Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶ ಮೊದಲು.. ಭಾರತವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ: ಪ್ರಧಾನಿ ಮೋದಿ ಪ್ರತಿಜ್ಞೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇಶ ಮೊದಲು.. ಭಾರತವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ: ಪ್ರಧಾನಿ ಮೋದಿ ಪ್ರತಿಜ್ಞೆ

Latest

ದೇಶ ಮೊದಲು.. ಭಾರತವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ: ಪ್ರಧಾನಿ ಮೋದಿ ಪ್ರತಿಜ್ಞೆ

Public TV
Last updated: August 15, 2024 8:50 am
Public TV
Share
3 Min Read
PM Narendra Modi Independence Day speech
SHARE

– 78ನೇ ಸ್ವಾತಂತ್ರ್ಯೋತ್ಸವದಂದು ದೇಶದ ಜನರನ್ನುದ್ದೇಶಿಸಿ ಮೋದಿ ಭಾಷಣ

ನವದೆಹಲಿ: ಜನಜೀವನ ಪರಿವರ್ತಿಸಲು, ದೇಶವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ. ನಮಗೆ ರಾಷ್ಟ್ರ ಮೊದಲು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪ್ರತಿಜ್ಞೆ ಮಾಡಿದರು.

78ನೇ ಸ್ವಾತಂತ್ರ ದಿನಾಚರಣೆ (78th Independence Day) ಹಿನ್ನೆಲೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ದೇಶವನ್ನುದ್ದೇಶಿ ಮಾತನಾಡಿದ ಮೋದಿ, ದೇಶದ ಸ್ವಾತಂತ್ರ್ಯಕ್ಕಾಗಿ ಜೀವನ ಸಮರ್ಪಣೆ ಮಾಡಿದ, ಸಂಘರ್ಷ ಮಾಡಿದ ಅಗಣಿತ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಮಾಡುವ ಶುಭ ದಿನ ಎಂದು ಹೇಳಿದರು. ಇದನ್ನೂ ಓದಿ: Independence Day: ಕೆಂಪುಕೋಟೆಯಲ್ಲಿ ಸ್ವಾತಂತ್ರೋತ್ಸವದ ಸಂಭ್ರಮ – ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

PM Modi 2

ಸುಧಾರಣೆಗಳಿಗೆ ನಮ್ಮ ಬದ್ಧತೆ ಗುಲಾಬಿ ಪತ್ರಿಕೆಯ ಸಂಪಾದಕೀಯಕ್ಕಾಗಿ ಅಲ್ಲ. ದೇಶವನ್ನು ಬಲಿಷ್ಠಗೊಳಿಸುವುದು ಎಂದು ನಾನು ದೇಶವಾಸಿಗಳಿಗೆ ಭರವಸೆ ನೀಡಲು ಬಯಸುತ್ತೇನೆ. ತಜ್ಞರು ಅಥವಾ ಬೌದ್ಧಿಕ ಚರ್ಚಾ ಕ್ಲಬ್‌ಗಳನ್ನು ತೃಪ್ತಿಪಡಿಸಲು ಸರ್ಕಾರವು ವ್ಯಾಪಕವಾದ ಸುಧಾರಣೆಗಳನ್ನು ಜಾರಿಗೆ ತಂದಿಲ್ಲ. ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುವ ‘ನೇಷನ್ ಫಸ್ಟ್’ ಪ್ರತಿಜ್ಞೆಯೇ ನಮ್ಮ ಆದ್ಯತೆ ಎಂದು ತಿಳಿಸಿದರು.

ದೇಶದ ರಕ್ಷಣೆ ಮತ್ತು ನಿರ್ಮಾಣಕ್ಕೆ ಪೂರ್ಣ ಮನಸ್ಸಿನಿಂದ, ಬದ್ಧತೆಯಿಂದ ರೈತರು ಮತ್ತು ಯುವಕರು ಕೆಲಸ ಮಾಡುತ್ತಿದ್ದಾರೆ. ನಾನು ಎಲ್ಲರಿಗೂ ಗೌರವ ಪೂರ್ವಕವಾಗಿ ನಮಸ್ಕರಿಸುತ್ತೇನೆ. ಅವಿತರ ಹೋರಾಟದಿಂದ ಸ್ವಾತಂತ್ರ್ಯ ಬಂದಿದೆ. ಅಂದು 40 ಕೋಟಿ ಜನರು ಒಂದು ಕನಸು, ಸಂಕಲ್ಪದೊಂದಿಗೆ ಹೋರಾಡಿದರು. ಅವರದೇ ರಕ್ತ ನಮ್ಮಲ್ಲಿ ಇದೆ ಎನ್ನುವ ಹೆಮ್ಮೆ ಇದೆ. 40 ಕೋಟಿ ಜನರು ವಿಶ್ವದ ಬಲಿಷ್ಠ ಸರ್ಕಾರವನ್ನು ಕಿತ್ತೊಗೆಯಿತು. 140 ಕೋಟಿ ಜನರು ಸಂಕಲ್ಪದೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಹೊರಟರೇ ಏನೇ ಸವಾಲು ಬಂದರೂ, ಎಲ್ಲವನ್ನೂ ಮೀರಿ ನಾವು ಸಮೃದ್ಧ ಭಾರತ್, ವಿಸಕಿತ ಭಾರತ ಕನಸು ಪೂರ್ಣ ಮಾಡಬಹುದು ಎಂದು ಕರೆ ನೀಡಿದರು. ಇದನ್ನೂ ಓದಿ: Independence Day | ಇತಿಹಾಸ, ಮಹತ್ವ, ನೀವು ತಿಳಿದಿರಲೇಬೇಕಾದ ಸಂಗತಿಗಳಿವು

PM Modi 78th Independence Day Red Fort

ಅಂದು ದೇಶಕ್ಕೆ ಸಾಯಲು ಜನರು ಪ್ರತಿಬದ್ಧವಾಗಿದ್ದರು. ನಾವು ಅಭಿವೃದ್ಧಿ ಭಾರತಕ್ಕೆ ಪ್ರತಿಬದ್ಧರವಾಗಿರಬೇಕು. ವಿಕಸಿತ ಭಾರತಕ್ಕಾಗಿ ದೇಶದ ಜನರು ಸಾಕಷ್ಟು ಸಲಹೆ ನೀಡಿದ್ದಾರೆ. ದೇಶದ ಪ್ರತಿಯೊಬ್ಬ ಜನರ ಕನಸು, ಸಂಕಲ್ಪ ಅದರೊಳಗಿದೆ. 2047 ಸ್ವಾತಂತ್ರ್ಯ ದಿನಾಚರಣೆ 100 ವರ್ಷಕ್ಕಾಗಿ ಸಾಕಷ್ಟು ಸಲಹೆ ನೀಡಿದ್ದಾರೆ. ಕೆಲವು ಜನರು ಉತ್ಪಾದನೆ ಹಬ್, ಸ್ಕಿಲ್ ಸಿಟಿ, ಆತ್ಮ ನಿರ್ಭರ್, ಸಿರಿ ಧಾನ್ಯಗಳನ್ನು ಜನಪ್ರಿಯ ಮಾಡಲು ಸೇರಿ ಅನೇಕ ಸಲಹೆ ನೀಡಿದ್ದಾರೆ. ನ್ಯಾಯ ವಿಳಂಬದ ಹಿನ್ನಲೆ ನ್ಯಾಯ ವಲಯದಲ್ಲಿ ವೇಗಬೇಕು. ಭಾರತದ ಸ್ಪೇಸ್ ಸ್ಟೇಷನ್ ನಿರ್ಮಾಣ, ಗ್ರೀನ್ ಸಿಟಿ ನಿರ್ಮಾಣ, ಪಾರಂಪರಿಕ ಔಷಧಿ ಅಭಿವೃದ್ಧಿ ಹೀಗೆ ಸಾಕಷ್ಟು ಸಲಹೆಗಳಿವೆ. ನನ್ನ ದೇಶದ ಸಾಮಾನ್ಯ ನಾಗರಿಕರು ಈ ಸಲಹೆ ನೀಡಿದ್ದಾರೆ. ದೇಶದ ಜನರಲ್ಲಿ ಇಷ್ಟು ದೊಡ್ಡ ಕನಸ್ಸುಗಳಿವೆ. ಇದರಿಂದ ನನ್ನ ಮನಸ್ಸಿನಲ್ಲಿ ಆತ್ಮ ವಿಶ್ವಾಸ ಇನ್ನಷ್ಟು ಹೆಚ್ಚುತ್ತದೆ ಎಂದರು.

ಕೊರೊನಾ ಸಂಕಷ್ಟ ಮರೆಯಲು ಸಾಧ್ಯವಿಲ್ಲ. ಕೋಟ್ಯಂತರ ಜನರಿಗೆ ಉಚಿತವಾಗಿ ಲಸಿಕೆ ನೀಡಲಾಯಿತು. ಭಯೋತ್ಪಾದಕರು ಬಂದು ದಾಳಿ ಮಾಡಿ ಹೋಗುತ್ತಿದ್ದರು. ಈಗ ನಮ್ಮ ಸೇನೆ ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟೈಕ್ ಮಾಡುತ್ತದೆ. ಇದನ್ನು ನೋಡಿ ನಮ್ಮ ಸೇನೆಯ ಬಗ್ಗೆ ಹೆಮ್ಮೆಯಾಗುತ್ತದೆ ಎಂದು ಖುಷಿ ವ್ಯಕ್ತಪಡಿಸಿದರು. ಇದನ್ನೂ ಓದಿ: Independence Day | ರಾಜಸ್ಥಾನಿ ಲೆಹರಿಯಾ ಪೇಟ ಧರಿಸಿ ಗಮನ ಸೆಳೆದ ಮೋದಿ

ಏನಿದೆ ಅದರಲ್ಲಿ ಜೀವನ ಮಾಡಿ, ಏನು ಹೆಚ್ಚಿನದು ಆಗುವುದಿಲ್ಲ ಎನ್ನುವ ಮನಸ್ಥಿತಿ ಜನರಲ್ಲಿ ಇತ್ತು. ಈ ಮಾನಸಿಕತೆ ಬದಲಿಸಬೇಕಿತ್ತು. ಜನರಲ್ಲಿ ಬದಲಾಗುವ ಮನಸ್ಸಿದ್ದರೂ, ಅವರನ್ನು ಬದಲಾಗಲು ಬಿಡಲಿಲ್ಲ. ನಮಗೆ ಅವಕಾಶ ಸಿಕ್ಕಾಗ ನಾವು ಬದಲಾವಣೆ ಆರಂಭಿಸಿದೆವು. ದೇಶದ ಜನರಲ್ಲಿ ಬದಲಾವಣೆ ತರುವ ಸಂಕಲ್ಪ ಮಾಡಿದೆವು. ನಮ್ಮ ಬದ್ಧತೆ ನಾಲ್ಕು ದಿನದ್ದಲ್ಲ, ದೇಶಕ್ಕೆ ನಿರಂತರ ಶಕ್ತಿ ತುಂಬುವುದು ಎಂದು ತಿಳಿಸಿದರು.

TAGGED:78th Independence Day78ನೇ ಸ್ವಾತಂತ್ರ್ಯ ದಿನಾಚರಣೆnarendra modiPM ModiRed Fortನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories

You Might Also Like

Pakistan and Saudi Arabia agreement
Latest

ಇರಾನ್-ಇಸ್ರೇಲ್ ಯುದ್ಧಕ್ಕೆ ಪಾಕಿಸ್ತಾನ ಎಂಟ್ರಿ ಕೊಡುತ್ತಾ?

Public TV
By Public TV
33 minutes ago
Iris Dena
Latest

ಶ್ರೀಲಂಕಾ ಬಳಿ ಅಮೆರಿಕದ ಸಬ್‌ಮೆರಿನ್ ದಾಳಿ; ಇರಾನ್‌ ನೌಕೆ ಮುಳುಗಡೆ – 148 ಮಂದಿ ನಾಪತ್ತೆ

Public TV
By Public TV
51 minutes ago
kea
Bengaluru City

UGCET | ಶುಲ್ಕ ಪಾವತಿಗೆ ಮಾ.7 ಕೊನೆ ದಿನ: ಕೆಇಎ

Public TV
By Public TV
1 hour ago
Nitish Kumar Bihar
Latest

ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ? – ನಿತೀಶ್ ಪುತ್ರ ನಿಶಾಂತ್‌ಗೆ ಡಿಸಿಎಂ ಹುದ್ದೆಗೆ ಡೀಲ್

Public TV
By Public TV
1 hour ago
Sriramulu 1
Bengaluru City

ಮೀಸಲಾತಿ ಸರಿಯಾಗಿ ಅನುಷ್ಠಾನ ಮಾಡದೇ ಗೊಂದಲ ಸೃಷ್ಟಿಸಿದ ಸರ್ಕಾರದ ವಿರುದ್ಧ ಉಗ್ರ ಹೋರಾಟ – ಶ್ರೀರಾಮುಲು

Public TV
By Public TV
1 hour ago
Bomb threat to Davangere DCs residence
Crime

ದಾವಣಗೆರೆ ಡಿಸಿ ನಿವಾಸ ಸ್ಫೋಟಿಸೋದಾಗಿ 112ಕ್ಕೆ ಬೆದರಿಕೆ ಕರೆ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?