ರಾಜ್ಯದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ ಗರಿ

Public TV
1 Min Read
padma shri awardees karnataka

ನವದೆಹಲಿ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಾರೆ. ಕರ್ನಾಟಕ ರಾಜ್ಯದ ಮೂವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಡಾ. ವಿಜಯಲಕ್ಷ್ಮಿ ದೇಶಮಾನೆ, ವೆಂಕಪ್ಪ ಅಂಬಾಜೀ ಸುಗಟ್ಕೇರ್ ಹಾಗೂ ಭೀಮವ್ವ ದೊಡ್ಡ ಬಾಲಪ್ಪಗೆ ಪ್ರಶಸ್ತಿ ಲಭಿಸಿದೆ.

ಯಾರ‍್ಯಾರಿಗೆ ಪ್ರಶಸ್ತಿ?
ನರೇನ್ ಗುರುಂಗ್ (ಜಾನಪದ ಗಾಯಕ) – ನೇಪಾಳ, ಹರಿಮನ್ ಶರ್ಮಾ (ಸೇಬು ಬೆಳೆಗಾರ) – ಹಿಮಾಚಲ ಪ್ರದೇಶ, ಜುಮ್ಡೆ ಯೊಮ್ಗಮ್ ಗಾಮ್ಲಿನ್ (ಸಾಮಾಜಿಕ ಕಾರ್ಯಕರ್ತ) – ಅರುಣಾಚಲ ಪ್ರದೇಶ, ವಿಲಾಸ್ ಡಾಂಗ್ರೆ (ಹೋಮಿಯೋಪತಿ ವೈದ್ಯ) – ಮಹಾರಾಷ್ಟ್ರ, ಜೋನಾಸ್ ಮಾಸೆಟ್ಟಿ (ವೇದಾಂತ ಗುರು) ಬ್ರೆಜಿಲ್, ಹರ್ವಿಂದರ್ ಸಿಂಗ್ (ಪ್ಯಾರಾಲಿಂಪಿಯನ್ ಚಿನ್ನದ ಪದಕ ವಿಜೇತ) ಹರಿಯಾಣ, ಭೀಮ್ ಸಿಂಗ್ ಭಾವೇಶ್ (ಸಮಾಜ ಕೆಲಸ) ಬಿಹಾರ, ಪಿ.ದಕ್ಷಿಣ ಮೂರ್ತಿ (ಡೋಲು ಕಲಾವಿದ) ಪುದುಚೇರಿ, ಎಲ್. ಹ್ಯಾಂಗ್‌ಥಿಂಗ್ (ಕೃಷಿ-ಹಣ್ಣುಗಳು) ನಾಗಾಲ್ಯಾಂಡ್, ಬೇರು ಸಿಂಗ್ ಚೌಹಾಣ್ (ಜಾನಪದ ಗಾಯಕ) – ಮಧ್ಯಪ್ರದೇಶ, ಶೇಖಾ ಎ.ಜೆ. ಅಲ್ ಸಬಾಹ್ (ಯೋಗ) – ಕುವೈತ್

Share This Article