Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಲಕೋಟ್ ಏರ್ ಸ್ಟ್ರೈಕ್ ಬಳಿಕ ಈಗ ವಾಯುಸೀಮೆ ತೆರವುಗೊಳಿಸಿದ ಪಾಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಾಲಕೋಟ್ ಏರ್ ಸ್ಟ್ರೈಕ್ ಬಳಿಕ ಈಗ ವಾಯುಸೀಮೆ ತೆರವುಗೊಳಿಸಿದ ಪಾಕ್

Latest

ಬಾಲಕೋಟ್ ಏರ್ ಸ್ಟ್ರೈಕ್ ಬಳಿಕ ಈಗ ವಾಯುಸೀಮೆ ತೆರವುಗೊಳಿಸಿದ ಪಾಕ್

Public TV
Last updated: July 16, 2019 6:26 pm
Public TV
Share
3 Min Read
airspace pakistan plane
SHARE

ಇಸ್ಲಾಮಾಬಾದ್: ಈಗಾಗಲೇ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿರುವ ಪಾಕಿಸ್ತಾನ ಕೊನೆಗೂ ಎಚ್ಚೆತ್ತುಕೊಂಡಿದ್ದು, ಮಂಗಳವಾರ ಎಲ್ಲ ನಾಗರಿಕ ವಿಮಾನಗಳಿಗೆ ತನ್ನ ವಾಯುಸೀಮೆಯನ್ನು ತೆರವುಗೊಳಿಸಿದೆ.

ವಿಶ್ವ ಬ್ಯಾಂಕ್‍ನ ಹೂಡಿಕೆ ವಿವಾದಗಳ ನ್ಯಾಯಾಲಯವು ಪಾಕಿಸ್ಥಾನಕ್ಕೆ 40 ಸಾವಿರ ಕೋಟಿ ರೂ. ದಂಡ ವಿಧಿಸಿದ ಬೆನ್ನಲ್ಲೇ ಪಾಕಿಸ್ತಾನದಿಂದ ಈ ನಿರ್ಧಾರ ಪ್ರಕಟವಾಗಿದೆ. ಚಿನ್ನದ ಗಣಿಯನ್ನು ವಿದೇಶಿ ಕಂಪೆನಿಗಳಿಗೆ ಗುತ್ತಿಗೆ ನೀಡಿ ಅನಂತರ ರದ್ದು ಮಾಡಿದ ಪ್ರಕರಣದಲ್ಲಿ ವಿಶ್ವಬ್ಯಾಂಕ್ ಕಳೆದ ವಾರ 40 ಸಾವಿರ ಕೋಟಿ ರೂ. ದಂಡ ವಿಧಿಸಿತ್ತು.

After cancellation of NOTAMS by Pakistan and India in the early hours today , there are no restrictions on airspaces of both countries, flights have started using the closed air routes, bringing a significant relief for airlines. @AAI_Official @airindiain @HardeepSPuri

— MoCA_GoI (@MoCA_GoI) July 16, 2019

ಬಾಲಕೋಟ್ ಮೇಲಿನ ವಾಯುದಾಳಿ ಬಳಿಕ ಭಾರತೀಯ ವಿಮಾನ ಸೇರಿದಂತೆ ಎಲ್ಲ ಏರ್ ಲೈನ್ಸ್ ಗಳಿಗೆ ತನ್ನ ವಾಯುಸೀಮೆ ಪ್ರವೇಶಿಸುವುದಕ್ಕೆ ಪಾಕಿಸ್ತಾನ ನಿಷೇಧ ಹೇರಿತ್ತು. ಈ ಸಂಬಂಧ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ಇಂದು ಮಧ್ಯಾಹ್ನ 12:41 ರಿಂದ ಎಲ್ಲ ಏರ್ ಲೈನ್ಸ್ ಗಳಿಗೆ ತನ್ನ ವಾಯು ಸೀಮೆಯನ್ನು ಬಳಸಿಕೊಳ್ಳಲು ಪಾಕಿಸ್ತಾನ ಅನುಮತಿ ನೀಡಿದೆ. ಇಂದಿನಿಂದ ಭಾರತದ ಏರ್ ಲೈನ್ಸ್ ಪಾಕಿಸ್ತಾನ ವಾಯುಸೀಮೆಯನ್ನು ಬಳಸಿಕೊಂಡು ತನ್ನ ಎಂದಿನ ಮಾರ್ಗದಲ್ಲಿ ಸಂಚರಿಸಲಿದೆ ಎಂದು ತಿಳಿಸಿದರು.

balakot airstrike 1

ತನ್ನ ವಾಯುಸೀಮೆಯನ್ನು ನಿರ್ಬಂಧಿಸಿದ್ದರಿಂದ ಈಗಾಗಲೇ ಕುಸಿತಗೊಂಡಿರುವ ಪಾಕ್ ಆರ್ಥಿಕತೆಗೆ ಭಾರೀ ನಷ್ಟವಾಗಿತ್ತು. ಪ್ರತಿದಿನ 400ಕ್ಕೂ ಹೆಚ್ಚು ವಿಮಾನಗಳು ಪಾಕ್ ವಾಯುಸೀಮೆಯನ್ನು ಬಳಸಿಕೊಳ್ಳುತ್ತಿವೆ. ವಾಯುಸೀಮೆಯನ್ನು ಬಳಕೆ ಮಾಡಿದ್ದಕ್ಕೆ ಅಲ್ಲದೇ ಲ್ಯಾಂಡಿಂಗ್ ಆದರೂ ವಿಮಾನದ ಗಾತ್ರಕ್ಕೆ ಅನುಗುಣವಾಗಿ ಶುಲ್ಕ ವಿಧಿಸುತ್ತದೆ. ವಿಮಾನದ ಗಾತ್ರ ಮತ್ತು ದರ್ಜೆಗೆ ಅನುಗುಣವಾಗಿ ಶುಲ್ಕ ಬದಲಾಗುತ್ತದೆ.

ABHINANDAN

ಬೋಯಿಂಗ್ 737 ಪ್ರಯಾಣಿಕ ವಿಮಾನ ತನ್ನ ವಾಯುಸೀಮೆಯನ್ನು ಬಳಕೆ ಮಾಡಿದರೆ ಪಾಕಿಸ್ತಾನ ಪ್ರತಿ ದಿನಕ್ಕೆ ಅಂದಾಜು 600 ಡಾಲರ್ ನಿಂದ 700 ಡಾಲರ್(ಅಂದಾಜು 41 ಸಾವಿರದಿಂದ 48 ಸಾವಿರ ರೂ.) ಶುಲ್ಕ ವಿಧಿಸುತ್ತದೆ. ಒಟ್ಟು 400 ವಿಮಾನಗಳಿಂದ ಪಾಕಿಸ್ತಾನ ಪ್ರತಿದಿನ 3ಲಕ್ಷ ಡಾಲರ್(ಅಂದಾಜು 2 ಕೋಟಿ) ಆದಾಯ ಗಳಿಸುತ್ತದೆ. ಅಂದಾಜು ಒಟ್ಟು 1685 ಕೋಟಿ ರೂ. ಆದಾಯವನ್ನು ಪಾಕಿಸ್ತಾನ ಕಳೆದುಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಪಾಕಿಸ್ತಾನದ ಕಂಪನಿಗಳಿಗೂ ಪ್ರತಿದಿನ 4.50 ಲಕ್ಷ ಡಾಲರ್(ಅಂದಾಜು 3.09 ಕೋಟಿ ರೂ.) ನಷ್ಟವಾಗಿದೆ.

balakot 2 1

ಭಾರತೀಯ ವಾಯುಪಡೆ ಫೆ.26ರಂದು ಬಾಲಾಕೋಟ್‍ನಲ್ಲಿರುವ ಉಗ್ರರ ಅಡಗು ತಾಣದ ಮೇಲೆ ದಾಳಿ ನಡೆಸಿದ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಉಲ್ಬಣಿಸಿತ್ತು. ಈ ಹಿನ್ನೆಲೆಯಲ್ಲಿ ಭಾರತದ ವಿಮಾನಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ವಾಯುಸೀಮೆಯ ಮೇಲೆ ನಿಷೇಧ ಹೇರಿದ ಪರಿಣಾಮ ಭಾರತೀಯ ಕಂಪನಿಗಳು ಹಲವು ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ರದ್ದು ಮಾಡಿತ್ತು.

balakot airstrike 2

ನಾಗರಿಕ ವಿಮಾನಯಾನ ಖಾತೆಯ ಸಚಿವ ಹರ್‍ದೀಪ್ ಸಿಂಗ್ ಪುರಿ ಜುಲೈ 3 ರಂದು ರಾಜ್ಯಸಭೆಯಲ್ಲಿ ಪಾಕಿಸ್ತಾನ ವಾಯುಸೀಮೆಯನ್ನು ನಿಷೇಧಿಸಿದ ಪರಿಣಾಮ ಭಾರತದ ವಿಮಾನಯಾನ ಕಂಪನಿಗಳಿಗೆ ನಷ್ಟವಾಗಿದೆ. ಏರ್ ಇಂಡಿಯಾಗೆ 491 ಕೋಟಿ ರೂ., ಸ್ಪೈಸ್ ಜೆಟ್, ಇಂಡಿಗೋ ಮತ್ತು ಗೋ ಏರ್ ಕಂಪನಿಗಳಿಗೆ ಕ್ರಮವಾಗಿ 30.73 ಕೋಟಿ ರೂ., 25.1 ಕೋಟಿ ರೂ., 2.1 ಕೋಟಿ ರೂ., ನಷ್ಟವಾಗಿದೆ ಎಂದು ತಿಳಿಸಿದ್ದರು.

PAK WOMAN

ಕಿರ್ಗಿಸ್ತಾನ ರಾಜಧಾನಿ ಬಿಷ್ಕೇಕ್‍ನಲ್ಲಿ ಜೂ.13 ಮತ್ತು 14ರಂದು ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆ ಆಯೋಜನೆಗೊಂಡಿತ್ತು. ಈ ಶೃಂಗದಲ್ಲಿ ಪ್ರಧಾನಿ ಮೋದಿ ಭಾಗವಹಿಸಬೇಕಿದ್ದ ಕಾರಣ ಭಾರತದ ಅಧಿಕಾರಿಗಳು ಪಾಕಿಸ್ತಾನಕ್ಕೆ ಮನವಿ ಮಾಡಿ ನಿಷೇಧ ತೆರವುಗೊಳಿಸುವಂತೆ ಮನವಿ ಮಾಡಿದ್ದರು. ಭಾರತದ ಮನವಿಗೆ ಪಾಕ್ ಒಪ್ಪಿ ಮೋದಿ ವಿಮಾನಕ್ಕೆ ಅನುಮತಿ ನೀಡಿತ್ತು. ಆದರೆ ಮೋದಿ ವಿಮಾನ ಪ್ರಯಾಣ ದೂರವಾದರೂ ಪರವಾಗಿಲ್ಲ. ಪಾಕ್ ಮೇಲೆ ಪ್ರಯಾಣಿಸಲ್ಲ ಎಂದು ಹೇಳಿದ್ದರು. ನಂತರ ಮೋದಿ ಓಮನ್, ಇರಾನ್ ಹಾಗೂ ಮಧ್ಯ ಏಷ್ಯಾ ಮೂಲಕ ಕಿರ್ಗಿಸ್ತಾನಕ್ಕೆ ತೆರಳಿದ್ದರು.

Pakistan

ಈ ಹಿಂದೆ ಭಾರತ ಕೇಳಿಕೊಂಡಾಗ ಪಾಕಿಸ್ತಾನ, ಭಾರತದ ಗಡಿಯಲ್ಲಿ ನಿಯೋಜನೆಗೊಂಡಿರುವ ಯುದ್ಧ ವಿಮಾನಗಳನ್ನು ತೆರವುಗೊಳಿಸದ ಹೊರತು ವಾಯುಸೀಮೆಯನ್ನು ಪ್ರವೇಶಕ್ಕೆ ಹೇರಲಾಗಿರುವ ನಿಷೇಧವನ್ನು ಹಿಂದಕ್ಕೆ ಪಡೆಯುವುದಿಲ್ಲ ಎಂದು ಹೇಳಿತ್ತು.

TAGGED:Balakotindiapakistanಪಾಕಿಸ್ತಾನಬಾಲಾಕೋಟ್ಭಾರತ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
8 minutes ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
10 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
37 minutes ago
Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
56 minutes ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
1 hour ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?