Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾದರಾಯನಪುರ ಗಲಾಟೆ- ಟ್ವಿಟ್ಟರ್ ಮೂಲಕ ಜಮೀರ್ ಅಹ್ಮದ್ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಾದರಾಯನಪುರ ಗಲಾಟೆ- ಟ್ವಿಟ್ಟರ್ ಮೂಲಕ ಜಮೀರ್ ಅಹ್ಮದ್ ಸ್ಪಷ್ಟನೆ

Bengaluru City

ಪಾದರಾಯನಪುರ ಗಲಾಟೆ- ಟ್ವಿಟ್ಟರ್ ಮೂಲಕ ಜಮೀರ್ ಅಹ್ಮದ್ ಸ್ಪಷ್ಟನೆ

Public TV
Last updated: April 21, 2020 12:11 pm
Public TV
Share
2 Min Read
Zameer
SHARE

-ಎಲ್ಲರೂ ಒಂದಾಗಿ ಬಾಳಬೇಕು, ಎಲ್ಲರೂ ಒಂದೇ ತಾಯಿಯ ಮಕ್ಕಳು

ಬೆಂಗಳೂರು: ಭಾನುವಾರ ರಾತ್ರಿ ನಡೆದ ಪಾದರಾಯನಪುರ ಗಲಾಟೆ ಮತ್ತು ಸೋಮವಾರ ಮಾಧ್ಯಮಗಳಿಗೆ ತಾವು ನೀಡಿದ ಹೇಳಿಕೆಗಳಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ಟ್ವಿಟ್ಟರ್‍ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಜಮೀರ್ ಅಹ್ಮದ್ ಟ್ವೀಟ್:
ಪಾದರಾಯನಪುರದಲ್ಲಿ ಇಂಥದ್ದೊಂದು ಘಟನೆ ನಡೆದಿದೆ ಎಂದು ನನ್ನಿಂದ ಇನ್ನೂ ಕೂಡ ನಂಬಲು ಸಾಧ್ಯವಾಗುತ್ತಿಲ್ಲ, ತಮ್ಮನ್ನೇ ಉಳಿಸಲು ಬಂದವರ ಮೇಲೆ ಜನ ಹಲ್ಲೆಗೆ ಮುಂದಾಗಿರುವುದು ಅತ್ಯಂತ ನೋವಿನ ಸಂಗತಿ. ನಾನು ಯಾರಿಗೂ ನನ್ನ ಅಪ್ಪಣೆ ಪಡೆದು ಚಾಮರಾಜಪೇಟೆಗೆ ಬರಬೇಕು ಎಂದು ಎಲ್ಲಿಯೂ ಹೇಳಿಲ್ಲ, ಹೇಳುವುದು ಇಲ್ಲ. ನನ್ನ ಕ್ಷೇತ್ರವೂ ಇತರ ಕ್ಷೇತ್ರಗಳಂತೆ ಒಂದು ಸಾಮಾನ್ಯ ಕ್ಷೇತ್ರ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿರುವುದಕ್ಕೆ ಸಾಕಷ್ಟು ನೋವಾಗಿದೆ.

Zameer Tweet

ಲಾಕ್‍ಡೌನ್ ಪ್ರಾರಂಭವಾದ ದಿನದಿಂದ ಹಿಡಿದು ನಿನ್ನೆಯ ಸಂಜೆಯವರೆಗೂ ಹಗಲು ರಾತ್ರಿಯೆನ್ನದೆ ನಾನು ಕ್ಷೇತ್ರದಲ್ಲಿದ್ದು, ಅಧಿಕಾರಿಗಳಿಗೆ ಸ್ಪಂದಿಸಿ, ಜನರು ಮತ್ತು ಸರ್ಕಾರದ ನಡುವಿನ ಕೊಂಡಿಯಾಗಿ ನಿಂತು ಯಾವುದೇ ರೀತಿಯ ಗೊಂದಲ ಆಗದಂತೆ ನೋಡಿಕೊಂಡಿದ್ದು ನಗರದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರಬೇಕೆಂದು. ಆದರೆ ನಿನ್ನೆಯ ಘಟನೆ ನಡೆಯಬಾರದಿತ್ತು, ನಡೆದಿದೆ. ಅದಕ್ಕೆ ನನ್ನ ವಿಷಾದವಿದೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಳ್ಳಲಿ. ಮುಂದೆ ಇಂತಹ ಘಟನೆಗಳು ನನ್ನ ಕ್ಷೇತ್ರ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ನಡೆಯದಂತೆ ಎಲ್ಲರೂ ಒಟ್ಟಾಗಿ ಶ್ರಮಿಸೋಣ.

Zameer Tweet 1

ನನ್ನ ಜನ ಈ ರೀತಿ ವರ್ತಿಸುತ್ತಾರೆ ಎಂದು ನಾನು ಎಂದು ಭಾವಿಸಿರಲಿಲ್ಲ. ಯಾರೋ ಒಂದಷ್ಟು ಜನರ ದುರ್ವರ್ತನೆಗೆ ಇಡೀ ಸಮುದಾಯವನ್ನು ದೂರುವುದು ಕೂಡ ಸರಿಯಲ್ಲ. ಧರ್ಮಾತೀತವಾಗಿ ಕೊರೊನಾ ವಿರುದ್ಧ ದೇಶ ಹೋರಾಡುತ್ತಿದೆ, ಇದು ಒಂದಾಗಬೇಕಾದ ಸಮಯವೇ ಹೊರತು ಸಮಾಜ ಒಡೆಯುವ ಸಮಯವಲ್ಲ. ಮಾಧ್ಯಮದ ಸ್ನೇಹಿತರು ಎಲ್ಲರೂ ಒಟ್ಟಾಗಿ ನನ್ನ ಮೇಲೆ ಮುಗಿಬಿದ್ದಿದ್ದರಿಂದ ಅನಿವಾರ್ಯವಾಗಿ ಉತ್ತರಿಸದೆ ಹೊರನಡೆಯಬೇಕಾಯಿತು. ಘಟನೆಯ ಬಗ್ಗೆ ಮಾಧ್ಯಮ ಮಿತ್ರರಿಗಿದ್ದ ಆಕ್ರೋಶ, ನೋವಿನ ಅರಿವು ನನಗಿದೆ. ಇಂತಹ ಒಂದು ದುರ್ಘಟನೆ ನಡೆದ ನಂತರ ಈ ರೀತಿ ಆಕ್ರೋಶಭರಿತ ಮಾತುಗಳು ಬರುವುದು ಸಹಜ.

Zameer Tweet 2

ಈ ಘಟನೆ ಸಂಭವಿಸದಂತೆ ಕೈಗೊಳ್ಳಬಹುದಾಗಿದ್ದ ಮುಂಜಾಗ್ರತಾ ಕ್ರಮಗಳ ಬಗ್ಗೆ ನಾನು ಆಡಿದ ಮಾತುಗಳಿಗೆ ಬೇರೆಯದೇ ಅರ್ಥ ನೀಡಿ ಕೆಲ ಸಚಿವರು ನನ್ನ ವಿರುದ್ಧ ಏನೇನು ಪದಗಳನ್ನು ಬಳಸಬಹುದೋ ಅವೆಲ್ಲವನ್ನೂ ಬಳಸಿ ನನ್ನನ್ನು ಹಾಡಿ ಹೊಗಳಿದ್ದಾರೆ, ಸಂತೋಷವಾಗಿದೆ. ಅವರಿಗೂ ಧನ್ಯವಾದ. ನಾನು ಏನು ಹೇಳಲು ಬಯಸಿದ್ದೆ ಅದನ್ನು ಹೇಳಲು ಎಲ್ಲಿಯೂ ನನಗೆ ಅವಕಾಶ ಸಿಗಲಿಲ್ಲ. ಹಿಂದೂ ಮುಸ್ಲಿಂ ಇರಲಿ ಎಲ್ಲರೂ ಒಂದಾಗಿ ಬಾಳಬೇಕು, ಎಲ್ಲರೂ ಒಂದೇ ತಾಯಿಯ ಮಕ್ಕಳು. ನಮ್ಮ ದೇಶವನ್ನು, ರಾಜ್ಯವನ್ನು ಕೊರೊನಾದಿಂದ ಕಾಪಾಡಬೇಕು. ಇದಕ್ಕೆ ನನ್ನ ಕ್ಷೇತ್ರದ ಜನರ ಸಂಪೂರ್ಣ ಸಹಕಾರ ದೊರೆಯಲಿದೆ.

Padarayanapur Pundaru 2 copy

ಆ ಒಂದು ಘಟನೆಯಿಂದ ನನ್ನ ಹೆಸರಿಗೆ ಮಸಿ ಬಳಿಯಲು ಎಷ್ಟೇ ಪ್ರಯತ್ನಿಸಿದರೂ ನಾನು ಜನಸೇವೆಯಿಂದ ಹಿಂದೆ ಸರಿಯುವವನಲ್ಲ. ಮಾನವೀಯತೆಯೇ ನನ್ನ ಧರ್ಮ. ಹಣ, ಅಧಿಕಾರ ಯಾವುದೂ ಶಾಶ್ವತವಲ್ಲ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ನನ್ನ ಸಹೋದರ, ಸಹೋದರಿಯರಿದ್ದಂತೆ. ಇವರೆಲ್ಲರ ಜೊತೆ ಸದಾ ಇರುತ್ತೇನೆ. ಮುಂದೆ ಇಂಥ ಘಟನೆ ಮತ್ತೆ ಮರುಕಳಿಸದಂತೆ ನೋಡಿಕೊಳ್ಳಲು ಅಗತ್ಯ ಮುಂಜಾಗ್ರತೆ ವಹಿಸಲಾಗುತ್ತದೆ. ನನ್ನ ಕ್ಷೇತ್ರದ ಜನತೆ ಎಂದಿನಂತೆ ಮುಂದೆಯೂ ಸರ್ಕಾರ, ವೈದ್ಯಕೀಯ ಸಿಬ್ಬಂದಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತಾರೆ ಎಂಬ ಭರವಸೆ ನನಗಿದೆ. ನಮ್ಮೆಲ್ಲರ ಗುರಿ ಕೊರೊನಾ ನಿರ್ಮೂಲನೆಯೊಂದೇ ಆಗಿರಲಿ.

TAGGED:bengalurucongress MLACorona LockdownCorona VirusCovid 19PadarayanapuraPublic TVzameer ahmedಕಾಂಗ್ರೆಸ್ಕೊರೊನಾ ವೈರಸ್ಕೋವಿಡ್ 19ಜಮೀರ್ ಅಹ್ಮದ್ಪಬ್ಲಿಕ್ ಟಿವಿಪಾದರಾಯನಪುರಬೆಂಗಳೂರು
Share This Article
Facebook Whatsapp Whatsapp Telegram

Cinema news

AR Rahman
8 ವರ್ಷಗಳಿಂದ ಬಾಲಿವುಡ್‌ನಲ್ಲಿ ಅವಕಾಶ ಸಿಕ್ಕಿಲ್ಲ, ಇದಕ್ಕೆ ಕೋಮುವಾದಿ ಮನಸ್ಥಿತಿ ಕಾರಣವಿರಬಹುದು: ಎ.ಆರ್ ರೆಹಮಾನ್
Bollywood Cinema Latest Main Post National
Khushi Mukherjee 2
ʻನನಗೆ ಸೂರ್ಯಕುಮಾರ್‌ ತುಂಬಾ ಮೆಸೇಜ್ ಕಳಿಸ್ತಿದ್ದʼ ಎಂದಿದ್ದ ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!
Bollywood Cinema Cricket Latest Sports Top Stories
suresh gopi udupi sri krishna matha
ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ, ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ
Cinema Latest South cinema Top Stories Udupi
Shivarajkumar
100% ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲೋದು – ಟೇಬಲ್‌ ಕುಟ್ಟಿ ಹೇಳಿದ ಶಿವಣ್ಣ
Cinema Latest Main Post Sandalwood

You Might Also Like

RCB 4
Cricket

ಶ್ರೇಯಾಂಕ ಪುಟ್ಟಿಯ ಸ್ಪಿನ್‌ ಮ್ಯಾಜಿಕ್‌ಗೆ ಗುಜರಾತ್‌ ಪಲ್ಟಿ – ಆರ್‌ಸಿಬಿಗೆ ಹ್ಯಾಟ್ರಿಕ್‌ ಜಯ

Public TV
By Public TV
4 hours ago
Bhimanna Khandre 2
Bidar

ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ

Public TV
By Public TV
4 hours ago
Laal Bagh Flower Show
Bengaluru City

ಲಾಲ್‌ಬಾಗ್ ಪ್ಲವರ್ ಶೋಗೆ ಭರ್ಜರಿ ರೆಸ್ಪಾನ್ಸ್ – ಎರಡೇ ದಿನದಲ್ಲಿ 28.3 ಲಕ್ಷ ರೂ. ಆದಾಯ

Public TV
By Public TV
4 hours ago
01 15
Big Bulletin

ಬಿಗ್‌ ಬುಲೆಟಿನ್‌ 16 January 2026 ಭಾಗ-1

Public TV
By Public TV
5 hours ago
02 15
Big Bulletin

ಬಿಗ್‌ ಬುಲೆಟಿನ್‌ 16 January 2026 ಭಾಗ-2

Public TV
By Public TV
5 hours ago
033
Big Bulletin

ಬಿಗ್‌ ಬುಲೆಟಿನ್‌ 16 January 2026 ಭಾಗ-3

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?