– ಭಾರತದ ವಿರುದ್ಧ ಮತ್ತೆ ವಿಷಕಾರಿದ ಸೈಫುಲ್ಲಾ ಖಾಲಿದ್
ಇಸ್ಲಾಮಾಬಾದ್: ಪಹಲ್ಗಾಮ್ನ (Pahalgam) ಬೈಸರನ್ ಕಣಿವೆಯಲ್ಲಿ ಹಿಂದೂಗಳ ನರಮೇಧ ಮಾಡಿದ ಕೃತ್ಯದ ಮಾಸ್ಟರ್ ಮೈಂಡ್ ಸೈಫುಲ್ಲಾ ಖಾಲಿದ್ (Saifullah Khalid) ಪಾಕಿಸ್ತಾನದ ರ್ಯಾಲಿಯೊಂದರಲ್ಲಿ ಹಿರಿಯ ರಾಜಕಾರಣಿಗಳೊಂದಿಗೆ ವೇದಿಕೆ ಹಂಚಿಕೊಂಡಿದ್ದಾನೆ. ಜೊತೆಗೆ ವೇದಿಕೆ ಭಾಷಣದಲ್ಲಿ ಭಾರತದ ವಿರುದ್ಧ ಮತ್ತೆ ವಿಷಕಾರಿರುವುದು ಕಂಡುಬಂದಿದೆ.
ಲಷ್ಕರ್-ಎ-ತೈಬಾ (LeT) ಉಪ ಮುಖ್ಯಸ್ಥನಾಗಿರುವ ಸೈಫುಲ್ಲಾ ಖಾಲಿದ್ ಮುಂಬೈ ದಾಳಿ ಸೂತ್ರಧಾರ ಹಫೀಜ್ ಸಯೀದ್ನ (Hafiz Saeed) ಆಪ್ತನೂ ಕೂಡ ಆಗಿದ್ದಾನೆ. ಪಾಕಿಸ್ತಾನದ ಪಂಜಾಬ್ನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ರಾಜಕಾರಣಿ ಮಲಿಕ್ ಅಹ್ಮದ್ ಖಾನ್ ಜೊತೆಗೆ ವೇದಿಕೆ ಹಂಚಿಕೊಂಡಿರುವುದು ಕಂಡುಬಂದಿದೆ. ಅಲ್ಲದೇ ಪಾಕ್ ಸೇನೆಯಿಂದಲೇ ಅವನಿಗೆ ರಕ್ಷಣೆ ನೀಡಲಾಗಿದೆ. ಇದೇ ವೇದಿಕೆಯಲ್ಲಿ ಎಲ್ಇಟಿ ಸ್ಥಾಪಕ ಮತ್ತು ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಅವರ ಪುತ್ರ ತಲ್ಹಾ ಸಯೀದ್ ಕೂಡ ಇದ್ದಾನೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ.
ಬಳಿಕ ವೇದಿಕೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿರುವ ಸೈಫುಲ್ಲಾ ಖಾಲಿದ್, ಭಾರತ, ಹಿಂದೂಗಳ ವಿರುದ್ಧ ವಿಷ ಕಾರಿದ್ದಾನೆ. ಜೊತೆಗೆ ಆಪರೇಷನ್ ಸಿಂಧೂರದಲ್ಲಿ ಹತ್ಯೆಗೀಡಾದ ಪಾಕಿಸ್ತಾನಿ ಉಗ್ರರರನ್ನ ʻಹುತಾತ್ಮರುʼ ಎಂದು ಕರೆದಿದ್ದಾನೆ. ಇದನ್ನೂ ಓದಿ: ಭಾರತ ಜಲಯುದ್ಧ; ಇತ್ತ ಅಫ್ಘಾನಿಸ್ತಾನದಿಂದಲೂ ಶಾಕ್ ಆತಂಕ, ಪಾಕ್ನಲ್ಲಿ ಚೀನಾ ಅಣೆಕಟ್ಟೆ ನಿರ್ಮಾಣ ಯಾಕೆ?
ಏಪ್ರಿಲ್ 22ರಂದು ಭಯೋತ್ಪಾದಕ ದಾಳಿ ನಡೆದಿರುವ ಬಗ್ಗೆ ನಾನು ಮಾಹಿತಿ ಪಡೆದುಕೊಂಡೆ. ಅದಾದಮೇಲೆ ಭಾರತ ನನ್ನನ್ನು ಮಾಸ್ಟರ್ ಮೈಂಡ್ ಅಂತ ಘೋಷಿಸಿರುವುದು ನನಗೆ ಗೊತ್ತಾಯ್ತು. ನಾವು ಗುಂಡಿನ ದಾಳಿಗೆ ಹೆದರೋದಿಲ್ಲ. ಹುತಾತ್ಮರಾಗಿಯೇ ಸಾಯಲು ಬಯಸುತ್ತೇವೆ ಎಂದು ಖಾಲಿದ್ ಹೇಳಿದ್ದಾನೆ. ಇದನ್ನೂ ಓದಿ: ಗೋಲ್ಡನ್ ಡೋಮ್; ಕ್ಷಿಪಣಿ ದಾಳಿಯಿಂದ ಅಮೆರಿಕ ರಕ್ಷಣೆಗೆ ಬಾಹ್ಯಾಕಾಶದಲ್ಲಿ ರಕ್ಷಾಕವಚ
ಸೈಫುಲ್ಲಾ ಖಾಲಿದ್ ಯಾರು?
ಲಷ್ಕರ್-ಎ-ತೈಬಾ ಉಪ ಮುಖ್ಯಸ್ಥನಾಗಿರುವ ಸೈಫುಲ್ಲಾ ಖಾಲಿದ್ ಮುಂಬೈ ದಾಳಿ (Mumbai Attack) ಸೂತ್ರಧಾರ ಹಫೀಜ್ ಸಯೀದ್ ಆಪ್ತ ವ್ಯಕ್ತಿಯಾಗಿದ್ದಾನೆ. ಯಾವಾಗಲೂ ಐಷಾರಾಮಿ ಕಾರುಗಳಲ್ಲಿ ಪ್ರಯಾಣಿಸುವ ಈತನಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರ ಹಿಡಿದಿರುವ ಲಷ್ಕರ್ ಉಗ್ರರು ಭದ್ರತೆ ನೀಡುತ್ತಾರೆ. ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧ ಭಾರತದ ದಿಟ್ಟ ಹೋರಾಟಕ್ಕೆ ಬೆಂಬಲ – ಸ್ಲೊವೇನಿಯಾದಲ್ಲಿ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷ ನಿಯೋಗ
ಯಾವಾಗಲೂ ಭಾರತದ ವಿರುದ್ಧವೇ ಕೆಲಸ ಮಾಡವುದರಿಂದ ಸೇನಾ ಅಧಿಕಾರಿಗಳ ಜೊತೆಗೂ ಈತ ಉತ್ತಮ ಸಂಬಂಧ ಹೊಂದಿದ್ದಾನೆ. ಎರಡು ತಿಂಗಳ ಹಿಂದೆ ಸೈಫುಲ್ಲಾ ಖಾಲಿದ್ ಪಾಕಿಸ್ತಾನದ ಪಂಜಾಬ್ನ ಕಂಗನ್ಪುರಕ್ಕೆ ಭೇಟಿ ನೀಡಿದ್ದ. ಕಂಗನ್ಪುರದಲ್ಲಿ ಪಾಕ್ ಸೇನೆಯ ದೊಡ್ಡ ಬೆಟಾಲಿಯನ್ ನೆಲೆಗೊಂಡಿದೆ. ಪಾಕಿಸ್ತಾನ ಸೇನೆಯ ಕರ್ನಲ್ ಜಾಹಿದ್ ಜರೀನ್ ಭಾರತದ ವಿರುದ್ಧ ಜಿಹಾದಿ ಭಾಷಣ ಮಾಡಲು ಈತನನ್ನು ಕರೆಸಿದ್ದ.ಭಾಷಣದಲ್ಲಿ ಪಾಕಿಸ್ತಾನ ಸೇನೆಯನ್ನು ಭಾರತದ ವಿರುದ್ಧದ ಕೃತ್ಯಕ್ಕೆ ಪ್ರಚೋದಿಸಿದ್ದ.
ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈತ ಭಾರತದ ವಿರುದ್ಧ ವಿಷಕಾರಿದ್ದ. ಇಂದು ಫೆಬ್ರವರಿ 2, 2025. ಕಾಶ್ಮೀರವನ್ನು ವಶಪಡಿಸಿಕೊಳ್ಳಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ. ಮುಂಬರುವ ದಿನಗಳಲ್ಲಿ ನಮ್ಮ ಮುಜಾಹಿದ್ದೀನ್ ದಾಳಿ ತೀವ್ರಗೊಳ್ಳಲಿದೆ. ಫೆಬ್ರವರಿ 2, 2026 ರೊಳಗೆ ಕಾಶ್ಮೀರ ಸ್ವತಂತ್ರವಾಗಲಿದೆ ಎಂದು ನಾವು ಭಾವಿಸುತ್ತೇವೆ ಎಂದು ಭರವಸೆ ನೀಡಿದ್ದ.