ಕೊರೊನಾ ಭೀತಿ – ಪದ್ಮ ಪುರಸ್ಕಾರ ಪ್ರದಾನ ಮುಂದೂಡಿಕೆ

Public TV
1 Min Read
padma award

ನವದೆಹಲಿ: ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಏಪ್ರಿಲ್ 3ರಂದು ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‍ನಲ್ಲಿ ನಡೆಯಬೇಕಿದ್ದ ಪದ್ಮ ಪುರಸ್ಕಾರ ಪ್ರದಾನ ಕಾರ್ಯಕ್ರಮ ಅರ್ನಿದಿಷ್ಟವಾಧಿಗೆ ಮುಂದೂಡಿಕೆಯಾಗಿದೆ.

ಭಾರತದಲ್ಲಿ ಸೊಂಕಿತರ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಈ ತಿರ್ಮಾನ ತೆಗೆದುಕೊಂಡಿದ್ದು, ಮುಂದಿನ ದಿನಾಂಕ ನಿಗದಿ ಆಗುವರೆಗೂ ಕಾರ್ಯಕ್ರಮ ಮುಂದೂಡಿಕೆಯಾಗಿದೆ ಎಂದು ತನ್ನ ಪತ್ರದಲ್ಲಿ ತಿಳಿಸಿದೆ.

padma award letter

2019ರ ಗಣರಾಜೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಒಟ್ಟು ಏಳು ಗಣ್ಯರಿಗೆ ಪದ್ಮವಿಭೂಷಣ, 16 ಮಂದಿಗೆ ಪದ್ಮಭೂಷಣ, 118 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ.

ಕರ್ನಾಟಕದ ತುಳಸಿಗೌಡ, ಹರೆಕಲ ಹಾಜಬ್ಬ, ಎಂಪಿ ಗಣೇಶ್, ಕೆ.ವಿ ಸಂಪತ್ ಕುಮಾರ್, ಜಯಲಕ್ಷ್ಮಿ, ಉದ್ಯಮಿ ವಿಜಯ್ ಸಂಕೇಶ್ವರ್, ಬೆಂಗಳೂರು ಗಂಗಾಧರ್, ಭರತ್ ಗೋಯಂಕಾಗೆ ಪದ್ಮ ಶ್ರೀ, ಪೇಜಾವರ ಶ್ರೀಗಳಿಗೆ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *