ರಾಯಚೂರು: ತಮಿಳು ಭಾಷೆಯಿಂದ ಕನ್ನಡ ಹುಟ್ಟಿದೆ ಎಂಬ ನಟ ಕಮಲ್ ಹಾಸನ್ (Kamal Haasan) ಹೇಳಿಕೆ ವಿರುದ್ಧ ರಾಯಚೂರಿನಲ್ಲಿ (Raichuru) ಕನ್ನಡಪರ ಸಂಘಟನೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿ, ಭಾವಚಿತ್ರ ಸುಟ್ಟು ಆಕ್ರೋಶ ಹೊರಹಾಕಿದರು.ಇದನ್ನೂ ಓದಿ: ಟೈಗರ್ ಶ್ರಾಫ್ ಜೊತೆ ಜಾನ್ವಿ ಕಪೂರ್ ಡ್ಯುಯೆಟ್
ನಗರದ ಅಂಬೇಡ್ಕರ್ ವೃತ್ತದಲ್ಲಿ ಕಮಲ್ ಹಾಸನ್ ಭಾವಚಿತ್ರ ಸುಟ್ಟು ಪ್ರತಿಭಟಿನೆ ನಡೆಸಿದರು. ಪ್ರತಿಭಟನಾಕಾರರು ಕಮಲ್ ಹಾಸನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಆಕ್ರೋಶ ವ್ಯಕ್ತಪಡಿಸಿದರು. ಭಾಷಾ ಅಂಧತೆ ಮೆರೆದಿರುವ ಕಮಲ್ ಹಾಸನ್ ಕನ್ನಡಿಗರಿಗೆ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು.
ಕಮಲ್ ಹಾಸನ್ ನಟನೆಯ ತಮಿಳು ಚಿತ್ರಗಳಿಗೆ ರಾಜ್ಯದಲ್ಲಿ ಬಿಡುಗಡೆಗೆ ಅವಕಾಶ ಕೊಡಬಾರದು ಎಂದು ಕನ್ನಡಪರ ಸಂಘಟನೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಆಗ್ರಹಿಸಿದರು.ಇದನ್ನೂ ಓದಿ: ಕಾರವಾರ: ಕಡಲ ತೀರಕ್ಕೆ ತೇಲಿಬಂದ ಹಡಗಿನ ರಾಫ್ಟ್ – ಕೇರಳ ಕೊಚ್ಚಿಯಲ್ಲಿ ಮುಳುಗಿದ್ದ ಹಡಗಿನದ್ದಾ?