Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಪಾಕ್ ಇತಿಹಾಸ ಪುಸ್ತಕಗಳಲ್ಲಿ ಭಾರತ, ಹಿಂದೂ ವಿರೋಧಿ ನಿಲುವು – ಪಠ್ಯದಲ್ಲಿ ಗಾಂಧಿ ಹಿಂದೂ ನಾಯಕ ಎಂದು ಪರಿಚಯ

Public TV
Last updated: March 9, 2023 2:07 pm
Public TV
Share
2 Min Read
india pakistan
SHARE

ನವದೆಹಲಿ: ಪಾಕಿಸ್ತಾನದ (Pakistan) ಶಾಲೆಗಳಲ್ಲಿನ 8 ಮತ್ತು 9 ನೇ ತರಗತಿಯ ಇತಿಹಾಸ ಪಠ್ಯಪುಸ್ತಕಗಳಲ್ಲಿ ಭಾರತ (India) ವಿರೋಧಿ ಹಾಗೂ ಹಿಂದೂ ವಿರೋಧಿ ವಿಷಯಗಳು ತುಂಬಿವೆ ಎಂದು ವರದಿಯಾಗಿದೆ.

ತನ್ನ ರಾಷ್ಟ್ರೀಯ ಪಠ್ಯಕ್ರಮಕ್ಕೆ ಅನುಗುಣವಾಗಿ ವಿನ್ಯಾಸಗೊಳಿಸಿರುವ ಪಠ್ಯಪುಸ್ತಕಗಳಲ್ಲಿ ಭಾರತದ ವಿರುದ್ಧ ತಪ್ಪು ಮಾಹಿತಿಗಳನ್ನು ಮಕ್ಕಳಿಗೆ ಕಲಿಸುತ್ತಿದೆ ಎಂದು ತಿಳಿದು ಬಂದಿದೆ.

ನ್ಯಾಷನಲ್ ಬುಕ್ ಫೌಂಡೇಶನ್ 8 ಮತ್ತು 9 ನೇ ತರಗತಿಯ ಪಠ್ಯಪುಸ್ತಕಗಳನ್ನು ಪ್ರಕಟಿಸಿದೆ. ಪುಸ್ತಕದಲ್ಲಿ ಬ್ರಿಟಿಷರ (British) ಕಾಲದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (Congress) ರಚನೆಗೆ ಅನೇಕ ಭಾರತೀಯರು ಕೈ ಜೋಡಿಸಿದರು. ಧರ್ಮದಲ್ಲಿ ಸಂಪೂರ್ಣವಾಗಿ ಹಿಂದೂವಾಗಿದ್ದರಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಇಡೀ ಭಾರತದ ಧ್ವನಿಗಿಂತ ಹೆಚ್ಚು ಹಿಂದೂ ಧ್ವನಿಯ ರಾಜಕೀಯ ಪಕ್ಷವಾಯಿತು ಎಂದು ಉಲ್ಲೇಖಿಸಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ವಿಚಿತ್ರವಾದ ಎಲೆಕ್ಟ್ರಾನಿಕ್ ಬಲೂನು ಪತ್ತೆ – ಆತಂಕದಲ್ಲಿ ಜನ

GANDHIJI

ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯಕ್ಕಾಗಿ ಭಾರತದ ಹೋರಾಟವನ್ನು ಮುನ್ನಡೆಸಿದ ಮಹಾತ್ಮ ಗಾಂಧಿ (Mahatma Gandhi)ಅವರನ್ನು ಕೇವಲ “ಹಿಂದೂ ನಾಯಕ” ಎಂದು ಪುಸ್ತಕದಲ್ಲಿ ಪರಿಚಯಿಸಲಾಗಿದೆ. ಪಠ್ಯ ಪುಸ್ತಕದಲ್ಲಿ “ಮುಸ್ಲಿಮರನ್ನು ಕಡೆಗಣಿಸುವ” ಆರೋಪವನ್ನು ಹೊರಿಸಲಾಗಿದೆ. ಗಾಂಧಿ ಮತ್ತು ಅವರ ಯುವ ಬೆಂಬಲಿಗರು ಕಾಂಗ್ರೆಸ್‍ನ ಉಸ್ತುವಾರಿಯನ್ನು ವಹಿಸಿಕೊಂಡರು. ಮುಸ್ಲಿಂ ಹಕ್ಕುಗಳನ್ನು ಕಡೆಗಣಿಸಿ ದ್ವೇಷ, ಅಸೂಯೆ ಮತ್ತು ಸಂಕುಚಿತ ಮನೋಭಾವವನ್ನು ಸೃಷ್ಟಿಸಿದರು ಎಂದು ಪಠ್ಯದಲ್ಲಿ ಉಲ್ಲೇಖಿಸಲಾಗಿದೆ.

ಮುಸ್ಲಿಂ (Muslim) ಹಕ್ಕುಗಳ ಹೋರಾಟದಲ್ಲಿ ಹಿಂದೂಗಳನ್ನು (Hindu) ನಂಬಲು ಸಾಧ್ಯವಾಗದಿರುವ ಬಗ್ಗೆ ಪುಸ್ತಕದಲ್ಲಿ ಹಲವಾರು ನಿದರ್ಶನಗಳಿವೆ. ಬಂಗಾಳದ ವಿಭಜನೆಯು ಮುಸ್ಲಿಮರಿಗೆ ಆ ಅರಿವನ್ನು ತಂದಿತು. ಹಿಂದೂ ಬಹುಸಂಖ್ಯಾತರಿಂದ ಯಾವುದೇ ನ್ಯಾಯೋಚಿತ ಮಾರ್ಗವನ್ನು ನಿರೀಕ್ಷಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ನಮ್ಮ ಹಿತಾಸಕ್ತಿಗಳನ್ನು ಕಾಪಾಡಲು ಮುಸ್ಲಿಂ ನಾಯಕರು ತಮ್ಮ ಸಮುದಾಯಕ್ಕೆ ಪ್ರತ್ಯೇಕ ಮತದಾನ ಯೋಜನೆಯನ್ನು ರೂಪಿಸಿದರು ಎಂದು ಹೇಳಲಾಗಿದೆ.

ಮುಸ್ಲಿಮರು ಹಿಂದೂಗಳನ್ನು ಅಥವಾ ಬ್ರಿಟಿಷರನ್ನು ನಂಬಲು ಸಾಧ್ಯವಿಲ್ಲ. ಇದು ಅರಿವಾದ ಬಳಿಕ ಖಿಲಾಫತ್ ಚಳುವಳಿಯು (Khilafat Movement) ಭಾರತದ ಮುಸ್ಲಿಮರಿಗೆ ರಾಷ್ಟ್ರೀಯತೆಯ ಪರಿಕಲ್ಪನೆಯನ್ನು ತಂದಿತು. ಕಾಂಗ್ರೆಸ್ ರಾಷ್ಟ್ರೀಯ ಪಕ್ಷವೆಂದು ಹೇಳಿಕೊಂಡಿತು. ಆದರೆ ವಿಭಜನೆಯ ಪ್ರಶ್ನೆಯಲ್ಲಿ ಅದು ಮತೀಯ ಹಿಂದೂ ಸಂಘಟನೆಯಂತೆ ವರ್ತಿಸಿತು ಎಂದು ಬರೆಯಲಾಗಿದೆ.

ಪಾಕಿಸ್ತಾನದ ಹುಟ್ಟಿನ ಬಗ್ಗೆ ಮಾತನಾಡುವ ಪ್ರತಿಯೊಂದು ಅಧ್ಯಾಯದಲ್ಲಿ ಬ್ರಿಟಿಷರ ಆಳ್ವಿಕೆಯಲ್ಲಿ ಭಾರತದ ಬಹುಪಾಲು ಭಾಗವಾಗಿದ್ದ ಮುಸ್ಲಿಮರನ್ನು ಹಿಂದೂಗಳಿಂದ ಪ್ರತ್ಯೇಕ ಭಾಗವಾಗಿ ಉಲ್ಲೇಖಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಿದೆ.

ಮುಖ್ಯವಾಗಿ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಭಾಗವಹಿಸುವಿಕೆ ಕೂಡ “ಮುಸ್ಲಿಂ ರಾಷ್ಟ್ರೀಯತೆ” ಸಲುವಾಗಿ ಎಂದು ಪದೇ ಪದೇ ಪುಸ್ತಕದಲ್ಲಿ ಒತ್ತಿ ಹೇಳಲಾಗಿದೆ. ಪ್ರಶ್ನೋತ್ತರ ವಿಭಾಗದಲ್ಲಿಯೂ ಸಹ ಪುಸ್ತಕವು ವಿದ್ಯಾರ್ಥಿಗಳಿಗೆ “ಭಾರತದಲ್ಲಿ ಮುಸ್ಲಿಂ ರಾಷ್ಟ್ರೀಯತೆಯ ಕಾರಣವನ್ನು ಬೆಂಬಲಿಸಲು ಅಧ್ಯಾಯದಲ್ಲಿ ಉಲ್ಲೇಖಿಸಲಾದ ಎಲ್ಲಾ ನಾಯಕರು ನಿರ್ವಹಿಸಿದ ಪಾತ್ರವನ್ನು ಚರ್ಚಿಸಲು” ಹೇಳಲಾಗಿದೆ.

9 ನೇ ತರಗತಿಯ ಅಧ್ಯಾಯಗಳಲ್ಲಿ ನ್ಯಾಷನಲ್ ಕಾಂಗ್ರೆಸ್ ಉರ್ದುವನ್ನು ಹಿಂದಿಗೆ ಬದಲಿಸಲು ಕ್ರಮ ಕೈಗೊಂಡಿತು. ಮತ್ತು ಅಧಿಕೃತ ಗೀತೆಯಾಗಿ `ಒಂದೇ ಮಾತರಂ’ ಅನ್ನು ಪರಿಚಯಿಸಲು ಪ್ರಯತ್ನಿಸಿತು. ಈ ಹಾಡು ಮುಸ್ಲಿಂ ವಿರೋಧಿ ಹಿನ್ನೆಲೆಯನ್ನು ಹೊಂದಿತ್ತು ಮತ್ತು ದ್ವೇಷವನ್ನು ಕೆರಳಿಸಿತು. ಪಾಕಿಸ್ತಾನದಲ್ಲಿ ವಿಭಜನೆಯ ನಂತರ ಹಿಂದೂಗಳು ಮತ್ತು ಮುಸ್ಲಿಮರಿಗೆ ಪ್ರತ್ಯೇಕ ಗುಣಮಟ್ಟದ ಆಹಾರ ನೀಡಲಾಯಿತು. ಭಾರತದ ಸರ್ಕಾರ ಸಾಮೂಹಿಕ ಹಿಂಸಾಚಾರವನ್ನು ನಡೆಸಿತು. ನೀರಾವರಿ ವಿಚಾರದಲ್ಲೂ ಪಾಕ್ ಗೆ ಭಾರತದಿಂದ ಅನ್ಯಾಯವಾಗಿದೆ ಎಂದು ಪಠ್ಯದಲ್ಲಿ ತಿಳಿಸಿದೆ. ಇದನ್ನೂ ಓದಿ: 1,487 ಗ್ರಾಂ ಚಿನ್ನ ಸಾಗಾಟ ಮಾಡ್ತಿದ್ದ ಏರ್ ಇಂಡಿಯಾ ಸಿಬ್ಬಂದಿ ಅರೆಸ್ಟ್

TAGGED:britishcongresshinduindiaKhilafat MovementMahatma Gandhimuslimಕಾಂಗ್ರೆಸ್ಬ್ರಿಟಿಷ್ಭಾರತಮಹಾತ್ಮ ಗಾಂಧಿಹಿಂದೂ
Share This Article
Facebook Whatsapp Whatsapp Telegram

You Might Also Like

Bengaluru JP Nagar Old Couple Suicide In Old Age Home
Bengaluru City

Bengaluru | ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

Public TV
By Public TV
30 minutes ago
Nikhil Kumaraswamy 1
Districts

ಮಾವು ಬೆಳೆಗೆ ಬೆಂಬಲ ಬೆಲೆ ಕೊಡಿಸಿದ್ದು ಕುಮಾರಣ್ಣ, ಡಿಕೆ ಬ್ರದರ್ಸ್ ಏನ್ಮಾಡ್ತಿದ್ದಾರೆ: ನಿಖಿಲ್‌ ಕಿಡಿ

Public TV
By Public TV
46 minutes ago
Smoke Shiva
Cinema

`ಸ್ಮೋಕ್ ಶಿವ’ ಚಿತ್ರಕ್ಕೆ ನೆನಪಿರಲಿ ಪ್ರೇಮ್ ಸಾಥ್

Public TV
By Public TV
1 hour ago
Himachal Pradesh Flood 2
Latest

ಹಿಮಾಚಲ ಪ್ರದೇಶ | ಕುಲುವಿನಲ್ಲಿ ಮೇಘಸ್ಫೋಟದಿಂದ ಭಾರೀ ಪ್ರವಾಹ – ಉಕ್ಕಿ ಹರಿದ ಪಾರ್ವತಿ ನದಿ

Public TV
By Public TV
1 hour ago
Vidhana Soudha
Bengaluru City

ಎಲ್ಲಾ ಇಲಾಖೆಗಳು ಆಡಳಿತದಲ್ಲಿ ಕಡ್ಡಾಯವಾಗಿ ಕನ್ನಡ ಬಳಸಿ: ಸರ್ಕಾರ ಆದೇಶ

Public TV
By Public TV
1 hour ago
Hombale Films
Cinema

`ಮಹಾವತಾರ ಸಿನಿಮಾಟಿಕ್ ಯೂನಿವರ್ಸ್’ ಅನಾವರಣ – ಹೊಂಬಾಳೆ ಫಿಲ್ಮ್ಸ್ ದಿಟ್ಟ ಹೆಜ್ಜೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?