ಬಿಪಿನ್‌ ರಾವತ್‌ಗೆ ಪದ್ಮವಿಭೂಷಣ – ರಾಜ್ಯದ ಐವರಿಗೆ ಪದ್ಮಶ್ರೀ

Public TV
2 Min Read
bipin rawat

ನವದೆಹಲಿ: ವಿವಿಧ ಕ್ಷೇತ್ರದಲ್ಲಿ ಸಾಧೆನೆ ಮಾಡಿದವರಿಗೆ ನಾಳೆ ಗಣರಾಜ್ಯೋತ್ಸವದಲ್ಲಿ ಪದ್ಮವಿಭೂಷಣ, ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈಗಾಗಲೇ ಪ್ರಶಸ್ತಿ ಪಡೆಯುವ ಸಾಧಕರ ಪಟ್ಟಿಯನ್ನು ಪ್ರಕಟ ಮಾಡಲಾಗಿದೆ.

Sundar Pichai

ಕೇಂದ್ರ ಸರ್ಕಾರದ ಅತ್ಯುನ್ನತ ಗೌರವವಾದ ಪದ್ಮ ಪ್ರಶಸ್ತಿಗಳು ಪ್ರಕಟವಾಗಿದೆ. ರಾಜ್ಯದ ಐವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಬಾರಿ ಪದ್ಮವಿಭೂಷಣ, ಪದ್ಮಭೂಷಣ ಎರಡು ಪ್ರಶಸ್ತಿಯೂ ಕರ್ನಾಟಕಕ್ಕೆ ಸಿಕ್ಕಿಲ್ಲ.ಕೇಂದ್ರ ಸರ್ಕಾರದ ಅತ್ಯುನ್ನತ ಗೌರವವಾದ ಪದ್ಮ ಪ್ರಶಸ್ತಿಗಳು ಪ್ರಕಟವಾಗಿದೆ. ರಾಜ್ಯದ ಐವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಬಾರಿ ಪದ್ಮವಿಭೂಷಣ, ಪದ್ಮಭೂಷಣ ಎರಡು ಪ್ರಶಸ್ತಿಯೂ ಕರ್ನಾಟಕಕ್ಕೆ ಸಿಕ್ಕಿಲ್ಲ.

ರಾಜ್ಯದ ಐದು ಜನಕ್ಕೆ ಪದ್ಮಶ್ರೀ, ಪದ್ಮವಿಭೂಷಣ, ಪದ್ಮಭೂಷಣ ಎರಡು ಪ್ರಶಸ್ತಿ ಕರ್ನಾಟಕಕ್ಕೆ ಈ ಬಾರಿ ಇಲ್ಲ. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾಗುತ್ತದೆ. ಈ ಬಾರಿ ಪದ್ಮ ಪ್ರಶಸ್ತಿ ಪಡೆಯುವ ಸಾಧಕರ ಪಟ್ಟಿಯನ್ನು ಈಗಾಲಗಲೇ ಬಿಡುಗಡೆ ಮಾಡಲಾಗಿದೆ. ಪದ್ಮ ಪ್ರಶಸ್ತಿಗಳನ್ನು 1954 ರಲ್ಲಿ ಸ್ಥಾಪಿಸಲಾಯಿತು ಮತ್ತು ಶಿಕ್ಷಣ, ಕಲೆ, ಸಾಹಿತ್ಯ, ವಿಜ್ಞಾನ, ನಟನೆ, ಸಮಾಜ ಸೇವೆ ಮತ್ತು ಸಾರ್ವಜನಿಕ ವ್ಯವಹಾರಗಳು ಸೇರಿದಂತೆ ಚಟುವಟಿಕೆಯ ವಿವಿಧ ಕ್ಷೇತ್ರಗಳಲ್ಲಿ ಅವರ ವಿಶಿಷ್ಟ ಕೊಡುಗೆಗಾಗಿ ಭಾರತದ ನಾಗರಿಕರಿಗೆ ನೀಡಲಾಗುತ್ತದೆ.

siddalingaiah e1623414550944

ಈ  128 ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲು ರಾಷ್ಟ್ರಪತಿಗಳು ಅನುಮೋದಿಸಿದ್ದಾರೆ. ಈ ಬಾರಿ 4 ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಪದ್ಮಶ್ರೀ ಪ್ರಶಸ್ತಿಗಳು ಇವೆ. ಪ್ರಶಸ್ತಿ ಪುರಸ್ಕೃತರಲ್ಲಿ 34 ಮಹಿಳೆಯರು ಮತ್ತು 10 ವಿದೇಶಿಯರು ಮತ್ತು 13 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಇದ್ದಾರೆ.

gulam nabi azad

ಸಿದ್ದಲಿಂಗಯ್ಯಗೆ ಮರಣೋತ್ತರ ಪದ್ಮಪ್ರಶಸ್ತಿ, ಅಮ್ಮಯ್ ಮಹಾಲಿಂಗ ನಾಯ್ಕ್ ಕೃಷಿ ಕ್ಷೇತ್ರದ ಸಾಧನೆಗೆ, ಅಬ್ದುಲ್ ಖಾದರ್ ನಡಕಟ್ಟಿನ್, ನಾವಿನ್ಯತೆ ಕ್ಷೇತ್ರಕ್ಕೆ, ಎಚ್.ಆರ್. ಕೇಶವಮೂರ್ತಿ ಕಲಾ ಕ್ಷೇತ್ರಕ್ಕೆ , ಸುಬ್ಬಣ್ಣ ಅಯ್ಯಪನ್, ಸೈನ್ಸ್ ಅಂಡ್ ಇಂಜನಿಯರಿಂಗ್ ಕ್ಷೇತ್ರದ ಸೇವೆಗಾಗಿ ಪದ್ಮಪ್ರಶಸ್ತಿ.

NEERAJ CHOPRA

ಬಿಪಿನ್ ರಾವತ್‍ಗೆ ಪದ್ಮವಿಭೂಷಣ ಮರಣೋತ್ತರ ಪ್ರಶಸ್ತಿ, ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ, ಕಾಂಗ್ರೆಸ್ ನಾಯಕ ಗುಲಾಂ ಅಜಾದ್‍ಗೆ ಪದ್ಮಭೂಷಣ ಪ್ರಶಸ್ತಿ, ಸುಂದರರಾಜನ್ ಪಿಚೈ – ಪದ್ಮಭೂಷಣ, ಓಲಂಪಿಕ್ ಕ್ರೀಡಾಪಟು ನೀರಜ್ ಚೋಪ್ರಾಗೆ ಪದ್ಮಶ್ರೀ ನೀಡಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *