ನವದೆಹಲಿ: ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಪಾಕ್ ಹೆಲಿಕಾಪ್ಟರ್ ಪೂಂಚ್ ನಲ್ಲಿ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದೆ.
ಭಾನುವಾರ ಮಧ್ಯಾಹ್ನ 12.13ಕ್ಕೆ ಈ ಘಟನೆ ನಡೆದಿದ್ದು, ಭಾರತೀಯ ಸೇನೆ ಗುಂಡು ಹಾರಿಸಿದೆ. ಕೆಲ ನಿಮಿಷ ಹಾರಾಟ ನಡೆಸಿ ಮತ್ತೆ ಪಾಕ್ ಭೂ ಪ್ರದೇಶಕ್ಕೆ ತೆರಳಿದೆ. ಸದ್ಯ ಗಡಿಯಲ್ಲಿ ಹೈ ಅಲರ್ಟ್ ಘೋಷಣೆಯಾಗಿದ್ದು ಗುಂಡಿನ ದಾಳಿ ನಡೆಯುತ್ತಿದೆ.
- Advertisement 2
ಶನಿವಾರ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನೀವಾಗಿ ಗುಂಡು ಹಾರಿಸಲು ಹೋಗಬೇಡಿ. ಪಾಕ್ ಸೇನೆ ಗುಂಡು ಹಾರಿಸಿದರೆ ಲೆಕ್ಕವಿಲ್ಲದ್ದಷ್ಟು ಗುಂಡು ಸಿಡಿಸಿ ಎಂದು ಸೈನಿಕರಿಗೆ ಸೂಚನೆ ನೀಡಿರುವುದಾಗಿ ಹೇಳಿದ್ದರು.
- Advertisement 3
#WATCH A Pakistani helicopter violated Indian airspace in Poonch sector of #JammuAndKashmir pic.twitter.com/O4QHxCf7CR
— ANI (@ANI) September 30, 2018
- Advertisement 4
ವಿಶ್ವ ಸಂಸ್ಥೆಯ 73ನೇ ಸಾಮಾನ್ಯ ಸಭೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಪಾಕಿಸ್ತಾನ ಒಂದು ಕಡೆ ಭಾರತದ ಜೊತೆ ಮಾತುಕತೆ ನಡೆಸಲು ಸಿದ್ಧ ಎಂದು ಹೇಳುತ್ತಿದೆ ಮತ್ತೊಂದು ಕಡೆ ಉಗ್ರರನ್ನು ಪೋಷಣೆ ಮಾಡುತ್ತಿದೆ. ಅಷ್ಟೇ ಅಲ್ಲದೇ ಉಗ್ರರ ಸ್ಟ್ಯಾಂಪ್ ಬಿಡುಗಡೆಗೊಳಿಸುತ್ತದೆ. ಈ ವಿಚಾರದ ಬಗ್ಗೆ ಸಾಕಷ್ಟು ಎಚ್ಚರಿಕೆ ನೀಡಿದರೂ ತನ್ನ ಮೊಂಡುವಾದವನ್ನು ಮುಂದುವರಿಸುತ್ತದೆ ಎಂದು ಕಿಡಿಕಾರಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv