ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಅವರನ್ನು ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಟ್ಟರು.
ಹೌದು. ಇಂದಿನ ರಾಜ್ಯ ಸಚಿವ ಸಂಪುಟ ಸಭೆಗೂ ಮುನ್ನ ಮೇ 31 ರಂದು ನಿವೃತ್ತರಾಗಲಿರುವ ಪಿ. ರವಿ ಕುಮಾರ್ ಅವರನ್ನು ಬೊಮ್ಮಾಯಿ ಆತ್ಮೀಯವಾಗಿ ಬೀಳ್ಕೊಟ್ಟರು. ನಿಯೋಜಿತ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಸಹ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಸಚಿವ ಸಂಪುಟದ ಸದಸ್ಯರು, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು. ಇದನ್ನೂ ಓದಿ: ಇಡೀ ದೇಶದಲ್ಲಿ ಹಿಂದುತ್ವ ಜಾಗೃತಿಯಾಗಲು RSS ಕಾರಣ: ಈಶ್ವರಪ್ಪ