ಭಾರತದೊಂದಿಗೆ 3 ಯುದ್ಧಗಳನ್ನು ಮಾಡಿದ ನಂತರ ಪಾಕಿಸ್ತಾನ ಪಾಠ ಕಲಿತಿದೆ – ಶೆಹಬಾಜ್ ಷರೀಫ್

Public TV
1 Min Read
Shehbaz Sharif Narendra Modi

ಇಸ್ಲಾಮಾಬಾದ್: ಭಾರತದೊಂದಿಗೆ (India) 3 ಯುದ್ಧಗಳನ್ನು ಮಾಡಿದ ನಂತರ ಪಾಕಿಸ್ತಾನವು (Pakistan) ತನ್ನ ಪಾಠ ಕಲಿತಿದೆ. ಇನ್ಮುಂದೆ ಪಾಕಿಸ್ತಾನವು ಶಾಂತಿಯಿಂದಿರಲು ಬಯಸುತ್ತದೆ. ಬಾಂಬ್ ಮತ್ತು ಮದ್ದು ಗುಂಡುಗಳಿಗಾಗಿ ಸಂಪನ್ಮೂಲಗಳನ್ನ ವ್ಯರ್ಥ ಮಾಡಲು ಬಯಸುವುದಿಲ್ಲ ಎಂದು ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಹೇಳಿದ್ದಾರೆ.

Pakistan

ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿರುವ ಷರೀಫ್, ಪಾಕಿಸ್ತಾನ ಇನ್ನುಮುಂದೆ ಶಾಂತಿಯಿಂದಿರಲು ಬಯಸುತ್ತದೆ. ಆದ್ರೆ ಕಾಶ್ಮೀರದಲ್ಲಿ ಏನಾಗುತ್ತಿದೆ ಸಮಸ್ಯೆ, ಅದನ್ನು ನಿಲ್ಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು – ಪಾಕಿಸ್ತಾನದಲ್ಲಿ ಇಂಧನ ಉಳಿಸಲು ಮಾಲ್, ಮಾರ್ಕೆಟ್, ಮದುವೆ ಹಾಲ್‌ಗಳು ಬಂದ್

INDvsPAK

ಇದೇ ವೇಳೆ `ಮಾನವ ಹಕ್ಕುಗಳ ಉಲ್ಲಂಘನೆ’ ಆರೋಪದ ಕುರಿತು ಪ್ರತಿಕ್ರಿಯಿಸಿ, ಅವುಗಳನ್ನು ನಿರ್ಲಕ್ಷಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬೈ ದಾಳಿ ರುವಾರಿ ಅಬ್ದುಲ್ ರೆಹಮಾನ್ ಮಕ್ಕಿ ಜಾಗತಿಕ ಉಗ್ರರ ಪಟ್ಟಿಗೆ ಸೇರ್ಪಡೆ

`ನಮ್ಮಲ್ಲಿ ಇಂಜಿನಿಯರ್‌ಗಳು (Engineers), ವೈದ್ಯರು (Doctors) ಹಾಗೂ ನುರಿತ ಕಾರ್ಮಿಕರಿದ್ದಾರೆ. ಈ ಸಂಪನ್ಮೂಲವನ್ನ ಸದ್ಬಳಕೆ ಮಾಡಿಕೊಂಡು ಎರಡೂ ರಾಷ್ಟ್ರಗಳು ಬೆಳೆಯಲು ಸಹಕರಿಸುತ್ತೇವೆ. ಜೊತೆಗೆ ಈ ಪ್ರದೇಶದಲ್ಲಿ ಶಾಂತಿಯ ವಾತಾವರಣ ನಿರ್ಮಿಸಲು ಬಯಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: `ಅಭಿವೃದ್ಧಿ ಮಂತ್ರ, ಹಿಂದುತ್ವದ ಅಜೆಂಡಾ’ ಬಿಜೆಪಿಯ ಅಸ್ತ್ರ – ಇನ್ನೆರಡು ತಿಂಗಳು ರಾಜ್ಯದಲ್ಲಿ ಮೋದಿ ಹವಾ

INDvsPAK 2 1

ಶಾಂತಿಯುತವಾಗಿ ಬದುಕುವುದು, ಪ್ರಗತಿ ಸಾಧಿಸುವುದು ಅಥವಾ ಪರಸ್ಪರ ಜಗಳವಾಡುವುದು, ಸಮಯ ಮತ್ತು ಸಂಪನ್ಮೂಲಗಳನ್ನು ವ್ಯರ್ಥ ಮಾಡುವುದು ನಮಗೆ ಬಿಟ್ಟದ್ದು. ಆದ್ರೆ ನಾವು ಭಾರತದೊಂದಿಗೆ 3 ಯುದ್ಧಗಳನ್ನು ಮಾಡಿದ ನಂತರ ನಮ್ಮ ದೇಶದ ಹೆಚ್ಚಿನ ಜನ ನೋವನ್ನು ಅನುಭವಿಸಿದ್ದಾರೆ. ಬಡತನ, ನಿರುದ್ಯೋಗ ಸಮಸ್ಯೆ ಸೃಷ್ಟಿಯಾಗಿದೆ. ಅದರಿಂದ ನಾವು ಪಾಠ ಕಲಿತಿದ್ದೇವೆ. ಹಾಗಾಗಿ ಇನ್ಮುಂದೆ ಶಾಂತಿಯಿಂದ ನೆಲೆಸಿ, ನಮ್ಮ ನಿಜವಾದ ಸಮಸ್ಯೆಗಳನ್ನು ಪರಿಹರಿಸಲು ನಾವು ಬದ್ಧರಾಗುತ್ತೇವೆ ಎಂದು ಹೇಳಿಕೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *