ಹೈದರಾಬಾದ್: ತೆಲಂಗಾಣದ ಮುಶೀರಾಬಾದ್ ವಾಟರ್ ಟ್ಯಾಂಕ್ನಲ್ಲಿ ಪೇಂಟರ್ ಕಿಶೋರ್ ಎಂಬಾತನ ಶವ ಗುರುವಾರ ಪತ್ತೆಯಾಗಿದೆ.
ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ 19 ದಿನಗಳ ನಂತರ ಪ್ರದೇಶದ ಸಾರ್ವಜನಿಕರು ಕುಡಿಯುವ ನೀರಿನ ಟ್ಯಾಂಕಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಈತ ಪೇಂಟಿಂಗ್ ಕೆಲಸ ಮಾಡುತ್ತಿದ್ದ. ಕೆಲಕಾಲ ಜೀವನೋಪಾಯಕ್ಕಾಗಿ ಆಟೋ ಓಡಿಸುತ್ತಿದ್ದರು. ಗಾಂಜಾ ಮತ್ತು ಕುಡಿತದ ಚಟ ಹೊಂದಿದ್ದ ಈತ, ಹಣದ ವಿಚಾರವಾಗಿ ಕುಟುಂಬದವರೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದ ಎಂದು ಅಕ್ಕ-ಪಕ್ಕದ ಮನೆಯವರು ಹೇಳಿದರು.
ತನಿಖೆಯ ಸಂದರ್ಭದಲ್ಲಿ ಟ್ಯಾಂಕ್ ನ ಹೊರಗೆ ಪಾದರಕ್ಷೆಗಳು ಬಿದ್ದಿರುವುದು ಕಂಡು ಬಂದಿದೆ. ಈ ಆಧಾರದ ಮೇಲೆ ಮೃತನನ್ನು ಕಿಶೋರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಡಿಸೆಂಬರ್ 9ರಂದು ಕುಡಿದು ಮನೆಗೆ ಬಂದ ಕಾರಣ ಮನೆಯವರು ಛೀಮಾರಿ ಹಾಕಿದ್ದರು. ಬಳಿಕ ಅದೇ ತಿಂಗಳು 23 ರಂದು ಮನೆಯವರು ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ದಾಖಲಿಸಿದ್ದರು. ಅಂದಿನಿಂದ ನಾಪತ್ತೆಯಾಗಿದ್ದ ಕಿಶೋರ್, ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದನ್ನೂ ಓದಿ: ಬೆಳಗಾವಿ ಅಧಿವೇಶನದಲ್ಲಿ ಉತ್ತರಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ-ಬೊಮ್ಮಾಯಿ
ಕೆಲ ದಿನಗಳಿಂದ ವಿಚಿತ್ರ ವಾಸನೆ ಹಾಗೂ ನೀರಿನ ರುಚಿಯಲ್ಲಿ ಬದಲಾವಣೆಯಾಗುತ್ತಿದೆ ಎಂದು ಕೆಲವರು ದೂರಿದ್ದಾರೆ. ಮೃತದೇಹ ಹೊರತೆಗೆದ ಬಳಿಕ ಸ್ಥಳೀಯ ಅಧಿಕಾರಿಗಳು ನೀರು ಪೂರೈಕೆಯನ್ನು ಸ್ಥಗಿತಗೊಳಿಸಿದ್ದು, ಟ್ಯಾಂಕ್ ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ಮದುವೆಗೆ ಬರುವ ಅತಿಥಿಗಳಿಗೆ ಕತ್ರಿನಾ-ವಿಕ್ಕಿ ವೆಲ್ಕಮ್ ನೋಟ್
ಮುಶೀರಾಬಾದ್ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ತನಿಖೆ ನಡೆಸುತ್ತಿದ್ದಾರೆ. ಕುಟುಂಬಸ್ಥರು ನೀಡಿದ ಮಾಹಿತಿ ಮೇರೆಗೆ ಕಿಶೋರ್ ಸ್ನೇಹಿತನಾದ ಮಧು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಲಾಲೂ ಪ್ರಸಾದ್ ಪುತ್ರ