Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇದು ಇಡೀ ಭಾರತದ ಶ್ರೇಷ್ಠ ಕ್ಷಣ – ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಆಹ್ವಾನ ಪಡೆದ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Ram Mandir | ಇದು ಇಡೀ ಭಾರತದ ಶ್ರೇಷ್ಠ ಕ್ಷಣ – ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಆಹ್ವಾನ ಪಡೆದ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ

Ayodhya Ram Mandir

ಇದು ಇಡೀ ಭಾರತದ ಶ್ರೇಷ್ಠ ಕ್ಷಣ – ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಆಹ್ವಾನ ಪಡೆದ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ

Public TV
Last updated: January 2, 2024 3:31 pm
Public TV
Share
3 Min Read
Venkatesh Prasad 2
SHARE

ಅಯೋಧ್ಯೆ: ಜನವರಿ 22ರಂದು ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ (Ram Lalla Pran Pratishtha) ಅಯೋಧ್ಯೆ ನಗರ ಸಿಂಗಾರಗೊಳ್ಳುತ್ತಿದೆ. ದೇಶದ ಮೂಲೆ ಮೂಲೆಯಿಂದ ಗಣ್ಯಾತಿಗಣ್ಯರ ಆಗಮನ ಫಿಕ್ಸ್‌ ಆಗಿದ್ದು, ಅಮಂತ್ರಣ ಪತ್ರಿಕೆ ಹಂಚಿಕೆ ಕಾರ್ಯ ಶುರುವಾಗಿದೆ. ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ನಡುವೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ಅವರಿಗೂ ಆಹ್ವಾನ ನೀಡಲಾಗಿದೆ. ಈ ಮೂಲಕ ಕ್ರೀಡಾಕ್ಷೇತ್ರದ ಗಮನವನ್ನೂ ಸೆಳೆಯಲಾಗಿದೆ. ಟೀಂ ಇಂಡಿಯಾದ ಉತ್ತಮ ಬೌಲರ್‌ಗಳ ಪೈಕಿ ವೆಂಕಟೇಶ್‌ ಪ್ರಸಾದ್‌ ಸಹ ಒಬ್ಬರು. ಭಾರತದ ಪರ ಆಡಿದ 33 ಟೆಸ್ಟ್‌ ಪಂದ್ಯಗಳಲ್ಲಿ 96 ವಿಕೆಟ್‌ ಹಾಗೂ 161 ಏಕದಿನ ಪಂದ್ಯಗಳಲ್ಲಿ 196 ವಿಕೆಟ್‌ ಪಡೆದು ಸಾಧನೆ ಮಾಡಿರುವುದಲ್ಲದೇ ಏಕದಿನ ವಿಶ್ವಕಪ್‌ ಟೂರ್ನಿಯ ಹಲವು ಪಂದ್ಯಗಳಲ್ಲಿ ದಾಖಲೆಗಳನ್ನ ಮಾಡಿದ್ದಾರೆ.

It was a hope and a desire, that in my lifetime Ram Mandir consecration happens.
And what a moment, not only is the consecration happening on 22nd January, but have the great fortune and blessings to be able to attend India’s greatest moment in my lifetime.
Thank you for the… pic.twitter.com/Sq1bjEZUxE

— Venkatesh Prasad (@venkateshprasad) January 2, 2024

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮಂದಿರ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಮಗೆ ಆಹ್ವಾನ ಬಂದಿರುವುದಾಗಿ ಅವರು ತಿಳಿಸಿದ್ದಾರೆ. ಈ ವಿಷಯವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: Ayodhya Ram Mandir – ಶ್ರೀರಾಮಲಲ್ಲಾ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರು

ನನ್ನ ಜೀವಿತಾವಧಿಯಲ್ಲಿ ಶ್ರೀರಾಮಮಂದಿರದ ನಿರ್ಮಾಣವಾಗುವ ಭರವಸೆ ಮತ್ತು ಬಯಕೆ ಇತ್ತು. ಇದು ಎಂತಹ ಕ್ಷಣ. ಜನವರಿ 22ರಂದು ಶಂಕುಸ್ಥಾಪನೆ ಮಾತ್ರ ನಡೆಯುತ್ತಿಲ್ಲ. ಭಾರತದ ಶ್ರೇಷ್ಠ ಕ್ಷಣದಲ್ಲಿ ಪಾಲ್ಗೊಳ್ಳುವ ದೊಡ್ಡ ಅದೃಷ್ಟ ಮತ್ತು ಆಶೀರ್ವಾದ ನನಗೆ ಸಿಕ್ಕಿದೆ. ನನ್ನ ಜೀವಮಾನದಲ್ಲಿಯೂ ಮಾತ್ರವಲ್ಲದೇ ಭಾರತದ ಅತ್ಯಂತ ವಿಶೇಷ ಕ್ಷಣವಿದು. ಆಹ್ವಾನಕ್ಕಾಗಿ ಧನ್ಯವಾದಗಳು. ಜೈ ಶ್ರೀ ರಾಮ್ ಎಂದು ವೆಂಕಟೇಶ್ ಪ್ರಸಾದ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

Venkatesh Prasad

4000 ಸಂತರಿಗೆ ಆಹ್ವಾನ:
ಜನವರಿ 22 ರಂದು ಪ್ರಾಣ ಪ್ರತಿಷ್ಠೆಗೆ 4000 ಸಂತರಿಗೆ ಆಹ್ವಾನಿಸಲಾಗಿದ್ದು, ಭಾರತದ ಎಲ್ಲಾ ಸಂಪ್ರದಾಯಗಳ ಸಂತರನ್ನು ಆಹ್ವಾನಿಸಲಾಗಿದೆ. ಅಂಡಮಾನ್ ನಿಕೋಬಾರ್ ಕರಾವಳಿಯಲ್ಲಿ ವಾಸಿಸುವ ಧಾರ್ಮಿಕ ಮುಖಂಡರು, ಜಾರ್ಖಂಡ್‌ನ ಬನವಾಸಿ ಪ್ರದೇಶದ ಧಾರ್ಮಿಕ ಮುಖಂಡರು ಮತ್ತು 125 ಸಂತ ಸಂಪ್ರದಾಯಗಳ ಧಾರ್ಮಿಕ ಮುಖಂಡರನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ: ಐಷಾರಾಮಿಯಷ್ಟೇ ದುಬಾರಿ ಅಯೋಧ್ಯಾ ಟೆಂಟ್‌ ಹೌಸ್ – ಒಂದು ದಿನಕ್ಕೆ ಎಷ್ಟು ಹಣ ಗೊತ್ತಾ?

rss

ಪ್ರಾಣ ತ್ಯಾಗ ಮಾಡಿದ ಕುಟುಂಬಗಳಿಗೆ ಆಹ್ವಾನ:
ರಾಮ ಮಂದಿರ ಆಂದೋಲನದಲ್ಲಿ ಪ್ರಾಣ ತ್ಯಾಗ ಮಾಡಿದ ರಾಮಭಕ್ತನ ಕುಟುಂಬದ ಸದಸ್ಯರು, ಕೈಗಾರಿಕಾ ಲೋಕದ ಮುಖ್ಯಸ್ಥರು, ತಿರುಪತಿ, ವೈಷ್ಣೋದೇವಿ, ಕಾಶಿ ವಿಶ್ವನಾಥ ದೇಗುಲ ಪ್ರಮುಖರನ್ನು ಪ್ರಾಣ ಪ್ರತಿಷ್ಠೆಗೆ ಆಹ್ವಾನಿಸಲಾಗಿದೆ. 25 ಆರ್‌ಎಸ್‌ಎಸ್ ಕಾರ್ಯಕರ್ತರು, 100 ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು, ಸಿಆರ್‌ಪಿಎಫ್ ಅಧಿಕಾರಿಗಳು ಮತ್ತು ಉತ್ತರ ಪ್ರದೇಶದ ನಿವೃತ್ತ ಪೊಲೀಸ್ ಅಧಿಕಾರಿಗಳಿಗೂ ಆಹ್ವಾನ ನೀಡಲಾಗಿದೆ. ಇದನ್ನೂ ಓದಿ:  ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಆಗಮಿಸಲಿರುವ ಗಣ್ಯರಿಗೆ ದೊರೆಯಲಿದೆ ವಿಶೇಷ ಉಡುಗೊರೆ – ಏನಿದು ಸ್ಪೆಷಲ್ ಗಿಫ್ಟ್?

ratan tata 1

ಟಾಟಾ, ಅಂಬಾನಿ, ಅದಾನಿಗೂ ಆಹ್ವಾನ:
ಲಾರ್ಸೆನ್ ಟೂಬ್ರೊ ಮುಖ್ಯಸ್ಥರ ಜೊತೆ, ರತನ್ ಟಾಟಾ ಅವರ ಉತ್ತರಾಧಿಕಾರಿ ಚಂದ್ರಶೇಖರನ್, ಅಂಬಾನಿ ಮತ್ತು ಅದಾನಿಗೂ ಆಹ್ವಾನ.

ಸಿನಿಮಾ, ಕ್ರೀಡೆಯ ಗಣ್ಯರು
ತಮಿಳು ಚಲನಚಿತ್ರ ನಟ ರಜನಿಕಾಂತ್, ಬ್ಯಾಡ್ಮಿಂಟನ್ ಆಟಗಾರ ಗೋಪಿಚಂದ್, ಗಾಯಕ ಗುರುದಾಸ್ ಮನ್, ಬಾಲಿವುಡ್ ನಟ ಅಮಿತಾಬ್ ಬಚ್ಚನ್, ನಟಿ ಮಾಧುರಿ ದೀಕ್ಷಿತ್, ಅರುಣ್ ಗೋವಿಲ್, ಚಲನಚಿತ್ರ ನಿರ್ಮಾಪಕ ಮಧುರ್ ಭಂಡಾರ್ಕರ್, ಮಹಾಭಾರತದಲ್ಲಿ ಕೃಷ್ಣನ ಪಾತ್ರ ನಿರ್ವಹಿಸಿದ ನಿತೀಶ್ ಭಾರದ್ವಾಜ್, ಚಲನಚಿತ್ರ ಸೆನ್ಸಾರ್ ಮಂಡಳಿಯ ಪ್ರಸೂನ್ ಜೋಶಿಯನ್ನು ಆಹ್ವಾನಿಸಿದ್ದಾರೆ.

TAGGED:AyodhyaRam Mandiruttar pradeshVenkatesh Prasadಟೀಂ ಇಂಡಿಯಾರಾಮಮಂದಿರ ಪ್ರಾಣಪ್ರತಿಷ್ಠಾರಾಮಲಲ್ಲಾವೆಂಕಟೇಶ್ ಪ್ರಸಾದ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
5 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
13 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
1 hour ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
1 hour ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
1 hour ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?