Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಶ್ವಾಸಮತ ಗಳಿಸುವಲ್ಲಿ ವಿಫಲ- ಅಧಿಕಾರ ಕಳೆದುಕೊಂಡ ಇಮ್ರಾನ್ ಖಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿಶ್ವಾಸಮತ ಗಳಿಸುವಲ್ಲಿ ವಿಫಲ- ಅಧಿಕಾರ ಕಳೆದುಕೊಂಡ ಇಮ್ರಾನ್ ಖಾನ್

Latest

ವಿಶ್ವಾಸಮತ ಗಳಿಸುವಲ್ಲಿ ವಿಫಲ- ಅಧಿಕಾರ ಕಳೆದುಕೊಂಡ ಇಮ್ರಾನ್ ಖಾನ್

Public TV
Last updated: April 10, 2022 8:06 am
Public TV
Share
3 Min Read
IMRAN KHAN
SHARE

ಇಸ್ಲಾಮಾಬಾದ್: ಪಾಕಿಸ್ತಾನ ಸಂಸತ್‍ನಲ್ಲಿ ಶನಿವಾರ ತಡರಾತ್ರಿ ದೊಡ್ಡ ಹೈಡ್ರಾಮಾವೇ ನಡೆಯಿತು. ವಿಶ್ವಾಸಮತ ಗಳಿಸುವಲ್ಲಿ ವಿಫಲರಾದ ಇಮ್ರಾನ್ ಖಾನ್ ಅಧಿಕಾರ ಅಂತ್ಯವಾಗಿದೆ.

ಅಧಿಕಾರ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಕಸರತ್ತು ನಡೆಸಿದ್ದ ಇಮ್ರಾನ್ ಖಾನ್ ಅವರ 4 ವರ್ಷಗಳ ಅಧಿಕಾರವನ್ನು ಕಳೆದುಕೊಂಡಿದ್ದಾರೆ. ಈ ಮೂಲಕ ಇಮ್ರಾನ್ ಖಾನ್ ಅವರು ಅವಿಶ್ವಾಸ ಮತದಲ್ಲಿ ಸೋತ ಪಾಕಿಸ್ತಾನದ ಮೊದಲ ಪ್ರಧಾನಿಯಾಗಿದ್ದಾರೆ. ಸದನದಲ್ಲಿ ಹಾಜರಿದ್ದ ಪ್ರತಿಪಕ್ಷಗಳ 176 ಹಾಗೂ ಆಡಳಿತ ಪಕ್ಷದ 22 ಸದಸ್ಯರು ನಿರ್ಣಯದ ಪರವಾಗಿ ಮತ ಹಾಕಿದರು.

IMRAN KHAN

ಇದಕ್ಕೂ ಮುನ್ನ ದಿನವಿಡೀ ಪಾಕಿಸ್ತಾನದಲ್ಲಿ ಹೈಡ್ರಾಮವೇ ನಡೆದಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸಿ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಅವಿಶ್ವಾಸ ನಿರ್ಣಯವನ್ನು ಮತಕ್ಕೆ ಹಾಕಲು ಸ್ಪೀಕರ್ ನಿರಾಕರಿಸಿದರು. ಅದೇ ವೇಳೆ, ಸ್ಪೀಕರ್ ಕ್ರಮದಿಂದ ಸಿಟ್ಟಿಗೆದ್ದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾತ್ರೋರಾತ್ರಿ ಕಲಾಪ ಆರಂಭಿಸಿ, ಸ್ಪೀಕರ್ ಹಾಗೂ ಪ್ರಧಾನಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳಲು ಮುಂದಾದರು.

ಸಿಜೆ ನೇತೃತ್ವದ ಪಂಚ ಸದಸ್ಯರ ಪೀಠದ ಆದೇಶದಂತೆ ಶನಿವಾರ ಅವಿಶ್ವಾಸ ನಿಲುವಳಿಯನ್ನು ಮತಕ್ಕೆ ಹಾಕಬೇಕಿತ್ತು. ಅದರಂತೆ ಶನಿವಾರ ಮಧ್ಯಾಹ್ನ ರಾಷ್ಟ್ರೀಯ ಅಸೆಂಬ್ಲಿ ಕಲಾಪ ಆರಂಭವಾಯಿತು. ಪ್ರತಿಪಕ್ಷ ನಾಯಕ ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಬಿಲಾವಲ್ ಭುಟ್ಟೊ ಜರ್ದಾರಿ ಅವರು ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರು. ಸ್ಪೀಕರ್ ಅಸಾದ್ ಕ್ವೈಸಾರ್ ಮತ ಹಾಕಲು ನಿರಾಕರಿಸಿದರು. ಹಲವು ಸಲ ಕಲಾಪ ಮುಂದೂಡಲಾಯಿತಾದರೂ, ಇಫ್ತಿಹಾರ್ ಭೋಜನದ ಬಳಿಕ ರಾತ್ರಿ 10.30ಕ್ಕೆ ಕಲಾಪ ಆರಂಭಿಸಲು ನಿರ್ಧರಿಸಲಾಯಿತು.

IMRAN KHAN 1

ಸ್ಪೀಕರ್ ಅವರು ರಾಜೀನಾಮೆ ನಿರ್ಧಾರ ಪ್ರಕಟಿಸಿ ಪೀಠದಿಂದ ಕೆಳಗಿಳಿದರು. ಆ ಮೂಲಕ ನ್ಯಾಯಾಂಗ ನಿಂದನೆಯ ಆರೋಪದಿಂದ ಪಾರಾದರು. ಅದರ ಬೆನ್ನಲ್ಲಿಯೇ ಆಡಳಿತಾರೂಢ ಪಕ್ಷ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು. ಸುಪ್ರೀಂ ಕೋರ್ಟ್ ಆದೇಶಕ್ಕೆ ಗೌರವ ನೀಡುತ್ತೇವೆ ಎಂದು ಘೋಷಿಸಿದ ಪ್ರತಿಪಕ್ಷಗಳು ಕಲಾಪ ಮುಂದುವರಿಸಲು ನಿರ್ಧರಿಸಿದವು.

ಡೆಪ್ಯೂಟಿ ಸ್ಪೀಕರ್ ಖಾಸಿಮ್ ಸುರಿ ಗೈರಾಗಿದ್ದರು. ಹೀಗಾಗಿ ಸ್ಪೀಕರ್‌ಗಳ ಪ್ಯಾನೆಲ್ ಪಟ್ಟಿಯಲ್ಲಿ ಮೂರನೇಯವರಾದ ನವಾಜ್ ಷರೀಫ್ ಅವರ ಪಾಕಿಸ್ತಾನ ಮುಸ್ಲಿಂ ಲೀಗ್(ನವಾಜ್) ಪಕ್ಷದ ಹಿರಿಯ ಸದಸ್ಯ ಅಯಾಜ್ ಸಾದಿಕ್ ಅವರು ಹಂಗಾಮಿ ಸ್ಪೀಕರ್ ಆಗಿ ಆಯ್ಕೆಯಾದರು. ಹೊರ ಹೋಗಿರುವ ಆಡಳಿತ ಪಕ್ಷದ ಸದಸ್ಯರು ಒಳಬರಲು ಐದು ನಿಮಿಷ ಅವಕಾಶವನ್ನು ಸಾದಿಕ್ ನೀಡಿದ್ದರು.

Imran khan 1

ವಿಶ್ವಾಸಮತ ಕಳೆದುಕೊಳ್ಳುತ್ತಿದ್ದಂತೆಯೇ ಇಮ್ರಾನ್ ಖಾನ್ ಅವರು ಪ್ರಧಾನಿ ಕಚೇರಿಯಿಂದ ನಿರ್ಗಮಿಸಿದರು. ನಾಳೆ ಹೊಸ ಪ್ರಧಾನಿ ಆಯ್ಕೆ ನಡೆಯಲಿದ್ದು, ಬಹುತೇಕ ಶಹಬಾಜ್ ಷರೀಫ್ ಮುಂದಿನ ಪ್ರಧಾನಿ ಆಗುವ ಸಾಧ್ಯತೆಗಳಿದೆ. ಇಮ್ರಾನ್ ಖಾನ್ ವಿರುದ್ಧ 174 ಮತಗಳು ಚಲಾವಣೆ ಆಗಿದೆ. ಇದನ್ನೂ ಓದಿ: ಪಿಎಂ ಸ್ಥಾನದಿಂದ ಇಮ್ರಾನ್ ಕೆಳಗಿಳಿದ್ರೆ ಪಾಕ್‌ನ ಮುಂದಿನ ಪ್ರಧಾನಿ ಇವರೇ

Shehbaz Sharif

ಅವಿಶ್ವಾಸ ನಿರ್ಣಯವನ್ನು ಮತಕ್ಕೆ ಹಾಕುವುದಿಲ್ಲ ಎನ್ನುವುದು ದೃಢಪಡುತ್ತಿದ್ದಂತೆಯೇ ಮುಖ್ಯ ನ್ಯಾಯಮೂರ್ತಿ ಉಮರ್ ಅವರು ರಾತ್ರಿ 12 ಗಂಟೆಗೆ ಸುಪ್ರೀಂ ಕೋರ್ಟ್ ಬಾಗಿಲು ತೆರೆಯುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು. ಆರಂಭದಲ್ಲಿ ಸುಪ್ರೀ ಕೋರ್ಟ್ ಸ್ವಯಂಪ್ರೇರಿತವಾಗಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಿತ್ತಾದರೂ, ನಂತರ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿತು. ಇತ್ತ ಸಂಸತ್ತಿನಲ್ಲಿ 12.20ಕ್ಕೆ ಮತದಾನ ಪ್ರಕ್ರಿಯೆ ಆರಂಭವಾದ ಕಾರಣ, ಕಲಾಪವನ್ನು 12.35ಕ್ಕೆ ಮುಂದೂಡಲಾಯಿತು.

ಸರ್ಕಾರ ಪತನವಾಗುವುದು ಖಚಿತವಾಗುತ್ತಿದ್ದಂತೆಯೇ ದೇಶದ ವಿಮಾನ ನಿಲ್ದಾಣಗಳಲ್ಲಿ ಸೇನೆಯು ಕಟ್ಟೆಚ್ಚರ ವಹಿಸಿತು. ಯಾವೊಬ್ಬ ಅಧಿಕಾರಿಯೂ ದೇಶದಿಂದ ಹೊರಗೆ ಹೋಗುವಂತಿಲ್ಲ ಎಂಬ ಆದೇಶ ಹೊರಡಿಸಿತು. ಇದನ್ನೂ ಓದಿ: ಪಾಕ್‌ ಪ್ರಧಾನಿಯಾಗ್ತಾರೆ ಅಂತ ಭವಿಷ್ಯ ನುಡಿದಿದ್ದ ಬುಶ್ರಾ ಬೀಬಿಗೆ ಇಮ್ರಾನ್‌ ಈಗ ಡಿವೋರ್ಸ್‌ ನೀಡಬಹುದು: ತಸ್ಲೀಮಾ

TAGGED:Imran KhanpakistanShehbaz Sharifಇಮ್ರಾನ್‍ಖಾನ್ಪಾಕಿಸ್ತಾನ್ಮತದಾನ
Share This Article
Facebook Whatsapp Whatsapp Telegram

Cinema news

Nagachaitanya Shobitha Wedding
ಸಮಂತಾಗೂ ಮುನ್ನ ಗುಡ್‌ನ್ಯೂಸ್ ಕೊಡಲು ಸಜ್ಜಾದ್ರಾ ಮಾಜಿ ಪತಿ?
Cinema Latest South cinema Top Stories
Nora Fatehis Special Song in Jailer 2
ತಲೈವ ಜೊತೆ ಸೊಂಟ ಬಳುಕಿಸೋಕೆ ನೋರಾ ಫತೇಹಿ ರೆಡಿ
Latest South cinema Top Stories
KGF Co Director Kirtan Nadagouda
KGF ಸಹ-ನಿರ್ದೇಶಕ ಕೀರ್ತನ್ ನಾಡಗೌಡರ 4 ವರ್ಷದ ಮಗು ಲಿಫ್ಟ್‌ ಅಪಘಾತದಲ್ಲಿ ಸಾವು
Cinema Latest Sandalwood Top Stories
ravichandran bigg boss
ಬಿಗ್‌ ಬಾಸ್‌ ಮನೆಗೆ ಕ್ರೇಜಿಸ್ಟಾರ್‌ ಎಂಟ್ರಿ – ತನ್ನ ಹೃದಯ ಕದ್ದ ಚೆಲುವೆ ಬಗ್ಗೆ ಮಾತಾಡಿದ ರವಿಚಂದ್ರನ್‌
Cinema Latest Top Stories TV Shows

You Might Also Like

airport
Bengaluru City

ಬೆಂಗಳೂರಿನಲ್ಲಿ 2ನೇ ಏರ್‌ಪೋರ್ಟ್‌| ಅಧ್ಯಯನ ನಡೆದಿದೆ, ರಾಜ್ಯ ಸರ್ಕಾರದಿಂದ ಪ್ರಸ್ತಾಪ ಬಂದಿಲ್ಲ: ಕೇಂದ್ರ

Public TV
By Public TV
3 hours ago
Ricky kej theft
Bengaluru City

ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ – ಆರೋಪಿ ಅರೆಸ್ಟ್

Public TV
By Public TV
3 hours ago
DCM DK Shivakumars personal secretary Rajendra Prasad car accident
Belgaum

ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ – ಬೈಕ್‌ ಸವಾರ ಸ್ಥಳದಲ್ಲೇ ಸಾವು

Public TV
By Public TV
4 hours ago
HD Kumaraswamy 5
Latest

2047ಕ್ಕೆ ವಾರ್ಷಿಕ 500 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ: ಹೆಚ್‌ಡಿಕೆ

Public TV
By Public TV
4 hours ago
Shakthi Scheme 1
Bengaluru City

ಶಕ್ತಿ ಯೋಜನೆ| 4 ಸಾವಿರ ಕೋಟಿ ಬಾಕಿ – ಈಗ 441 ಕೋಟಿ ರಿಲೀಸ್‌

Public TV
By Public TV
5 hours ago
Brahma putra river
Latest

ವಿಶ್ವದ ಅತಿದೊಡ್ಡ ಅಣೆಕಟ್ಟು ನಿರ್ಮಾಣ ಮಾಡಲು ಮುಂದಾದ ಚೀನಾ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?