ಬಾಗಲಕೋಟೆ: ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸಾವನ್ನಪ್ಪಿದ್ದು, ಡಿಕ್ಕಿ ಬಳಿಕ ನಿಯಂತ್ರಣ ತಪ್ಪಿ ಬಸ್ ಹಳ್ಳಕ್ಕೆ ನುಗ್ಗಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿರೇಪಡಸಲಗಿ ಗ್ರಾಮದಲ್ಲಿ ನಡೆದಿದೆ.
ಹಿರೇಪಡಸಲಗಿ-ನಾಗೂರ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಬಸ್ ಜಮಖಂಡಿಯಿಂದ ಹಿರೇಪಡಸಲಗಿ ಗ್ರಾಮಕ್ಕೆ ಹೊರಟಿತ್ತು. ಈ ಬಸ್ಸಿನಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ನಗರಕ್ಕೆ ಶಾಲೆ-ಕಾಲೇಜಿಗೆ ಹೋಗುತ್ತಾರೆ. ಇದೇ ವೇಳೆ ರಸ್ತೆ ಬದಿ ಬಯಲು ಶೌಚಕ್ಕೆ ಕುಳಿತಿದ್ದ ವೃದ್ಧೆಯನ್ನು ಉಳಿಸಲು ಹೋಗಿ ಬಸ್ ಎತ್ತಿನ ಬಂಡಿಗೆ ಗುದ್ದಿದೆ. ಪರಿಣಾಮ ಒಂದು ಎತ್ತು ಮೃತಪಟ್ಟಿದೆ. ಅಷ್ಟೇ ಅಲ್ಲದೇ ಎತ್ತಿನ ಬಂಡಿಗೆ ಡಿಕ್ಕಿ ಹೊಡೆದು ಬಸ್ ಹಳ್ಳಕ್ಕೆ ವಾಲಿದೆ. ಇದರಿಂದ ಬಂಡಿ ಹೊಡೆಯುವ ರೈತನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಇನ್ನೊಂದು ಎತ್ತು ಪ್ರಾಣಾಪಾಯದಿಂದ ಪಾರಾಗಿದೆ.
ಬಸ್ ಹಳ್ಳಕ್ಕೆ ನುಗ್ಗಿದ್ದ ಪರಿಣಾಮ ಐದು ಗ್ರಾಮಗಳ ವಿದ್ಯಾರ್ಥಿಗಳಿಗೆ ಇಂದು ಶಾಲೆ ಮತ್ತು ಕಾಲೇಜಿಗೆ ಹೋಗಲು ತೊಂದರೆಯಾಗಿದೆ. ಇಂದು ಮುಂಜಾನೆಯ ಮಂಜು, ಇಕ್ಕಟ್ಟಾದ ರಸ್ತೆಯಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv