Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಶ್ವಾಸಮತ ಗಳಿಸುವಲ್ಲಿ ವಿಫಲ- ಅಧಿಕಾರ ಕಳೆದುಕೊಂಡ ಇಮ್ರಾನ್ ಖಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿಶ್ವಾಸಮತ ಗಳಿಸುವಲ್ಲಿ ವಿಫಲ- ಅಧಿಕಾರ ಕಳೆದುಕೊಂಡ ಇಮ್ರಾನ್ ಖಾನ್

Latest

ವಿಶ್ವಾಸಮತ ಗಳಿಸುವಲ್ಲಿ ವಿಫಲ- ಅಧಿಕಾರ ಕಳೆದುಕೊಂಡ ಇಮ್ರಾನ್ ಖಾನ್

Public TV
Last updated: April 10, 2022 8:06 am
Public TV
Share
3 Min Read
IMRAN KHAN
SHARE

ಇಸ್ಲಾಮಾಬಾದ್: ಪಾಕಿಸ್ತಾನ ಸಂಸತ್‍ನಲ್ಲಿ ಶನಿವಾರ ತಡರಾತ್ರಿ ದೊಡ್ಡ ಹೈಡ್ರಾಮಾವೇ ನಡೆಯಿತು. ವಿಶ್ವಾಸಮತ ಗಳಿಸುವಲ್ಲಿ ವಿಫಲರಾದ ಇಮ್ರಾನ್ ಖಾನ್ ಅಧಿಕಾರ ಅಂತ್ಯವಾಗಿದೆ.

ಅಧಿಕಾರ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಕಸರತ್ತು ನಡೆಸಿದ್ದ ಇಮ್ರಾನ್ ಖಾನ್ ಅವರ 4 ವರ್ಷಗಳ ಅಧಿಕಾರವನ್ನು ಕಳೆದುಕೊಂಡಿದ್ದಾರೆ. ಈ ಮೂಲಕ ಇಮ್ರಾನ್ ಖಾನ್ ಅವರು ಅವಿಶ್ವಾಸ ಮತದಲ್ಲಿ ಸೋತ ಪಾಕಿಸ್ತಾನದ ಮೊದಲ ಪ್ರಧಾನಿಯಾಗಿದ್ದಾರೆ. ಸದನದಲ್ಲಿ ಹಾಜರಿದ್ದ ಪ್ರತಿಪಕ್ಷಗಳ 176 ಹಾಗೂ ಆಡಳಿತ ಪಕ್ಷದ 22 ಸದಸ್ಯರು ನಿರ್ಣಯದ ಪರವಾಗಿ ಮತ ಹಾಕಿದರು.

IMRAN KHAN

ಇದಕ್ಕೂ ಮುನ್ನ ದಿನವಿಡೀ ಪಾಕಿಸ್ತಾನದಲ್ಲಿ ಹೈಡ್ರಾಮವೇ ನಡೆದಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸಿ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಅವಿಶ್ವಾಸ ನಿರ್ಣಯವನ್ನು ಮತಕ್ಕೆ ಹಾಕಲು ಸ್ಪೀಕರ್ ನಿರಾಕರಿಸಿದರು. ಅದೇ ವೇಳೆ, ಸ್ಪೀಕರ್ ಕ್ರಮದಿಂದ ಸಿಟ್ಟಿಗೆದ್ದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾತ್ರೋರಾತ್ರಿ ಕಲಾಪ ಆರಂಭಿಸಿ, ಸ್ಪೀಕರ್ ಹಾಗೂ ಪ್ರಧಾನಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳಲು ಮುಂದಾದರು.

ಸಿಜೆ ನೇತೃತ್ವದ ಪಂಚ ಸದಸ್ಯರ ಪೀಠದ ಆದೇಶದಂತೆ ಶನಿವಾರ ಅವಿಶ್ವಾಸ ನಿಲುವಳಿಯನ್ನು ಮತಕ್ಕೆ ಹಾಕಬೇಕಿತ್ತು. ಅದರಂತೆ ಶನಿವಾರ ಮಧ್ಯಾಹ್ನ ರಾಷ್ಟ್ರೀಯ ಅಸೆಂಬ್ಲಿ ಕಲಾಪ ಆರಂಭವಾಯಿತು. ಪ್ರತಿಪಕ್ಷ ನಾಯಕ ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಬಿಲಾವಲ್ ಭುಟ್ಟೊ ಜರ್ದಾರಿ ಅವರು ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರು. ಸ್ಪೀಕರ್ ಅಸಾದ್ ಕ್ವೈಸಾರ್ ಮತ ಹಾಕಲು ನಿರಾಕರಿಸಿದರು. ಹಲವು ಸಲ ಕಲಾಪ ಮುಂದೂಡಲಾಯಿತಾದರೂ, ಇಫ್ತಿಹಾರ್ ಭೋಜನದ ಬಳಿಕ ರಾತ್ರಿ 10.30ಕ್ಕೆ ಕಲಾಪ ಆರಂಭಿಸಲು ನಿರ್ಧರಿಸಲಾಯಿತು.

IMRAN KHAN 1

ಸ್ಪೀಕರ್ ಅವರು ರಾಜೀನಾಮೆ ನಿರ್ಧಾರ ಪ್ರಕಟಿಸಿ ಪೀಠದಿಂದ ಕೆಳಗಿಳಿದರು. ಆ ಮೂಲಕ ನ್ಯಾಯಾಂಗ ನಿಂದನೆಯ ಆರೋಪದಿಂದ ಪಾರಾದರು. ಅದರ ಬೆನ್ನಲ್ಲಿಯೇ ಆಡಳಿತಾರೂಢ ಪಕ್ಷ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು. ಸುಪ್ರೀಂ ಕೋರ್ಟ್ ಆದೇಶಕ್ಕೆ ಗೌರವ ನೀಡುತ್ತೇವೆ ಎಂದು ಘೋಷಿಸಿದ ಪ್ರತಿಪಕ್ಷಗಳು ಕಲಾಪ ಮುಂದುವರಿಸಲು ನಿರ್ಧರಿಸಿದವು.

ಡೆಪ್ಯೂಟಿ ಸ್ಪೀಕರ್ ಖಾಸಿಮ್ ಸುರಿ ಗೈರಾಗಿದ್ದರು. ಹೀಗಾಗಿ ಸ್ಪೀಕರ್‌ಗಳ ಪ್ಯಾನೆಲ್ ಪಟ್ಟಿಯಲ್ಲಿ ಮೂರನೇಯವರಾದ ನವಾಜ್ ಷರೀಫ್ ಅವರ ಪಾಕಿಸ್ತಾನ ಮುಸ್ಲಿಂ ಲೀಗ್(ನವಾಜ್) ಪಕ್ಷದ ಹಿರಿಯ ಸದಸ್ಯ ಅಯಾಜ್ ಸಾದಿಕ್ ಅವರು ಹಂಗಾಮಿ ಸ್ಪೀಕರ್ ಆಗಿ ಆಯ್ಕೆಯಾದರು. ಹೊರ ಹೋಗಿರುವ ಆಡಳಿತ ಪಕ್ಷದ ಸದಸ್ಯರು ಒಳಬರಲು ಐದು ನಿಮಿಷ ಅವಕಾಶವನ್ನು ಸಾದಿಕ್ ನೀಡಿದ್ದರು.

Imran khan 1

ವಿಶ್ವಾಸಮತ ಕಳೆದುಕೊಳ್ಳುತ್ತಿದ್ದಂತೆಯೇ ಇಮ್ರಾನ್ ಖಾನ್ ಅವರು ಪ್ರಧಾನಿ ಕಚೇರಿಯಿಂದ ನಿರ್ಗಮಿಸಿದರು. ನಾಳೆ ಹೊಸ ಪ್ರಧಾನಿ ಆಯ್ಕೆ ನಡೆಯಲಿದ್ದು, ಬಹುತೇಕ ಶಹಬಾಜ್ ಷರೀಫ್ ಮುಂದಿನ ಪ್ರಧಾನಿ ಆಗುವ ಸಾಧ್ಯತೆಗಳಿದೆ. ಇಮ್ರಾನ್ ಖಾನ್ ವಿರುದ್ಧ 174 ಮತಗಳು ಚಲಾವಣೆ ಆಗಿದೆ. ಇದನ್ನೂ ಓದಿ: ಪಿಎಂ ಸ್ಥಾನದಿಂದ ಇಮ್ರಾನ್ ಕೆಳಗಿಳಿದ್ರೆ ಪಾಕ್‌ನ ಮುಂದಿನ ಪ್ರಧಾನಿ ಇವರೇ

Shehbaz Sharif

ಅವಿಶ್ವಾಸ ನಿರ್ಣಯವನ್ನು ಮತಕ್ಕೆ ಹಾಕುವುದಿಲ್ಲ ಎನ್ನುವುದು ದೃಢಪಡುತ್ತಿದ್ದಂತೆಯೇ ಮುಖ್ಯ ನ್ಯಾಯಮೂರ್ತಿ ಉಮರ್ ಅವರು ರಾತ್ರಿ 12 ಗಂಟೆಗೆ ಸುಪ್ರೀಂ ಕೋರ್ಟ್ ಬಾಗಿಲು ತೆರೆಯುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು. ಆರಂಭದಲ್ಲಿ ಸುಪ್ರೀ ಕೋರ್ಟ್ ಸ್ವಯಂಪ್ರೇರಿತವಾಗಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಿತ್ತಾದರೂ, ನಂತರ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿತು. ಇತ್ತ ಸಂಸತ್ತಿನಲ್ಲಿ 12.20ಕ್ಕೆ ಮತದಾನ ಪ್ರಕ್ರಿಯೆ ಆರಂಭವಾದ ಕಾರಣ, ಕಲಾಪವನ್ನು 12.35ಕ್ಕೆ ಮುಂದೂಡಲಾಯಿತು.

ಸರ್ಕಾರ ಪತನವಾಗುವುದು ಖಚಿತವಾಗುತ್ತಿದ್ದಂತೆಯೇ ದೇಶದ ವಿಮಾನ ನಿಲ್ದಾಣಗಳಲ್ಲಿ ಸೇನೆಯು ಕಟ್ಟೆಚ್ಚರ ವಹಿಸಿತು. ಯಾವೊಬ್ಬ ಅಧಿಕಾರಿಯೂ ದೇಶದಿಂದ ಹೊರಗೆ ಹೋಗುವಂತಿಲ್ಲ ಎಂಬ ಆದೇಶ ಹೊರಡಿಸಿತು. ಇದನ್ನೂ ಓದಿ: ಪಾಕ್‌ ಪ್ರಧಾನಿಯಾಗ್ತಾರೆ ಅಂತ ಭವಿಷ್ಯ ನುಡಿದಿದ್ದ ಬುಶ್ರಾ ಬೀಬಿಗೆ ಇಮ್ರಾನ್‌ ಈಗ ಡಿವೋರ್ಸ್‌ ನೀಡಬಹುದು: ತಸ್ಲೀಮಾ

TAGGED:Imran KhanpakistanShehbaz Sharifಇಮ್ರಾನ್‍ಖಾನ್ಪಾಕಿಸ್ತಾನ್ಮತದಾನ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Cheetah Gamini
Latest

ಮತ್ತೆ 3 ಮರಿಗಳಿಗೆ ಜನ್ಮ ನೀಡಿದ ʻಗಾಮಿನಿʼ – ಕುನೋದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ

Public TV
By Public TV
15 minutes ago
PM Modi Tarique Rahman
Latest

ಭಾರತಕ್ಕೆ ಭೇಟಿ ನೀಡುವಂತೆ ಬಾಂಗ್ಲಾದೇಶ ಪ್ರಧಾನಿಗೆ ಮೋದಿ ಆಹ್ವಾನ

Public TV
By Public TV
15 minutes ago
KSRTC
Bengaluru City

ಸಾರಿಗೆ ನೌಕರರಿಂದ ಮುಷ್ಕರ – ನಾಳೆ ಸಂಜೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಸ್ಥಗಿತ?

Public TV
By Public TV
46 minutes ago
Kunigal Ranganath
Bengaluru City

ರೈತರ ಮನೆ ಸೊಸೆ ಆಗುವವರಿಗೆ ಭತ್ಯೆ ಕೊಡಬೇಕು – ಸರ್ಕಾರಕ್ಕೆ ಶಾಸಕ ಕುಣಿಗಲ್ ರಂಗನಾಥ್ ಮನವಿ

Public TV
By Public TV
47 minutes ago
CRIME
Bengaluru City

ಹೆಂಡತಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ

Public TV
By Public TV
57 minutes ago
Team India 2
Cricket

T20 World Cup | ಟೀಂ ಇಂಡಿಯಾದ ‘ಸೂಪರ್-8’ ಸಂಗ್ರಾಮ – ಹೀಗಿದೆ ವೇಳಾಪಟ್ಟಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?