Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಲಮಟ್ಟಿ ಅಣೆಕಟ್ಟು ಎತ್ತರಿಸುವ ಬದ್ಧತೆ ನಮ್ಮ ಸರ್ಕಾರಕ್ಕೆ ಇದೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಲಮಟ್ಟಿ ಅಣೆಕಟ್ಟು ಎತ್ತರಿಸುವ ಬದ್ಧತೆ ನಮ್ಮ ಸರ್ಕಾರಕ್ಕೆ ಇದೆ: ಡಿಕೆಶಿ

Bengaluru City

ಆಲಮಟ್ಟಿ ಅಣೆಕಟ್ಟು ಎತ್ತರಿಸುವ ಬದ್ಧತೆ ನಮ್ಮ ಸರ್ಕಾರಕ್ಕೆ ಇದೆ: ಡಿಕೆಶಿ

Public TV
Last updated: September 6, 2025 5:49 pm
Public TV
Share
3 Min Read
DK Shivakumar 1
SHARE

– ಒಂದು ವಾರದಲ್ಲಿ ಭೂಸ್ವಾಧೀನಕ್ಕೆ ಪರಿಹಾರ ಮೊತ್ತ ಘೋಷಣೆ

ವಿಜಯಪುರ: ಆಲಮಟ್ಟಿ ಅಣೆಕಟ್ಟು ಎತ್ತರವನ್ನು 518 ಮೀ.ನಿಂದ 524 ಮೀ. ಎತ್ತರಿಸುವ ಬಗ್ಗೆ ಆದ್ಯತೆ ಮತ್ತು ಬದ್ಧತೆ ನಮ್ಮ ಸರ್ಕಾರಕ್ಕಿದೆ. ಮುಂದಿನ ಒಂದು ವಾರದೊಳಗೆ ಭೂಸ್ವಾಧೀನಕ್ಕೆ ನಿಗದಿ ಮಾಡಿರುವ ಬೆಲೆ ಘೋಷಣೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಆಲಮಟ್ಟಿ ಅಣೆಕಟ್ಟಿನಲ್ಲಿ ಕೃಷ್ಣಾ ನದಿಗೆ ಶನಿವಾರ ಬಾಗಿನ ಅರ್ಪಣೆ ನಂತರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಹಾಗೂ ಯೋಜನೆ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆ ನಡೆಸಿ ಬೆಲೆ ನಿಗದಿ ತೀರ್ಮಾನ ಮಾಡಲಾಗುವುದು. ಯಾವುದೇ ಮೇಲ್ಮನವಿ ಇಲ್ಲದಂತೆ ಒಂದೇ ಹಂತದ ಒಪ್ಪಿತ ಭೂಸ್ವಾಧೀನಕ್ಕೆ ಮುಖಂಡರು, ಜನಪ್ರತಿನಿಧಿಗಳು ಒಪ್ಪಿಗೆ ನೀಡಬೇಕು. ಪುನರ್ವಸತಿ ಬಗ್ಗೆ ಪ್ರತ್ಯೇಕ ತೀರ್ಮಾನ ಮಾಡಲಾಗುವುದು. ಸಮುದ್ರಕ್ಕೆ ಹೋಗುತ್ತಿರುವ ನೀರನ್ನು ನಮ್ಮ ಜನರಿಗೆ ನೀರಾವರಿ ಕಲ್ಪಿಸುವುದು ನಮ್ಮ ಸಂಕಲ್ಪ. ಇದನ್ನು ಇದೇ ಅವಧಿಯಲ್ಲಿ ಮಾಡಲು ಮುಂದಾಗಿದ್ದೇವೆ ಎಂದರು. ಇದನ್ನೂ ಓದಿ: ಹಿಂದೂಗಳ ಸಂಖ್ಯೆ ಹೆಚ್ಚಾಗದಿದ್ರೆ ಭಾರತ, ಪಾಕ್ ಆಗುತ್ತೆ: ಕಲ್ಲಡ್ಕ ಪ್ರಭಾಕರ ಭಟ್

ಮುಳುಗಡೆ ಜಮೀನುಗಳಿಗೆ ಉದಾರ ಮನಸ್ಸಿನಿಂದ ಪರಿಹಾರ ನೀಡಬೇಕು. ಕಾಲುವೆಗಳು ಹಾದು ಹೋಗುವ ಕಡೆ ರೈತರಿಗೆ ಅನುಕೂಲವಾಗುವುದರಿಂದ ಇಂತಿಷ್ಟೇ ಪರಿಹಾರ ಬೇಕು ಎನ್ನುವ ಬೇಡಿಕೆಯಿಲ್ಲ ಎಂದು ಶಾಸಕರಾದ ಯಶವಂತರಾಯ ಗೌಡ ಪಾಟೀಲರು ಅಭಿಪ್ರಾಯ ತಿಳಿಸಿದ್ದಾರೆ. ಶಿವಾನಂದ ಪಾಟೀಲರು, ಎಂ.ಬಿ.ಪಾಟೀಲರು ಸಹ ತಮ್ಮ ಸಲಹೆಗಳನ್ನು ನೀಡಿದ್ದಾರೆ. ನಾವು ಕೇಂದ್ರದ ಮೇಲೆ ಹಾಕುತ್ತಿರುವ ಒತ್ತಡ ನೋಡಿದರೆ, ಯಾವ ಕ್ಷಣದಲ್ಲಿ ಬೇಕಾದರೂ ಅಧಿಸೂಚನೆ ಹೊರಡಿಸಬಹುದು. ನಮ್ಮ ಪಾಲು ನಮಗೆ ಸಿಗಲೇಬೇಕು. ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ ಜಿಲ್ಲೆಯ ಜನರು ಸಹಕಾರ ನೀಡಬೇಕು. ನಾವು ಎಲ್ಲಾ ಪಕ್ಷದ ಶಾಸಕರ ಜೊತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಗಂಡನನ್ನು ಹೊಡೆದು ಕೊಲ್ಲುವಾಗ ಎದುರಲ್ಲೇ ಇದ್ದ ಸೋನಮ್ – ಹನಿಮೂನ್‌ ಕೊಲೆ ಕೇಸ್‌ ಚಾರ್ಜ್‌ಶೀಟ್‌ನಲ್ಲೇನಿದೆ?

ಈ ವಿಚಾರವಾಗಿ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಜಲಶಕ್ತಿ ಸಚಿವರನ್ನು ಮುಖ್ಯಮಂತ್ರಿಯವರು, ನಾನು ಹಾಗೂ ಸಣ್ಣ ನೀರಾವರಿ ಸಚಿವರು ಮನವಿ ಮಾಡಿದ್ದೆವು. ನಾನು ಸುಮಾರು ಐದು ಬಾರಿ ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಿದ್ದೇವೆ. ಪ್ರಧಾನಿಯವರ ಗಮನಕ್ಕೂ ಇದನ್ನು ತರಲಾಗಿತ್ತು. ಎರಡು ಬಾರಿ ಇದರ ಬಗ್ಗೆ ಸಂಬಂಧಪಟ್ಟ ರಾಜ್ಯಗಳ ಸಭೆ ಕರೆಯಲಾಗಿತ್ತು. ಆಂಧ್ರಪ್ರದೇಶದವರು ಒಮ್ಮೆ ಮಹಾರಾಷ್ಟ್ರದವರು ಮತ್ತೊಮ್ಮೆ ಸಭೆಯನ್ನು ಮುಂದಕ್ಕೆ ಹಾಕಿಸಿದರು ಎನ್ನುವ ಮಾಹಿತಿಯಿದೆ ಎಂದು ಹೇಳಿದರು. ಇದನ್ನೂ ಓದಿ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಇಬ್ಬರು ಯುವಕರ ಬಂಧನ

ಈ ಬಗ್ಗೆ ಮತ್ತೆ ಕೇಂದ್ರ ಜಲಶಕ್ತಿ ಸಚಿವರ ಗಮನ ಸೆಳೆದಾಗ ಅವರು ‘ಗಾಬರಿಯಾಗಬೇಡಿ, ತಾಂತ್ರಿಕ ವಿಚಾರದ ಕಾರಣಕ್ಕೆ ಸಭೆ ಮುಂದಕ್ಕೆ ಹಾಕಲಾಯಿತು. ಮತ್ತೊಮ್ಮೆ ಸಭೆ ಕರೆಯುವುದಾಗಿ’ ಆಶ್ವಾಸನೆ ನೀಡಿದ್ದಾರೆ. ಅಣೆಕಟ್ಟು ಎತ್ತರ ಹೆಚ್ಚಳ ಕುರಿತಂತೆ ಯಾವುದೇ ತಕರಾರುಗಳು ಇಲ್ಲವೆಂದು ಮಹಾರಾಷ್ಟ್ರದವರು ಈ ಹಿಂದೆ ತಿಳಿಸಿದ್ದರು ಎಂದು ಎಂ.ಬಿ.ಪಾಟೀಲರು ಹೇಳಿದ್ದಾರೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯಗೆ ಇವಿಎಂಗಳ ಮೇಲೆ ನಂಬಿಕೆ ಇಲ್ಲದಿದ್ರೆ ರಾಜೀನಾಮೆ ಕೊಟ್ಟು ಸರಿಯಿಲ್ಲ ಅಂತ ಹೇಳಲಿ: ಬೊಮ್ಮಾಯಿ

ರೈತರ ಭೂಮಿ ಸ್ವಾಧೀನಕ್ಕೆ ಒಳಪಡಿಸಿಕೊಳ್ಳುವ ಬಗ್ಗೆ ಅನೇಕ ಸಭೆಗಳನ್ನು ನಡೆಸಲಾಗಿದೆ. ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಇಂತಿಷ್ಟು ಪರಿಹಾರವೆಂದು ನಿಗದಿ ಮಾಡಲಾಗಿತ್ತು. ಇದರಿಂದ ರೈತರಿಗೆ ಅನುಕೂಲವಾಗುತ್ತಿಲ್ಲ ಎಂದು ಅನೇಕ ಜನಪ್ರತಿನಿಧಿಗಳು ಒತ್ತಡ ಹಾಕಿ ಇದನ್ನು ನಿಲ್ಲಿಸಿದರು. ಇತ್ತೀಚೆಗೆ ಆಲಮಟ್ಟಿ ಭಾಗದ ಜನಪ್ರತಿನಿಧಿಗಳ, ಸಚಿವರ, ರೈತರ ಸಭೆ ನಡೆಸಿ ಅದರ ತೀರ್ಮಾನವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗಿದೆ ಎಂದು ನುಡಿದರು. ಇದನ್ನೂ ಓದಿ: ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್‌ಗೆ ರೈತರ ಸ್ವಾಗತ – 1.5 ಕೋಟಿಯಿಂದ 2.5 ಕೋಟಿ ರೂ. ಪರಿಹಾರಕ್ಕೆ ಸಂತಸ

ಪರಿಹಾರದ ವಿಚಾರವಾಗಿ ಸುಮಾರು 20 ಸಾವಿರ ರೈತರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅನೇಕ ವಕೀಲರು ರೈತರನ್ನ ತಪ್ಪು ದಾರಿಗೆ ಎಳೆಯಲು ಪ್ರಯತ್ನಿಸುತ್ತಿದ್ದಾರೆ. ಇದರಿಂದ ಯಾರಿಗೂ ಸಹ ಅನುಕೂಲವಾಗುವುದಿಲ್ಲ ಎನ್ನುವುದನ್ನು ರೈತರು ಅರಿಯಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಪ್ರಾಮಾಣಿಕರಾಗಿದ್ರೆ ಸೆಂಥಿಲ್‌ ಸಿಎಂ ಬಳಿ ಮಾತಾಡಿ ಸಿಬಿಐ, ಎನ್ಐಎಗೆ ಕೊಡಲಿ : ರೆಡ್ಡಿ ಸವಾಲು

ಅಣೆಕಟ್ಟು ಎತ್ತರ ಹೆಚ್ಚಳ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಿ ನಮ್ಮ ಸರ್ಕಾರ ಬದ್ಧತೆ ಮೆರೆದಿದೆ. ಈ ವರ್ಷ 100 ಟಿಎಂಸಿಗೂ ಹೆಚ್ಚು ನೀರು, ಕೆಲವೊಮ್ಮೆ 400 ಟಿಎಂಸಿಗೂ ಹೆಚ್ಚು ನೀರು ಸಮುದ್ರ ಸೇರಿದ ಉದಾಹರಣೆಯಿದೆ. ವರುಣನ ಕೃಪೆಯಿಂದ ಆಲಮಟ್ಟಿ ಅಣೆಕಟ್ಟು ತುಂಬಿ ಎಲ್ಲರಿಗೂ ಸಂತಸ ಉಂಟು ಮಾಡಿದೆ ಎಂದು ಹೇಳಿದರು. ಇದನ್ನೂ ಓದಿ:  ಧರ್ಮಸ್ಥಳ ಕೇಸ್ | ಅಣ್ಣಾಮಲೈ ವಿಚಾರಣೆ ಯಾಕಿಲ್ಲ? – ಸಸಿಕಾಂತ್ ಸೆಂಥಿಲ್

TAGGED:Alamatti DamcongressDK Shivakumarvijayapuraಆಲಮಟ್ಟಿ ಡ್ಯಾಂಕಾಂಗ್ರೆಸ್ಡಿಕೆ ಶಿವಕುಮಾರ್ವಿಜಯಪುರ
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

Israeli F 35 shoots down Iranian YAK 130 fighter jet
Latest

ಇರಾನ್‌ನ YAK-130 ಫೈಟರ್ ಜೆಟ್ ಹೊಡೆದುರುಳಿಸಿದ ಇಸ್ರೇಲ್

Public TV
By Public TV
6 minutes ago
Andhra Pradesh Chittoor Accident
Crime

ಕಂಟೇನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಬೆಂಗಳೂರು ಮೂಲದ ಐವರು ದುರ್ಮರಣ

Public TV
By Public TV
12 minutes ago
ayatollah ali khamenei donald trump
Latest

ಕಳೆದ ವರ್ಷವೇ ಖಮೇನಿ ಮುಗಿಸಲು ಇಸ್ರೇಲ್ ಪ್ಲ್ಯಾನ್‌ – ಆಗ ಅಡ್ಡ ಬಂದಿದ್ದ ಟ್ರಂಪ್!

Public TV
By Public TV
24 minutes ago
holi 1
Bagalkot

ನಾಡಿನಾದ್ಯಂತ ಹೋಳಿ ಸಂಭ್ರಮ – ಬಣ್ಣದಲ್ಲಿ ಮಿಂದೆದ್ದ ಚಿಣ್ಣರು, ಯುವಕ-ಯುವತಿಯರು

Public TV
By Public TV
28 minutes ago
Iris Dena
Latest

ಶ್ರೀಲಂಕಾ ಬಳಿ ಅಮೆರಿಕದ ಸಬ್‌ಮೆರಿನ್ ಡಿಕ್ಕಿ; ಇರಾನ್‌ ನೌಕೆ ಮುಳುಗಡೆ – 148 ಮಂದಿ ನಾಪತ್ತೆ

Public TV
By Public TV
39 minutes ago
ಸಾಂರ್ದಭಿಕ ಚಿತ್ರ
Bengaluru City

KPSC ಪರೀಕ್ಷೆಯಲ್ಲಿ ಮತ್ತೆ ಗೊಂದಲ – 384 ಗೆಜೆಟೆಡ್ ಹುದ್ದೆಗಳ ಸಂದರ್ಶನ ಪಟ್ಟಿಯಲ್ಲಿ ಅಕ್ರಮ ಆರೋಪ

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?