Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

125 ವಯಸ್ಸಿನ ಪದ್ಮಶ್ರೀ ಪುರಸ್ಕೃತ ಸ್ವಾಮಿ ಶಿವಾನಂದರ ಆರೋಗ್ಯದ ಗುಟ್ಟೇನು ಗೊತ್ತಾ?

Public TV
Last updated: March 22, 2022 5:24 pm
Public TV
Share
3 Min Read
SwamiSivananda
SHARE

ನವದೆಹಲಿ: ಯೋಗ ಕ್ಷೇತ್ರದ ಸಾಧನೆಗಾಗಿ ಸ್ವಾಮಿ ಶಿವಾನಂದ ಅವರು ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. 125 ವಯಸ್ಸಿನಲ್ಲಿಯೂ ಸ್ಥಿರ ಆರೋಗ್ಯ, ಸದೃಢ ದೇಹವನ್ನು ಹೊಂದಿರುವ ಇವರು ತುಂಬಾ ವಿಭಿನ್ನ ಮತ್ತು ಸರಳ ಆಹಾರ ಪದ್ಧತಿಯನ್ನು ಅನುಸರಿಸುತ್ತಾರೆ.

125 ವರ್ಷ ವಯಸ್ಸಿನ ಯೋಗ ದಂತಕಥೆ ಆಗಿರುವ ಸ್ವಾಮಿ ಶಿವಾನಂದ ಅವರು ನಿನ್ನೆ ರಾಷ್ಟ್ರಪತಿ ಭವನದಲ್ಲಿ ಅನೇಕ ಮಹಾನ್ ಸಾಧಕರಿಗೆ ಪದ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಸ್ವೀಕರಿಸಿದ್ದಾರೆ. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಸೇರಿ ಇನ್ನೂ ಅನೇಕ ಗಣ್ಯರು ಭಾಗವಹಿಸಿದ್ದರು.

ಈ ಸಮಾರಂಭದಲ್ಲಿ ತುಂಬ ಗಮನಸೆಳೆದವರು ವಾರಾಣಸಿಯ ಯೋಗ ಗುರು ಸ್ವಾಮಿ ಶಿವಾನಂದ  ಅವರು ನಿನ್ನೆ ಪ್ರಶಸ್ತಿ ಸ್ವೀಕಾರ ಮಾಡುವ ವೇಳೆ ಇವರು ನಡೆದುಕೊಂಡ ರೀತಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಗೌರವ ಸ್ವೀಕರಿಸುವ ಮೊದಲು ಪ್ರಧಾನಿ, ರಾಷ್ಟ್ರಪತಿಗಳ ಮುಂದೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಯೋಗ ಗುರುವಿನ ಗೌರವಾರ್ಥವಾಗಿ, ಪ್ರಧಾನಿ ಮೋದಿ ತಕ್ಷಣವೇ ನಮಸ್ಕರಿಸಿ ನೆಲವನ್ನು ಮುಟ್ಟಿದರು. ಗುರು ಸ್ವಾಮಿ ಶಿವಾನಂದ ಅವರು ಬಿಳಿ ಕುರ್ತಾ ಮತ್ತು ಧೋತಿಯನ್ನು ಧರಿಸಿ ತುಂಬಾ ಸರಳವಾಗಿ ಕಾಣಿಸಿಕೊಂಡಿದ್ದರು.

swami sivananda and modi

ಹುಟ್ಟು: ಶಿವಾನಂದ ಬಾಬಾ ಅವರು 1896ರ ಆಗಸ್ಟ್ 8ರಂದು ಅವಿಭಜಿತ ಭಾರತದ ಸೈಲ್ಹೆಟ್‍ನಲ್ಲಿ ಜನಿಸಿದರು. 6 ನೇ ವಯಸ್ಸಿನಲ್ಲಿಯೇ ತಾಯಿ ಮತ್ತು ತಂದೆಯನ್ನು ಕಳೆದುಕೊಂಡವರು. ನಂತರ ಪಶ್ಚಿಮ ಬಂಗಾಳದ ನಬದ್ವೀಪ್‍ನಲ್ಲಿರುವ ಗುರೂಜಿಯ ಆಶ್ರಮದಲ್ಲಿ ತಂಗಿದ್ದರು. ಗುರು ಓಂಕಾರಾನಂದ ಗೋಸ್ವಾಮಿಗಳು ಅವರನ್ನು ನೋಡಿಕೊಂಡರು ಮತ್ತು ಎಲ್ಲಾ ಪ್ರಾಯೋಗಿಕ ಮತ್ತು ಆಧ್ಯಾತ್ಮಿಕ ಶಿಕ್ಷಣವನ್ನು ನೀಡಿದರು. ಮುಂಜಾನೆಯ ಯೋಗವನ್ನು ಒಳಗೊಂಡಿರುವ ಅವರ ಶಿಸ್ತುಬದ್ಧ ಜೀವನವನ್ನು ಅಳವಡಿಸಿಕೊಂಡರು. ಗುರು ಓಂಕಾರಾನಂದ ಅವರ ಶಿಷ್ಯರಾದರು. 1925ರ ಹೊತ್ತಿಗೆ ಗುರುವಿನ ಆಣತಿ ಮೇರೆಗೆ ಪ್ರಪಂಚ ಪರ್ಯಟನೆ ಮಾಡಲು ತೆರಳಿದ್ದರು. ಸುಮಾರು 34 ವರ್ಷಗಳ ಕಾಲ ಇವರು ದೇಶ-ವಿದೇಶಗಳನ್ನು ಸುತ್ತಿದ್ದಾರೆ. ನಂತರ ಯೋಗದಲ್ಲಿ ಮಹಾನ್ ಸಾಧನೆ ಮಾಡಿದ್ದಾರೆ.

ಜೀವನ: ಸದ್ಯ ಅವರು ವಾರಾಣಸಿಯ ದುರ್ಗಾಕುಂಡ್‍ನಲ್ಲಿ ಮನೆಯೊಂದರ ಮೂರನೇ ಮಹಡಿಯಲ್ಲಿ ವಾಸವಾಗಿದ್ದಾರೆ. ಪ್ರತಿದಿನ ಎರಡು ಬಾರಿ ಮೆಟ್ಟಿಲು ಹತ್ತಿ, ಇಳಿಯುತ್ತಾರೆ. ಅವರು ಯಾರದ್ದೂ ಸಹಾಯವಿಲ್ಲದೆ ಮೆಟ್ಟಿಲು ಹತ್ತುತ್ತಾರೆ ಎಂದು ಅವರ ಶಿಷ್ಯಂದಿರು ತಿಳಿಸಿದ್ದಾರೆ. ಶಿವಾನಂದ ಬಾಬಾರ ತಂದೆ-ತಾಯಿ ಸಾಯಲು ಕಾರಣ ಹಸಿವು. ಇವರೂ ಕೂಡ ಬಾಲ್ಯವನ್ನೆಲ್ಲ ಬಹುತೇಕ ಅರ್ಧಹೊಟ್ಟೆಯಲ್ಲೇ ಕಳೆದಿದ್ದಾರೆ. ಸ್ವಾಮಿ ಶಿವಾನಂದರು ತಮ್ಮ ಜೀವನವನ್ನು ಮಾನವ ಸಮಾಜದ ಕಲ್ಯಾಣಕ್ಕಾಗಿ ಮುಡಿಪಾಗಿಟ್ಟಿದ್ದಾರೆ.

ಆಹಾರ ಪದ್ಧತಿ: ಅವರ ಶಿಸ್ತಿನ ಯೋಗದ ಜೊತೆಗೆ, ಅವರ ಆಹಾರ ಪದ್ಧತಿಗಳು ನಾವೆಲ್ಲರೂ ಗಮನಿಸಬೇಕಾದ ಸಂಗತಿಯಾಗಿದೆ. ಅವುಗಳಲ್ಲಿ ಹೆಚ್ಚಿನವುಗಳನ್ನು ಅನುಸರಿಸುವುದು ಸುಲಭವಲ್ಲ. ಆದರೆ ಯೋಗ ಗುರುಗಳಿಗೆ ಇದು ರೋಗ ಮುಕ್ತ ಮತ್ತು ಉದ್ವೇಗ-ಮುಕ್ತ ಜೀವನವನ್ನು ನೀಡಿದೆ.

ಸ್ವಾಮಿ ಶಿವಾನಂದರು ಯಾವಾಗಲೂ ಎಣ್ಣೆಯಿಲ್ಲದ ಮತ್ತು ಮಸಾಲೆಗಳಿಲ್ಲದ ಅತ್ಯಂತ ಸರಳವಾದ ಆಹಾರವನ್ನು ಸೇವಿಸುತ್ತಾರೆ. ಅನ್ನ ಮತ್ತು ಬೇಯಿಸಿದ ದಾಲ್  ತಿನ್ನಲು ಇಷ್ಟಪಡುತ್ತಾರೆ. ಅವರು ಹಾಲು ಅಥವಾ ಹಣ್ಣುಗಳನ್ನು ತೆಗೆದುಕೊಳ್ಳುವುದಿಲ್ಲ, ಏಕೆಂದರೆ ಅವರು ಅಲಂಕಾರಿಕ ಆಹಾರಗಳು ಎಂದು ಭಾವಿಸುತ್ತಾರೆ.

ನಾನು ಸರಳ ಮತ್ತು ಶಿಸ್ತಿನ ಜೀವನವನ್ನು ನಡೆಸುತ್ತೇನೆ. ನಾನು ತುಂಬಾ ಸರಳವಾಗಿ ತಿನ್ನುತ್ತೇನೆ. ಎಣ್ಣೆ ಅಥವಾ ಮಸಾಲೆಗಳಿಲ್ಲದ ಬೇಯಿಸಿದ ಆಹಾರ, ಅಕ್ಕಿ ಮತ್ತು ಒಂದೆರಡು ಹಸಿರು ಮೆಣಸಿನಕಾಯಿಗಳೊಂದಿಗೆ ಬೇಯಿಸಿದ ದಾಲ್ ಎಂದು ಈ ಹಿಂದೆ ಅವರ ಖಾಸಗಿ ವಾಹಿನಿಯೊಂದಕ್ಕೆ ಹೇಳಿದ್ದಾರೆ.

125 ನೇ ವಯಸ್ಸಿನಲ್ಲಿಯೂ ಸಹ, ಅವರು ಇನ್ನೂ ಫಿಟ್ ಆಗಿದ್ದಾರೆ. ಯಾವುದೇ ವೈದ್ಯಕೀಯ ತೊಂದರೆಗಳಿಲ್ಲ. ಸೂರ್ಯ ಹುಟ್ಟುವ 3 ಗಂಟೆಗೂ ಮುನ್ನ ಎಚ್ಚರಗೊಳ್ಳುತ್ತಾರೆ. ಅವರ ಆರೋಗ್ಯಕರ ಮತ್ತು ದೀರ್ಘಾವಧಿಯ ಜೀವನವು ಹೆಚ್ಚಾಗಿ ಅಂತರರಾಷ್ಟ್ರೀಯ ಮಾಧ್ಯಮಗಳ ಗಮನವನ್ನು ಸೆಳೆಯುತ್ತದೆ.

TAGGED:bengaluruswami sivanandaವಾರಾಣಸಿಶಿವಾನಂದ ಬಾಬಾ
Share This Article
Facebook Whatsapp Whatsapp Telegram

Cinema Updates

madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
8 hours ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
1 day ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
1 day ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
2 days ago

You Might Also Like

tractor fire
Chamarajanagar

ಬೆಂಕಿ ಬಿದ್ದರೂ ತಿಳಿಯದೇ ಟ್ರ್ಯಾಕ್ಟರ್‌ ಚಾಲನೆ- ನಾಲ್ವರು ಅಪಾಯದಿಂದ ಪಾರು

Public TV
By Public TV
33 minutes ago
Extreme Poverty India
Latest

ಭಾರತಕ್ಕೆ ಗುಡ್‌ನ್ಯೂಸ್: ದೇಶದ ಕಡುಬಡತನ ಪ್ರಮಾಣ 27.1% ರಿಂದ 5.3% ಕ್ಕೆ ಇಳಿಕೆ

Public TV
By Public TV
1 hour ago
BSY Grandson Wedding CM Siddaramaiah
Bengaluru City

ಬಿಎಸ್‌ವೈ ಮೊಮ್ಮಗನ ಆರತಕ್ಷತೆಯಲ್ಲಿ ಸಿಎಂ, ಡಿಸಿಎಂ ಭಾಗಿ

Public TV
By Public TV
2 hours ago
bengaluru stambede rcb
Bengaluru City

ಚಿನ್ನಸ್ವಾಮಿ ಕಾಲ್ತುಳಿತ – ಪರಿಹಾರ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ಸರ್ಕಾರ

Public TV
By Public TV
2 hours ago
MC Sudhakar
Chikkaballapur

ಕಾಲ್ತುಳಿತ ಘಟನೆಯಿಂದ ಸಿಎಂ ಸಿದ್ದರಾಮಯ್ಯ ಬಹಳ ನೊಂದಿದ್ದಾರೆ: ಎಂ.ಸಿ ಸುಧಾಕರ್

Public TV
By Public TV
3 hours ago
man mums hugs
Latest

5 ನಿಮಿಷ ತಬ್ಬಿಕೊಳ್ಳಲು 600 ರೂ. ಕೊಡ್ತಾರಂತೆ ಚೀನಾ ಮಹಿಳೆಯರು!

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?