ಬೆಂಗಳೂರು: ಪಂಚಮಸಾಲಿ ಸಮುದಾಯದ ಸ್ವಾಮೀಜಿಗಳಲ್ಲಿ ಮತ್ತೆ ಒಡಕು ಕಾಣಿಸಿಕೊಂಡಿದೆ. ಈಗಾಗಲೇ ಸಮುದಾಯದ ಎರಡು ಗುರುಪೀಠಗಳು ಇದ್ದರೂ, ಈಗ ಮೂರನೇ ಪೀಠ ರಚನೆಗೆ ಸಮುದಾಯದ ಇತರೆ ಸ್ವಾಮೀಜಿಗಳ ಬಣ ಕೈಹಾಕಿದೆ.
ಮುಂದಿನ ದಿನಗಳಲ್ಲಿ ಮೂರನೇ ಪೀಠ ರಚನೆ ಆಗಬಹುದು ಎಂದು ಬಬಲೇಶ್ವರ ಬೃಹನ್ಮಠ ಮತ್ತು ಮನಗೊಳಿ ಹಿರೇಮಠದ ಸ್ವಾಮೀಜಿಗಳು ಸುಳಿವು ನೀಡಿದ್ದಾರೆ. ಸದ್ಯ ಇರುವ ಎರಡು ಪೀಠಗಳನ್ನು ದೂರವಿಟ್ಟು ಮೀಸಲಾತಿಗಾಗಿ ಇತರೆ ಪಂಚಮಸಾಲಿ ಸ್ವಾಮೀಜಿಗಳು ಸಿಎಂ ಬಳಿಗೆ ಹೋಗಲು ತೀರ್ಮಾನಿಸಿದ್ದಾರೆ. ಆದರೆ ಈ ಬಗ್ಗೆ ತಮಗೇನು ಗೊತ್ತಿಲ್ಲ.ಈ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗಲ್ಲ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಈ ಸಮುದಾಯದ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಎಲ್ಲಾ ಕಡೆ ಆಗುತ್ತಿದೆ. ಆದರೆ ಆ ಬಗ್ಗೆ ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ. ಮೀಸಲಾತಿ ಹೋರಾಟವನ್ನು ಯಾರು ಎಷ್ಟೇ ಒಡೆಯಲು ಪ್ರಯತ್ನ ಮಾಡಿದರೂ, ವಿರೋಧಿಗಳು ಸಹ ನಮ್ಮವರೇ ಎಂದು ಭಾವಿಸಿ ಒಟ್ಟಾಗಿ ಕರೆದುಕೊಂಡು ಹೋಗುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮಯುದ್ಧ- ಎಂ.ಬಿ.ಪಾಟೀಲ್ ಧರ್ಮ ದಾಳಕ್ಕೆ ಕಾಂಗ್ರೆಸ್ ಮೌನ