

Latest

ನಮ್ಮ ಮಕ್ಕಳು ಲೆಹೆಂಗಾ ಧರಿಸಿ ಶಾಲೆಗೆ ಹೋಗ್ತಾರೆ: ಹಿಜಬ್‌ ವಿರುದ್ಧ ಬಿಜೆಪಿ ಶಾಸಕ ಹೇಳಿಕೆ

Public TV
Last updated: January 30, 2024 8:07 am
Public TV
Share
2 Min Read
hijab row rajasthan
SHARE

– ಕರ್ನಾಟಕ ಆಯ್ತು.. ಈಗ ರಾಜಸ್ಥಾನದಲ್ಲಿ ಹಿಜಬ್‌ ವಿವಾದ

ಜೈಪುರ: ಹಿಜಬ್‌ (Hijab) ವಿವಾದವು ಈಗ ಕರ್ನಾಟಕದಿಂದ ರಾಜಸ್ಥಾನ (Rajasthan) ಪ್ರವೇಶಿಸಿದೆ. ಹಿಜಬ್‌ ವಿರುದ್ಧ ಮಾತನಾಡುವಾಗ ಬಿಜೆಪಿ ಶಾಸಕ ಬಾಲ ಮುಕುಂದ್ ಆಚಾರ್ಯ, ನಮ್ಮ ಮಕ್ಕಳು ಲೆಹೆಂಗಾ ಧರಿಸಿ ಶಾಲೆಗೆ ಹೋಗಬಹುದು ಎಂದು ಹೇಳಿಕೆ ನೀಡಿದ್ದಾರೆ.

ಬಿಜೆಪಿಯ ಬಾಲ ಮುಕುಂದ್ ಆಚಾರ್ಯ (Bal Mukund Acharya) ಅವರು ಗಣರಾಜ್ಯೋತ್ಸವದ ವೇಳೆ ವಾಲ್ಡ್ ಸಿಟಿಯ ಗಂಗಾಪೋಲ್ ಪ್ರದೇಶದ ಸರ್ಕಾರಿ ಶಾಲೆಗೆ ಭೇಟಿ ನೀಡಿದ್ದರು. ಅಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಬ್‌ ಧರಿಸಿದ್ದನ್ನು ಕಂಡು ವಸ್ತ್ರ ಸಂಹಿತೆ ಬಗ್ಗೆ ಪ್ರಶ್ನಿಸಿದ್ದರು. ಇದನ್ನೂ ಓದಿ: ಹಿಜಬ್‌ ನಿಷೇಧ ವಾಪಸ್‌ ಪಡೆಯೋಕೆ ಕೇವಲ 30 ನಿಮಿಷ ಸಾಕು: ಸಿದ್ದರಾಮಯ್ಯ ವಿರುದ್ಧ ಓವೈಸಿ ವಾಗ್ದಾಳಿ

Bal Mukund Acharya

ಇವರ ಹೇಳಿಕೆಯನ್ನು ವಿರೋಧಿಸಿ ಕೆಲ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ‘ಧಾರ್ಮಿಕ ಘೋಷಣೆಗಳನ್ನು ಕೂಗುವಂತೆ ಶಾಸಕರು ನಮ್ಮನ್ನು ಒತ್ತಾಯಿಸಿದರು. ಕೆಲವು ಹುಡುಗಿಯರು ಮೌನವಾಗಿದ್ದಾಗ, ಅವರಿಗೆ ಘೋಷಣೆ ಕೂಗುವಂತೆ ಸೂಚಿಸಿದರು. ಅಷ್ಟೇ ಅಲ್ಲ, ಶಾಲೆಯಲ್ಲಿ ಹಿಜಾಬ್ ಧರಿಸುವುದನ್ನು ಅನುಮತಿಸಲಾಗುವುದಿಲ್ಲ’ ಎಂದಿದ್ದರು ಎಂದು ವಿದ್ಯಾರ್ಥಿಯೊಬ್ಬರು ತಿಳಿಸಿದ್ದಾರೆ.

ಈ ವೇಳೆ ಪ್ರತಿಭಟನಾನಿರತರನ್ನು ಪೊಲೀಸರು ಮನವೊಲಿಸಿದ್ದಾರೆ. ಬಳಿಕ ವಿದ್ಯಾರ್ಥಿಗಳು ಪ್ರತಿಭಟನಾ ಸ್ಥಳದಿಂದ ಹೊರಟರು. ಇದಾದ ಬಳಿಕ ಶಾಸಕ ಆಚಾರ್ಯ ತಮ್ಮ ನಿಲುವನ್ನು ಸ್ಪಷ್ಟಪಡಿಸುವ ವೀಡಿಯೊವನ್ನು ಬಿಡುಗಡೆ ಮಾಡಿದರು. ‘ಇವರಿಗೆ ಎರಡು ವಿಭಿನ್ನ ವಸ್ತ್ರ ಸಂಹಿತೆ ಇದೆಯೇ ಎಂದು ನಾನು ಪ್ರಾಂಶುಪಾಲರನ್ನು ಕೇಳಿದ್ದೆ. ಗಣರಾಜ್ಯೋತ್ಸವದ ಸಮಾರಂಭ ಅಥವಾ ಯಾವುದೇ ಸರ್ಕಾರಿ ಕಾರ್ಯಕ್ರಮ ನಡೆದಾಗ, ಬೇರೆ ಡ್ರೆಸ್ ಕೋಡ್ ಇದೆಯೇ? ಹಾಗಾದರೆ, ನಮ್ಮ ಮಕ್ಕಳೂ (ಹಿಂದೂ ಹೆಣ್ಣುಮಕ್ಕಳು) ಲೆಹೆಂಗಾ ಚುನ್ನಿ ಹಾಕುತ್ತಾರೆ’ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಹಿಜಬ್‌ ವಾಪಸ್‌- ಕಾನೂನು ಪರಿಶೀಲಿಸಿಯೇ ಕ್ರಮ: ಪರಮೇಶ್ವರ್‌

hijab 1

ಕಿಶನ್‌ಪೋಲ್‌ನ ಕಾಂಗ್ರೆಸ್ ಶಾಸಕ ಅಮೀನ್ ಕಗಾಜಿ ಅವರು, ಬಿಜೆಪಿ ಶಾಸಕ ಸೌಹಾರ್ದ ಮತ್ತು ಕೋಮು ಸೌಹಾರ್ದವನ್ನು ನಾಶಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅವರ ವಿರುದ್ಧ ಫೆ.2ರೊಳಗೆ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಹಿಜಬ್ ಮೊಘಲರು ತಂದ ‘ಗುಲಾಮಗಿರಿಯ ಸಂಕೇತ’. ಕೆಲವು ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಹಿಜಬ್ ಧರಿಸೋದಕ್ಕೆ ಅನುಮತಿ ಇಲ್ಲ. ಅದು ಇಲ್ಲಿಯೂ ಆಗಬಾರದು ಎಂದು ಬಿಜೆಪಿ ಸಚಿವ ಕಿರೋರಿ ಲಾಲ್ ಮೀನಾ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಹಿಜಬ್‌ ನಮ್ಮ ಹಕ್ಕು, ಇನ್ಮುಂದೆ ಅಣ್ಣ-ತಮ್ಮಂದಿರಂತೆ ಬದುಕೋಣ – ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ಮುಸ್ಕಾನ್‌

HIJAB SUPREME COURT

ಬಿಜೆಪಿ ಶಾಸಕ ಬಾಲ್ ಮುಕುಂದ್ ಆಚಾರ್ಯ ವಿವಾದಿತ ಹೇಳಿಕೆಗಳನ್ನು ನೀಡಿರುವುದು ಇದೇ ಮೊದಲಲ್ಲ. ಕಳೆದ ತಿಂಗಳು ಚುನಾವಣೆಯಲ್ಲಿ ಗೆದ್ದ ನಂತರ, ಅಕ್ರಮ ಮಾಂಸದಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೀದಿಗಿಳಿದಿದ್ದರು.

ಕರ್ನಾಟಕದಲ್ಲೇನಾಗಿತ್ತು?
ಹಿಜಬ್ ಸಮಸ್ಯೆ ಎರಡು ವರ್ಷಗಳಿಂದ ಕರ್ನಾಟಕವನ್ನು ತಲ್ಲಣಗೊಳಿಸಿತ್ತು. 2022 ರಲ್ಲಿ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಶಿಕ್ಷಣ ಸಂಸ್ಥೆಗಳಲ್ಲಿ ಶಿರಸ್ತ್ರಾಣವನ್ನು ನಿಷೇಧಿಸಿತ್ತು. ಇದು ಭಾರೀ ಗದ್ದಲಕ್ಕೆ ಕಾರಣವಾಯಿತು. ಕರ್ನಾಟಕ ಹೈಕೋರ್ಟ್ ಹಿಜಬ್‌ ನಿಷೇಧದ ಸರ್ಕಾರದ ಆದೇಶವನ್ನು ಎತ್ತಿಹಿಡಿದಿತ್ತು. ಹಿಜಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ. ಆದರೆ ಶಿಕ್ಷಣ ಸಂಸ್ಥೆಗಳು ತಮ್ಮ ಎಲ್ಲಾ ವಿದ್ಯಾರ್ಥಿಗಳಿಗೆ ಡ್ರೆಸ್ ಕೋಡ್ ಅನ್ನು ನಿರ್ಧರಿಸಬಹುದು ಎಂದು ಹೇಳಿತ್ತು. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಈಗ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಪ್ರಕರಣ ಈಗ ಸುಪ್ರೀಂ ಅಂಗಳದಲ್ಲಿದೆ. ಇದನ್ನೂ ಓದಿ: PublicTV Explainer: ಇರಾನ್‌ನಲ್ಲಿ ಹಿಜಬ್‌ ವಿರುದ್ಧದ ಹೋರಾಟದ ಹೊತ್ತಲ್ಲೇ ನೂರಾರು ಶಾಲಾ ವಿದ್ಯಾರ್ಥಿನಿಯರಿಗೆ ವಿಷವಿಕ್ಕಿದ ದುರುಳರು – ಏನಾಗ್ತಿದೆ ಅಲ್ಲಿ?

TAGGED:BJP MLAHijablehengarajasthanಬಿಜೆಪಿ ಶಾಸಕರಾಜಸ್ಥಾನಲೆಹೆಂಗಾಹಿಜಬ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Banashankari temple Bengaluru
Bengaluru City

ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿತು ಯುದ್ಧದ ಬಿಸಿ

Public TV
By Public TV
21 minutes ago
Vijayapura Fire Accident
Districts

ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ – ಹೊತ್ತಿಯುರಿದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು

Public TV
By Public TV
42 minutes ago
Mukesh Ambani Reliance Donald Trump
Latest

ಅಮೆರಿಕದಲ್ಲಿ ರಿಲಯನ್ಸ್‌ನಿಂದ ಹೊಸ ತೈಲ ಸಂಸ್ಕರಣಾ ಘಟಕ: ಟ್ರಂಪ್‌ ಘೋಷಣೆ

Public TV
By Public TV
1 hour ago
Mandya Crime
Crime

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ, ಲವ್ವರ್ಸ್‌ ಅರೆಸ್ಟ್

Public TV
By Public TV
1 hour ago
ಸಾಂದರ್ಭಿಕ ಚಿತ್ರ
Latest

ಇರಾನ್‌ನಿಂದ ಖಡಕ್‌ ಪ್ರತಿಕ್ರಿಯೆ – ತೈಲ ಟ್ಯಾಂಕರ್‌ ಕುರಿತ ಅಮೆರಿಕದ ಪೋಸ್ಟ್‌ ಡಿಲೀಟ್‌

Public TV
By Public TV
2 hours ago
Punjab Accident Foreign Womem
Latest

ರಸ್ತೆ ದಾಟುವಾಗ ಕಾರು ಡಿಕ್ಕಿ – 14 ಅಡಿ ಎತ್ತರದಿಂದ ಹಾರಿ ಬಿದ್ದ ವಿದೇಶಿ ಯುವತಿ, ಸ್ಥಳದಲ್ಲೇ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?