Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಮಕ್ಕಳು ಲೆಹೆಂಗಾ ಧರಿಸಿ ಶಾಲೆಗೆ ಹೋಗ್ತಾರೆ: ಹಿಜಬ್‌ ವಿರುದ್ಧ ಬಿಜೆಪಿ ಶಾಸಕ ಹೇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಮ್ಮ ಮಕ್ಕಳು ಲೆಹೆಂಗಾ ಧರಿಸಿ ಶಾಲೆಗೆ ಹೋಗ್ತಾರೆ: ಹಿಜಬ್‌ ವಿರುದ್ಧ ಬಿಜೆಪಿ ಶಾಸಕ ಹೇಳಿಕೆ

Latest

ನಮ್ಮ ಮಕ್ಕಳು ಲೆಹೆಂಗಾ ಧರಿಸಿ ಶಾಲೆಗೆ ಹೋಗ್ತಾರೆ: ಹಿಜಬ್‌ ವಿರುದ್ಧ ಬಿಜೆಪಿ ಶಾಸಕ ಹೇಳಿಕೆ

Public TV
Last updated: January 30, 2024 8:07 am
Public TV
Share
2 Min Read
hijab row rajasthan
SHARE

– ಕರ್ನಾಟಕ ಆಯ್ತು.. ಈಗ ರಾಜಸ್ಥಾನದಲ್ಲಿ ಹಿಜಬ್‌ ವಿವಾದ

ಜೈಪುರ: ಹಿಜಬ್‌ (Hijab) ವಿವಾದವು ಈಗ ಕರ್ನಾಟಕದಿಂದ ರಾಜಸ್ಥಾನ (Rajasthan) ಪ್ರವೇಶಿಸಿದೆ. ಹಿಜಬ್‌ ವಿರುದ್ಧ ಮಾತನಾಡುವಾಗ ಬಿಜೆಪಿ ಶಾಸಕ ಬಾಲ ಮುಕುಂದ್ ಆಚಾರ್ಯ, ನಮ್ಮ ಮಕ್ಕಳು ಲೆಹೆಂಗಾ ಧರಿಸಿ ಶಾಲೆಗೆ ಹೋಗಬಹುದು ಎಂದು ಹೇಳಿಕೆ ನೀಡಿದ್ದಾರೆ.

ಬಿಜೆಪಿಯ ಬಾಲ ಮುಕುಂದ್ ಆಚಾರ್ಯ (Bal Mukund Acharya) ಅವರು ಗಣರಾಜ್ಯೋತ್ಸವದ ವೇಳೆ ವಾಲ್ಡ್ ಸಿಟಿಯ ಗಂಗಾಪೋಲ್ ಪ್ರದೇಶದ ಸರ್ಕಾರಿ ಶಾಲೆಗೆ ಭೇಟಿ ನೀಡಿದ್ದರು. ಅಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಬ್‌ ಧರಿಸಿದ್ದನ್ನು ಕಂಡು ವಸ್ತ್ರ ಸಂಹಿತೆ ಬಗ್ಗೆ ಪ್ರಶ್ನಿಸಿದ್ದರು. ಇದನ್ನೂ ಓದಿ: ಹಿಜಬ್‌ ನಿಷೇಧ ವಾಪಸ್‌ ಪಡೆಯೋಕೆ ಕೇವಲ 30 ನಿಮಿಷ ಸಾಕು: ಸಿದ್ದರಾಮಯ್ಯ ವಿರುದ್ಧ ಓವೈಸಿ ವಾಗ್ದಾಳಿ

Bal Mukund Acharya

ಇವರ ಹೇಳಿಕೆಯನ್ನು ವಿರೋಧಿಸಿ ಕೆಲ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ‘ಧಾರ್ಮಿಕ ಘೋಷಣೆಗಳನ್ನು ಕೂಗುವಂತೆ ಶಾಸಕರು ನಮ್ಮನ್ನು ಒತ್ತಾಯಿಸಿದರು. ಕೆಲವು ಹುಡುಗಿಯರು ಮೌನವಾಗಿದ್ದಾಗ, ಅವರಿಗೆ ಘೋಷಣೆ ಕೂಗುವಂತೆ ಸೂಚಿಸಿದರು. ಅಷ್ಟೇ ಅಲ್ಲ, ಶಾಲೆಯಲ್ಲಿ ಹಿಜಾಬ್ ಧರಿಸುವುದನ್ನು ಅನುಮತಿಸಲಾಗುವುದಿಲ್ಲ’ ಎಂದಿದ್ದರು ಎಂದು ವಿದ್ಯಾರ್ಥಿಯೊಬ್ಬರು ತಿಳಿಸಿದ್ದಾರೆ.

ಈ ವೇಳೆ ಪ್ರತಿಭಟನಾನಿರತರನ್ನು ಪೊಲೀಸರು ಮನವೊಲಿಸಿದ್ದಾರೆ. ಬಳಿಕ ವಿದ್ಯಾರ್ಥಿಗಳು ಪ್ರತಿಭಟನಾ ಸ್ಥಳದಿಂದ ಹೊರಟರು. ಇದಾದ ಬಳಿಕ ಶಾಸಕ ಆಚಾರ್ಯ ತಮ್ಮ ನಿಲುವನ್ನು ಸ್ಪಷ್ಟಪಡಿಸುವ ವೀಡಿಯೊವನ್ನು ಬಿಡುಗಡೆ ಮಾಡಿದರು. ‘ಇವರಿಗೆ ಎರಡು ವಿಭಿನ್ನ ವಸ್ತ್ರ ಸಂಹಿತೆ ಇದೆಯೇ ಎಂದು ನಾನು ಪ್ರಾಂಶುಪಾಲರನ್ನು ಕೇಳಿದ್ದೆ. ಗಣರಾಜ್ಯೋತ್ಸವದ ಸಮಾರಂಭ ಅಥವಾ ಯಾವುದೇ ಸರ್ಕಾರಿ ಕಾರ್ಯಕ್ರಮ ನಡೆದಾಗ, ಬೇರೆ ಡ್ರೆಸ್ ಕೋಡ್ ಇದೆಯೇ? ಹಾಗಾದರೆ, ನಮ್ಮ ಮಕ್ಕಳೂ (ಹಿಂದೂ ಹೆಣ್ಣುಮಕ್ಕಳು) ಲೆಹೆಂಗಾ ಚುನ್ನಿ ಹಾಕುತ್ತಾರೆ’ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಹಿಜಬ್‌ ವಾಪಸ್‌- ಕಾನೂನು ಪರಿಶೀಲಿಸಿಯೇ ಕ್ರಮ: ಪರಮೇಶ್ವರ್‌

hijab 1

ಕಿಶನ್‌ಪೋಲ್‌ನ ಕಾಂಗ್ರೆಸ್ ಶಾಸಕ ಅಮೀನ್ ಕಗಾಜಿ ಅವರು, ಬಿಜೆಪಿ ಶಾಸಕ ಸೌಹಾರ್ದ ಮತ್ತು ಕೋಮು ಸೌಹಾರ್ದವನ್ನು ನಾಶಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅವರ ವಿರುದ್ಧ ಫೆ.2ರೊಳಗೆ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಹಿಜಬ್ ಮೊಘಲರು ತಂದ ‘ಗುಲಾಮಗಿರಿಯ ಸಂಕೇತ’. ಕೆಲವು ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಹಿಜಬ್ ಧರಿಸೋದಕ್ಕೆ ಅನುಮತಿ ಇಲ್ಲ. ಅದು ಇಲ್ಲಿಯೂ ಆಗಬಾರದು ಎಂದು ಬಿಜೆಪಿ ಸಚಿವ ಕಿರೋರಿ ಲಾಲ್ ಮೀನಾ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಹಿಜಬ್‌ ನಮ್ಮ ಹಕ್ಕು, ಇನ್ಮುಂದೆ ಅಣ್ಣ-ತಮ್ಮಂದಿರಂತೆ ಬದುಕೋಣ – ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ಮುಸ್ಕಾನ್‌

HIJAB SUPREME COURT

ಬಿಜೆಪಿ ಶಾಸಕ ಬಾಲ್ ಮುಕುಂದ್ ಆಚಾರ್ಯ ವಿವಾದಿತ ಹೇಳಿಕೆಗಳನ್ನು ನೀಡಿರುವುದು ಇದೇ ಮೊದಲಲ್ಲ. ಕಳೆದ ತಿಂಗಳು ಚುನಾವಣೆಯಲ್ಲಿ ಗೆದ್ದ ನಂತರ, ಅಕ್ರಮ ಮಾಂಸದಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೀದಿಗಿಳಿದಿದ್ದರು.

ಕರ್ನಾಟಕದಲ್ಲೇನಾಗಿತ್ತು?
ಹಿಜಬ್ ಸಮಸ್ಯೆ ಎರಡು ವರ್ಷಗಳಿಂದ ಕರ್ನಾಟಕವನ್ನು ತಲ್ಲಣಗೊಳಿಸಿತ್ತು. 2022 ರಲ್ಲಿ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಶಿಕ್ಷಣ ಸಂಸ್ಥೆಗಳಲ್ಲಿ ಶಿರಸ್ತ್ರಾಣವನ್ನು ನಿಷೇಧಿಸಿತ್ತು. ಇದು ಭಾರೀ ಗದ್ದಲಕ್ಕೆ ಕಾರಣವಾಯಿತು. ಕರ್ನಾಟಕ ಹೈಕೋರ್ಟ್ ಹಿಜಬ್‌ ನಿಷೇಧದ ಸರ್ಕಾರದ ಆದೇಶವನ್ನು ಎತ್ತಿಹಿಡಿದಿತ್ತು. ಹಿಜಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ. ಆದರೆ ಶಿಕ್ಷಣ ಸಂಸ್ಥೆಗಳು ತಮ್ಮ ಎಲ್ಲಾ ವಿದ್ಯಾರ್ಥಿಗಳಿಗೆ ಡ್ರೆಸ್ ಕೋಡ್ ಅನ್ನು ನಿರ್ಧರಿಸಬಹುದು ಎಂದು ಹೇಳಿತ್ತು. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಈಗ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಪ್ರಕರಣ ಈಗ ಸುಪ್ರೀಂ ಅಂಗಳದಲ್ಲಿದೆ. ಇದನ್ನೂ ಓದಿ: PublicTV Explainer: ಇರಾನ್‌ನಲ್ಲಿ ಹಿಜಬ್‌ ವಿರುದ್ಧದ ಹೋರಾಟದ ಹೊತ್ತಲ್ಲೇ ನೂರಾರು ಶಾಲಾ ವಿದ್ಯಾರ್ಥಿನಿಯರಿಗೆ ವಿಷವಿಕ್ಕಿದ ದುರುಳರು – ಏನಾಗ್ತಿದೆ ಅಲ್ಲಿ?

TAGGED:BJP MLAHijablehengarajasthanಬಿಜೆಪಿ ಶಾಸಕರಾಜಸ್ಥಾನಲೆಹೆಂಗಾಹಿಜಬ್
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

PM Narendra Modi joins youngsters for friendly football game in Gangtok during Sikkim visit 1
Cricket

ಮಕ್ಕಳ ಜೊತೆ ಫುಟ್‌ಬಾಲ್ – ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

Public TV
By Public TV
3 seconds ago
Nirmala Sitharaman visits Kollur Mookambika Temple
Karnataka

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ನಿರ್ಮಲಾ ಸೀತಾರಾಮನ್

Public TV
By Public TV
4 minutes ago
Mumbai Man Stabs 2 Security Guards After Asking Them To Recite The Kalma
Crime

ಮುಂಬೈನಲ್ಲಿ ‘ಪಹಲ್ಗಾಮ್’ ಮಾದರಿಯ ದಾಳಿ – ಕಲ್ಮಾ ಪಠಿಸದ ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

Public TV
By Public TV
35 minutes ago
watermelon 1
Food

ಊಟ ಮಾಡಿದ ತಕ್ಷಣ ಕಲ್ಲಂಗಡಿ ತಿನ್ನಬಾರದು ಯಾಕೆ?

Public TV
By Public TV
55 minutes ago
Mangaluru Blast Case The Shariq cooker bomb capable of blowing up the bus FSL Investigation report 1
Court

ಮಧ್ಯ ವಯಸ್ಸಲ್ಲಿ ಶಾರಿಕ್‌ ಹೊರಗೆ ಬಂದ್ರೆ ಅಪಾಯ – ಶಿಕ್ಷೆ ಪ್ರಮಾಣ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲು NIA ಸಿದ್ಧತೆ

Public TV
By Public TV
1 hour ago
Prostitution
Bengaluru City

ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ – ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?