ಮಂಡ್ಯ: ವಿಷ ಆಹಾರ ಸೇವಿಸಿದ ಪರಿಣಾಮ 2 ಎತ್ತು ಹಾಗೂ ಒಂದು ಹಸು ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಜಿಲ್ಲೆಯ ಮದ್ದೂರು ತಾಲೂಕಿನ ಪಣ್ಣೆದೊಡ್ಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ರೈತರಾದ ರವಿ, ಪ್ರೀತಮ್ ಹಾಗೂ ಲೀಲಾ ಎಂಬುವವರಿಗೆ ಸೇರಿದ ರಾಸುಗಳು ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ಮೃತಪಟ್ಟ ರಾಸುಗಳು ಅಂದಾಜು 1.20 ಲಕ್ಷ ರೂ. ಮೌಲ್ಯದ್ದಾಗಿವೆ ಎಂದು ಅಂದಾಜಿಸಲಾಗಿದೆ.
ವಿಷ ಆಹಾರ ಸೇವಿಸಿದ ರಾಸುಗಳು ಒದ್ದಾಡುತ್ತಿದ್ದವು ಕೂಡಲೇ ರೈತರು ಪಶು ವೈದ್ಯರಿಗೆ ಕರೆ ಮಾಡಿದ್ದಾರೆ. ವೈದ್ಯರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಮೃತಪಟ್ಟಿದ್ದವು.
ಪಶುವೈದ್ಯ ಡಾ.ಗೋವಿಂದ ಹಾಗೂ ರಾಮ ಕೃಷ್ಣಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿ ವಿಷ ಆಹಾರ ಸೇವಿಸಿ ಮೃತಪಟ್ಟಿವೆ ಎಂದು ದೃಢಪಡಿಸಿದ್ದಾರೆ. ರಾಸುಗಳು ಸಾವನ್ನಪ್ಪಿದ್ದರಿಂದ ಸರ್ಕಾರದಿಂದ ಪರಿಹಾರ ಕೊಡಬೇಕು ಎಂದು ರೈತರು ಒತ್ತಾಯ ಮಾಡಿದ್ದಾರೆ. ಈ ಕುರಿತು ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.