Advertisements

ಇಸ್ಲಾಮಾಬಾದ್: ಪಾಕಿಸ್ತಾನವು ಭಯೋತ್ಪಾದನೆಯ ಬೆದರಿಕೆಯನ್ನು ತೊಡೆದುಹಾಕಲು ಮತ್ತು ದೇಶದಲ್ಲಿ ಸಂಪೂರ್ಣ ಶಾಂತಿಯನ್ನು ತರಲು ಶುಕ್ರವಾರ ಪ್ರತಿಜ್ಞೆ ಮಾಡಿದೆ ಎಂದು ವಿದೇಶಾಂಗ ಕಚೇರಿ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ.
Advertisements
ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ವಕ್ತಾರ ಆಸಿಫ್ ಇಫ್ತಿಕರ್, ಇಡೀ ಪ್ರದೇಶಕ್ಕೆ ಭಯೋತ್ಪಾದನೆ ಸಾಮಾನ್ಯ ಬೆದರಿಕೆಯಾಗಿದೆ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪವು ಅಚಲವಾಗಿದೆ ಎಂದು ನಾನು ಹೇಳಬಲ್ಲೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಈಶ್ವರಪ್ಪಗೆ ಒಂದು ನ್ಯಾಯ, ಶ್ರೀರಾಮುಲುಗೆ ಒಂದು ನ್ಯಾಯನಾ: ತಿಪ್ಪೇಸ್ವಾಮಿ
Advertisements
ಭಯೋತ್ಪಾದನೆಯ ಪಿಡುಗನ್ನು ನಿಲ್ಲಿಸಲು, ಈ ಪ್ರದೇಶದಲ್ಲಿ ಮತ್ತು ನಮ್ಮ ದೇಶದಲ್ಲಿ ಶಾಂತಿ, ಸ್ಥಿರತೆಯನ್ನು ಸಾಧಿಸಲು ನಾವು ಎಲ್ಲ ಮಾರ್ಗಗಳನ್ನು ಅನುಸರಿಸುತ್ತೇವೆ. ಯುಎಸ್, ಚೀನಾ, ರಷ್ಯಾ ಮತ್ತು ಇತರ ಎಲ್ಲ ಪ್ರಮುಖ ಶಕ್ತಿರಾಷ್ಟ್ರಗಳೊಂದಿಗೆ ಪರಸ್ಪರ ಗೌರವದ ಆಧಾರದ ಮೇಲೆ ಸಮತೋಲಿತ, ವಸ್ತುನಿಷ್ಠ ಸಂಬಂಧಗಳನ್ನು ಬಯಸುತ್ತೇವೆ ಎಂದರು.
Advertisements
Advertisements