Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ದೇಶ ಮೊದಲು.. ಭಾರತವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ: ಪ್ರಧಾನಿ ಮೋದಿ ಪ್ರತಿಜ್ಞೆ

Public TV
Last updated: August 15, 2024 8:50 am
Public TV
Share
3 Min Read
PM Narendra Modi Independence Day speech
SHARE

– 78ನೇ ಸ್ವಾತಂತ್ರ್ಯೋತ್ಸವದಂದು ದೇಶದ ಜನರನ್ನುದ್ದೇಶಿಸಿ ಮೋದಿ ಭಾಷಣ

ನವದೆಹಲಿ: ಜನಜೀವನ ಪರಿವರ್ತಿಸಲು, ದೇಶವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ. ನಮಗೆ ರಾಷ್ಟ್ರ ಮೊದಲು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪ್ರತಿಜ್ಞೆ ಮಾಡಿದರು.

78ನೇ ಸ್ವಾತಂತ್ರ ದಿನಾಚರಣೆ (78th Independence Day) ಹಿನ್ನೆಲೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ದೇಶವನ್ನುದ್ದೇಶಿ ಮಾತನಾಡಿದ ಮೋದಿ, ದೇಶದ ಸ್ವಾತಂತ್ರ್ಯಕ್ಕಾಗಿ ಜೀವನ ಸಮರ್ಪಣೆ ಮಾಡಿದ, ಸಂಘರ್ಷ ಮಾಡಿದ ಅಗಣಿತ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಮಾಡುವ ಶುಭ ದಿನ ಎಂದು ಹೇಳಿದರು. ಇದನ್ನೂ ಓದಿ: Independence Day: ಕೆಂಪುಕೋಟೆಯಲ್ಲಿ ಸ್ವಾತಂತ್ರೋತ್ಸವದ ಸಂಭ್ರಮ – ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

PM Modi 2

ಸುಧಾರಣೆಗಳಿಗೆ ನಮ್ಮ ಬದ್ಧತೆ ಗುಲಾಬಿ ಪತ್ರಿಕೆಯ ಸಂಪಾದಕೀಯಕ್ಕಾಗಿ ಅಲ್ಲ. ದೇಶವನ್ನು ಬಲಿಷ್ಠಗೊಳಿಸುವುದು ಎಂದು ನಾನು ದೇಶವಾಸಿಗಳಿಗೆ ಭರವಸೆ ನೀಡಲು ಬಯಸುತ್ತೇನೆ. ತಜ್ಞರು ಅಥವಾ ಬೌದ್ಧಿಕ ಚರ್ಚಾ ಕ್ಲಬ್‌ಗಳನ್ನು ತೃಪ್ತಿಪಡಿಸಲು ಸರ್ಕಾರವು ವ್ಯಾಪಕವಾದ ಸುಧಾರಣೆಗಳನ್ನು ಜಾರಿಗೆ ತಂದಿಲ್ಲ. ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುವ ‘ನೇಷನ್ ಫಸ್ಟ್’ ಪ್ರತಿಜ್ಞೆಯೇ ನಮ್ಮ ಆದ್ಯತೆ ಎಂದು ತಿಳಿಸಿದರು.

ದೇಶದ ರಕ್ಷಣೆ ಮತ್ತು ನಿರ್ಮಾಣಕ್ಕೆ ಪೂರ್ಣ ಮನಸ್ಸಿನಿಂದ, ಬದ್ಧತೆಯಿಂದ ರೈತರು ಮತ್ತು ಯುವಕರು ಕೆಲಸ ಮಾಡುತ್ತಿದ್ದಾರೆ. ನಾನು ಎಲ್ಲರಿಗೂ ಗೌರವ ಪೂರ್ವಕವಾಗಿ ನಮಸ್ಕರಿಸುತ್ತೇನೆ. ಅವಿತರ ಹೋರಾಟದಿಂದ ಸ್ವಾತಂತ್ರ್ಯ ಬಂದಿದೆ. ಅಂದು 40 ಕೋಟಿ ಜನರು ಒಂದು ಕನಸು, ಸಂಕಲ್ಪದೊಂದಿಗೆ ಹೋರಾಡಿದರು. ಅವರದೇ ರಕ್ತ ನಮ್ಮಲ್ಲಿ ಇದೆ ಎನ್ನುವ ಹೆಮ್ಮೆ ಇದೆ. 40 ಕೋಟಿ ಜನರು ವಿಶ್ವದ ಬಲಿಷ್ಠ ಸರ್ಕಾರವನ್ನು ಕಿತ್ತೊಗೆಯಿತು. 140 ಕೋಟಿ ಜನರು ಸಂಕಲ್ಪದೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಹೊರಟರೇ ಏನೇ ಸವಾಲು ಬಂದರೂ, ಎಲ್ಲವನ್ನೂ ಮೀರಿ ನಾವು ಸಮೃದ್ಧ ಭಾರತ್, ವಿಸಕಿತ ಭಾರತ ಕನಸು ಪೂರ್ಣ ಮಾಡಬಹುದು ಎಂದು ಕರೆ ನೀಡಿದರು. ಇದನ್ನೂ ಓದಿ: Independence Day | ಇತಿಹಾಸ, ಮಹತ್ವ, ನೀವು ತಿಳಿದಿರಲೇಬೇಕಾದ ಸಂಗತಿಗಳಿವು

PM Modi 78th Independence Day Red Fort

ಅಂದು ದೇಶಕ್ಕೆ ಸಾಯಲು ಜನರು ಪ್ರತಿಬದ್ಧವಾಗಿದ್ದರು. ನಾವು ಅಭಿವೃದ್ಧಿ ಭಾರತಕ್ಕೆ ಪ್ರತಿಬದ್ಧರವಾಗಿರಬೇಕು. ವಿಕಸಿತ ಭಾರತಕ್ಕಾಗಿ ದೇಶದ ಜನರು ಸಾಕಷ್ಟು ಸಲಹೆ ನೀಡಿದ್ದಾರೆ. ದೇಶದ ಪ್ರತಿಯೊಬ್ಬ ಜನರ ಕನಸು, ಸಂಕಲ್ಪ ಅದರೊಳಗಿದೆ. 2047 ಸ್ವಾತಂತ್ರ್ಯ ದಿನಾಚರಣೆ 100 ವರ್ಷಕ್ಕಾಗಿ ಸಾಕಷ್ಟು ಸಲಹೆ ನೀಡಿದ್ದಾರೆ. ಕೆಲವು ಜನರು ಉತ್ಪಾದನೆ ಹಬ್, ಸ್ಕಿಲ್ ಸಿಟಿ, ಆತ್ಮ ನಿರ್ಭರ್, ಸಿರಿ ಧಾನ್ಯಗಳನ್ನು ಜನಪ್ರಿಯ ಮಾಡಲು ಸೇರಿ ಅನೇಕ ಸಲಹೆ ನೀಡಿದ್ದಾರೆ. ನ್ಯಾಯ ವಿಳಂಬದ ಹಿನ್ನಲೆ ನ್ಯಾಯ ವಲಯದಲ್ಲಿ ವೇಗಬೇಕು. ಭಾರತದ ಸ್ಪೇಸ್ ಸ್ಟೇಷನ್ ನಿರ್ಮಾಣ, ಗ್ರೀನ್ ಸಿಟಿ ನಿರ್ಮಾಣ, ಪಾರಂಪರಿಕ ಔಷಧಿ ಅಭಿವೃದ್ಧಿ ಹೀಗೆ ಸಾಕಷ್ಟು ಸಲಹೆಗಳಿವೆ. ನನ್ನ ದೇಶದ ಸಾಮಾನ್ಯ ನಾಗರಿಕರು ಈ ಸಲಹೆ ನೀಡಿದ್ದಾರೆ. ದೇಶದ ಜನರಲ್ಲಿ ಇಷ್ಟು ದೊಡ್ಡ ಕನಸ್ಸುಗಳಿವೆ. ಇದರಿಂದ ನನ್ನ ಮನಸ್ಸಿನಲ್ಲಿ ಆತ್ಮ ವಿಶ್ವಾಸ ಇನ್ನಷ್ಟು ಹೆಚ್ಚುತ್ತದೆ ಎಂದರು.

ಕೊರೊನಾ ಸಂಕಷ್ಟ ಮರೆಯಲು ಸಾಧ್ಯವಿಲ್ಲ. ಕೋಟ್ಯಂತರ ಜನರಿಗೆ ಉಚಿತವಾಗಿ ಲಸಿಕೆ ನೀಡಲಾಯಿತು. ಭಯೋತ್ಪಾದಕರು ಬಂದು ದಾಳಿ ಮಾಡಿ ಹೋಗುತ್ತಿದ್ದರು. ಈಗ ನಮ್ಮ ಸೇನೆ ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟೈಕ್ ಮಾಡುತ್ತದೆ. ಇದನ್ನು ನೋಡಿ ನಮ್ಮ ಸೇನೆಯ ಬಗ್ಗೆ ಹೆಮ್ಮೆಯಾಗುತ್ತದೆ ಎಂದು ಖುಷಿ ವ್ಯಕ್ತಪಡಿಸಿದರು. ಇದನ್ನೂ ಓದಿ: Independence Day | ರಾಜಸ್ಥಾನಿ ಲೆಹರಿಯಾ ಪೇಟ ಧರಿಸಿ ಗಮನ ಸೆಳೆದ ಮೋದಿ

ಏನಿದೆ ಅದರಲ್ಲಿ ಜೀವನ ಮಾಡಿ, ಏನು ಹೆಚ್ಚಿನದು ಆಗುವುದಿಲ್ಲ ಎನ್ನುವ ಮನಸ್ಥಿತಿ ಜನರಲ್ಲಿ ಇತ್ತು. ಈ ಮಾನಸಿಕತೆ ಬದಲಿಸಬೇಕಿತ್ತು. ಜನರಲ್ಲಿ ಬದಲಾಗುವ ಮನಸ್ಸಿದ್ದರೂ, ಅವರನ್ನು ಬದಲಾಗಲು ಬಿಡಲಿಲ್ಲ. ನಮಗೆ ಅವಕಾಶ ಸಿಕ್ಕಾಗ ನಾವು ಬದಲಾವಣೆ ಆರಂಭಿಸಿದೆವು. ದೇಶದ ಜನರಲ್ಲಿ ಬದಲಾವಣೆ ತರುವ ಸಂಕಲ್ಪ ಮಾಡಿದೆವು. ನಮ್ಮ ಬದ್ಧತೆ ನಾಲ್ಕು ದಿನದ್ದಲ್ಲ, ದೇಶಕ್ಕೆ ನಿರಂತರ ಶಕ್ತಿ ತುಂಬುವುದು ಎಂದು ತಿಳಿಸಿದರು.

TAGGED:78th Independence Day78ನೇ ಸ್ವಾತಂತ್ರ್ಯ ದಿನಾಚರಣೆnarendra modiPM ModiRed Fortನರೇಂದ್ರ ಮೋದಿ
Share This Article
Facebook Whatsapp Whatsapp Telegram

You Might Also Like

05
Districts

ʻಕಾಂತಾರ ಚಾಪ್ಟರ್-1ʼ ಶೂಟಿಂಗ್‌ ವೇಳೆ ಮತ್ತೊಂದು ಅವಘಡ – ರಿಷಬ್‌ ಶೆಟ್ಟಿ ಸೇರಿ 30 ಮಂದಿ ಅಪಾಯದಿಂದ ಪಾರು!

Public TV
By Public TV
2 hours ago
Iran Israel
Latest

ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ – ದೊಡ್ಡ ಎಚ್ಚರಿಕೆ ಕೊಟ್ಟ ಇಸ್ರೇಲ್‌

Public TV
By Public TV
2 hours ago
allu arjun received gaddar film award as best actor for pushpa 2 movie 2
Cinema

ಸಿಎಂ ರೇವಂತ್ ರೆಡ್ಡಿ ಕೈಯಿಂದ ಉತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ಅಲ್ಲು ಅರ್ಜುನ್‌

Public TV
By Public TV
2 hours ago
Honeymoon Murder
Crime

ಪತಿ ಕೊಲೆ ಬಳಿಕ ಇಂದೋರ್‌ನ ಫ್ಲ್ಯಾಟ್‌ನಲ್ಲಿ ವಾಸವಿದ್ದ ಹನಿಮೂನ್ ಹಂತಕಿ

Public TV
By Public TV
2 hours ago
11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
2 hours ago
Fire Accident Dubai UAE
Latest

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 4,000 ಜನರ ಸ್ಥಳಾಂತರ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?