Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಶಕುಂತಲೆ ಪ್ರೇಮ ಬಯಸಿ ಹೊರಟ ʻದುಷ್ಯಂತʼನ ಬದಕು ಕೊಲೆಯಲ್ಲಿ ಅಂತ್ಯ – ಡೇಟಿಂಗ್‌ ಆ್ಯಪ್‌ ಪ್ರಿಯತಮೆಗೆ ಜೀವಾವಧಿ ಶಿಕ್ಷೆ

Public TV
Last updated: November 26, 2023 12:22 pm
Public TV
Share
3 Min Read
Dating App
SHARE

ಜೈಪುರ: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ನಲ್ಲಿ ಪ್ರೀತಿ (Online Relationship) ಹುಡುಕುವವರ ಸಂಖ್ಯೆ ಹೆಚ್ಚಾಗಿದೆ. ಯುವಕರು, ಮಹಿಳೆಯರು, ವೃದ್ಧರೂ ಸೇರಿದಂತೆ ಅನೇಕರು ಪ್ರೀತಿಯ ಮೋಹಕ್ಕೆ ಬಿದ್ದು ಬಲಿಯಾಗುತ್ತಿದ್ದಾರೆ. ಯುವಕರು ಚೆಂದದ ಹುಡುಗಿಯನ್ನು ಪಟಾಯಿಸಲು ನಾನಾ ತಂತ್ರಗಳನ್ನ ಹೆಣೆಯುತ್ತಾರೆ. ಅದಕ್ಕೆ ಸೊಪ್ಪು ಹಾಕುವ ಹುಡುಗಿಯರೂ ಆತನ ಜೊತೆ ಗಂಟೆಗಟ್ಟಲೆ ಮೆಸೇಜ್‌ ಮಾಡಲು, ಊರು ಸುತ್ತಲು ಈಗ ಆನ್‌ಲೈನ್‌ ಡೇಟಿಂಗ್‌ ಆ್ಯಪ್‌ಗಳು (Dating Apps) ಏಣಿಯಾಗಿವೆ. ಆದ್ರೆ ದೆಹಲಿಯಲ್ಲಿ (Delhi) ದುಷ್ಯಂತ ಎಂಬ ವ್ಯಕ್ತಿಯೊಬ್ಬ ಡೇಟಿಂಗ್‌ ಆ್ಯಪ್‌ನಲ್ಲಿ‌ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಜೈಪುರಕ್ಕೆ ಹೋಗಿ ಕೊಲೆಯಾಗಿದ್ದಾನೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಪುರ ನ್ಯಾಯಾಲಯವು (Jaipur Court) ಚೆಲುವೆ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಸೆಷನ್ಸ್ ನ್ಯಾಯಾಧೀಶ ಅಜಿತ್ ಕುಮಾರ್ ಹಿಂಗರ್ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಇದನ್ನೂ ಓದಿ: ಲವ್‌ ಜಿಹಾದ್‌ಗೆ ಒಳಗಾಗೋದಿಲ್ಲ – ಗದಗ SSK ಸಮಾಜದಿಂದ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ

LOVERS 1

2018ರಲ್ಲಿ ಡೇಟಿಂಗ್‌ ಆಪ್‌ವೊಂದರಲ್ಲಿ ದೆಹಲಿಯ ದುಷ್ಯಂತ್ ಶರ್ಮಾ (ಪ್ರೊಫೈಲ್‌ ಹೆಸರು) ಹಾಗೂ ಜೈಪುರದ ಪ್ರಿಯಾ ಸೇಠ್‌ ಎಂಬಾಕೆಯೊಂದಿಗೆ ಪರಿಚಯವಾಗಿದೆ. ಇಬ್ಬರೂ ಚಾಟ್‌ ಮಾಡಿದಾಗ ಪರಸ್ಪರರ ಅಭಿವೃದ್ಧಿಗಳಿಗೆ ಸಾಮ್ಯತೆ ಇದೆ ಎಂಬುದು ಗೊತ್ತಾಗಿದೆ. 3 ತಿಂಗಳ ಬಳಿಕ ಇಬ್ಬರೂ ಭೇಟಿ ಆಗಲು ನಿರ್ಧರಿಸಿದ್ದಾರೆ. ಜೈಪುರಕ್ಕೆ ಬಾ ಎಂದು ಪ್ರಿಯಾ ಸೇಠ್‌ ಕರೆದಿದ್ದಾಳೆ. ನಾನು ಬಾಡಿಗೆ ಮನೆಯಲ್ಲಿ ಇದ್ದೇನೆ, ಇಲ್ಲಿಗೇ ಬಾ ಎಂದು ಆಹ್ವಾನಿಸಿದ್ದಾಳೆ. ನೆಚ್ಚಿನ ಪ್ರಿಯತಮೆಯ ಭೇಟಿಗೆ ಕಾದಿದ್ದ ದುಷ್ಯಂತ್‌ ಶರ್ಮಾ ಜೈಪುರಕ್ಕೆ ಹೋಗಿದ್ದಾರೆ. ಇದನ್ನೂ ಓದಿ: ಕಳ್ಳರಿಗೆ ಮೆಣಸಿನಕಾಯಿ ತಿನ್ನಲು ಒತ್ತಾಯಿಸಿ ಹಿಗ್ಗಾಮುಗ್ಗ ಥಳಿಸಿದ ಗ್ರಾಮಸ್ಥರು

Dating App

ದುಷ್ಯಂತ್‌ ಶರ್ಮಾ ಅವರು ಜೈಪುರದಲ್ಲಿರುವ ಪ್ರಿಯಾ ಸೇಠ್‌ ಅವರ ಬಾಡಿಗೆ ಮನೆ ಪ್ರವೇಶಿಸಿದ ನಂತರ ಆಗಿದ್ದೇ ಬೇರೆ. ಪ್ರಿಯಾ ಸೇಠ್‌, ದೀಕ್ಷಂತ್‌ ಕಮ್ರಾ ಹಾಗೂ ಲಕ್ಷ್ಯಾ ವಾಲಿಯಾ ಎಂಬುವರು ದುಷ್ಯಂತ್‌ ಶರ್ಮಾ ಅವರನ್ನು ಅಪಹರಣ ಮಾಡಿದ್ದಾರೆ. ದುಷ್ಯಂತ್‌ ಶರ್ಮಾ ಅವರ ತಂದೆಗೆ ಕರೆ ಮಾಡಿ, ನಿಮ್ಮ ಮಗ ಜೀವಂತವಾಗಿ ಮನೆ ಸೇರಬೇಕಾದ್ರೆ 10 ಲಕ್ಷ ರೂ. ಕೊಡಬೇಕು ಎಂದಿದ್ದಾರೆ. ಆದ್ರೆ ದುಷ್ಯಂತ್‌ ತಂದೆ ನನ್ನ ಬಳಿ ಅಷ್ಟು ದುಡ್ಡು ಇಲ್ಲ, 3 ಲಕ್ಷ ಮಾತ್ರ ಕೊಡಲು ಸಾಧ್ಯ ಎಂದಿದ್ದಾರೆ. ಇದೇ ವೇಳೆ ತಂದೆ ಜತೆ ಮಾತನಾಡಿದ ದುಷ್ಯಂತ್‌ ಶರ್ಮಾ, ಅಪ್ಪಾ ಇವರು ತುಂಬ ಟಾರ್ಚರ್‌ ಮಾಡುತ್ತಿದ್ದಾರೆ. ನೀವು ಹಣ ಕೊಡದಿದ್ದರೆ ಕೊಂದೇ ಬಿಡುತ್ತಾರೆ ಎಂದು ಅಂಗಲಾಚಿದ್ದಾರೆ. ಆದರೆ, ದುಷ್ಯಂತ್‌ ಶರ್ಮಾ ಅವರ ತಂದೆಗೆ ಹಣ ಹೊಂದಿಸಲು ಆಗದ ಕಾರಣ, ಮೂವರೂ ದುಷ್ಕರ್ಮಿಗಳು ದುಷ್ಯಂತ್‌ ಶರ್ಮಾ ಅವರನ್ನು ಕ್ರೂರವಾಗಿ ಕೊಂದಿದ್ದಾರೆ.

ದುಷ್ಯಂತ್‌ ಹೇಳಿದ ಸುಳ್ಳೇ ಕೊಲೆಗೆ ಕಾರಣವಾಯ್ತಾ?
ದುಷ್ಯಂತ್‌ ಶರ್ಮಾ ಅವರ ಹೆಸರು ನಕಲಿ ಆಗಿದೆ. ಅವರ ನಿಜವಾದ ಹೆಸರು ವಿವಾನ್‌ ಕೊಹ್ಲಿ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ನಾನು ದೊಡ್ಡ ಉದ್ಯಮಿ ಎಂಬುದಾಗಿ ಪ್ರಿಯಾ ಸೇಠ್‌ಗೆ ಸುಳ್ಳು ಹೇಳಿದ್ದಾನೆ. ಅಷ್ಟೇ ಅಲ್ಲ, ಮದುವೆಯಾಗಿರುವುದನ್ನೂ ಮುಚ್ಚಿಟ್ಟು, ಪ್ರಿಯಾ ಸೇಠ್‌ಳನ್ನು ಮದುವೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾನೆ. ಯಾವಾಗ ದುಷ್ಯಂತ್‌ ಶರ್ಮಾ ದೊಡ್ಡ ಉದ್ಯಮಿ ಎಂಬುದನ್ನು ಕೇಳಿದಳೋ, ಪ್ರಿಯಾ ಸೇಠ್‌ಗೆ ಹಣದ ಆಸೆ ಹುಟ್ಟಿದೆ. ಹಾಗಾಗಿಯೇ, ಜೈಪುರಕ್ಕೆ ಕರೆಸಿ, ಅಪಹರಣ ಮಾಡಿದ್ದಾಳೆ. ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾಳೆ. ಆದರೆ, ದುಷ್ಯಂತ್‌ ಶರ್ಮಾ ಬಡವ ಎಂದು, ಆತನ ತಂದೆ ಹಣ ಕೊಡಲು ಆಗುವುದಿಲ್ಲ ಎಂದು ಗೊತ್ತಾದ ಕೂಡಲೇ ಸಹಚರರ ಜತೆಗೂಡಿ ಕೊಲೆ ಮಾಡಿದ್ದಾಳೆ ಎಂದು ತಿಳಿದುಬಂದಿದೆ. ಕೊನೆಗೆ ಮೂವರೂ ಅಪರಾಧಿಗಳು ಎಂದು ತೀರ್ಪಿತ್ತ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

TAGGED:Dating AppsJaipur MurderloversNew DelhiOnline Relationshipಆನ್‌ಲೈನ್‌ ಪ್ರೀತಿಜೈಪುರ ಮರ್ಡರ್‌ಡೇಟಿಂಗ್ನವದೆಹಲಿ
Share This Article
Facebook Whatsapp Whatsapp Telegram

Cinema News

Virat Kohli 1
ಕೊಹ್ಲಿಯಿಂದ ಫೋಟೋಗೆ ಲೈಕ್ ಗಿಟ್ಟಿಸಿಕೊಂಡ ಹಾಲ್ಗೆನ್ನೆ ಬ್ಯೂಟಿಯ ಫಸ್ಟ್ ರಿಯಾಕ್ಷನ್
Cinema Cricket Latest Sports Top Stories
sudeep 3
ರಾತ್ರಿನೇ ಸಿಗೋಣವಾ ಎಂದ ಕಿಚ್ಚ; ಅಭಿಮಾನಿಗಳಿಗೆ ಸುದೀಪ್‌ ಪತ್ರ
Cinema Latest Sandalwood Top Stories
Madarasi Cinema
ಮದರಾಸಿ ಟ್ರೈಲರ್‌ ರಿಲೀಸ್ – ಮಾಸ್ ಲುಕ್‌ನಲ್ಲಿ ಶಿವಕಾರ್ತಿಕೇಯನ್
Cinema Latest South cinema Top Stories
Mangalapuram 1
ಮಂಗಳಾಪುರಂ ಚಿತ್ರಕ್ಕೆ ಬಿಗ್ ಬಾಸ್ ಖ್ಯಾತಿಯ ಗೌತಮಿ ನಾಯಕಿ
Cinema Latest Sandalwood
Madenuru Manu 1
ಶಿವಣ್ಣನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು
Cinema Latest Sandalwood Top Stories

You Might Also Like

Water Aerodrome Project
Districts

ಶರಾವತಿ ಹಿನ್ನೀರಲ್ಲಿ ವಾಟರ್ ಏರೊಡ್ರೋಮ್‌ ಯೋಜನೆ – ಸಿಗಂದೂರು ಬಳಿ ಇಳಿಯಲಿದೆ ವಿಮಾನ

Public TV
By Public TV
14 minutes ago
Mysuru 2
Crime

ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ – ಪ್ರಿಯಕರ ಅರೆಸ್ಟ್‌

Public TV
By Public TV
30 minutes ago
Narendra Modi
Court

ಮೋದಿ ಪದವಿಯ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್

Public TV
By Public TV
32 minutes ago
Jodhpur Lecturer Sets Herself Daughter On Fire Note Points To Dowry Harassment
Crime

ವರದಕ್ಷಿಣೆ ಕಿರುಕುಳ – 3 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

Public TV
By Public TV
40 minutes ago
Ganesha
Latest

ಶ್ರೀಮಂತ ಗಣಪನಿಗೆ ಈ ಬಾರಿ 474 ಕೋಟಿ ರೂ. ವಿಮೆ – ಏನಿದ್ರ ವಿಶೇಷತೆ ಅಂತೀರಾ?

Public TV
By Public TV
45 minutes ago
01
Latest

ಶ್ರೀಮಂತ ಗಣಪನಿಗೆ ಈ ಬಾರಿ 400 ಕೋಟಿ ರೂ. ವಿಮೆ – ಏನಿದ್ರ ವಿಶೇಷತೆ ಅಂತೀರಾ?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?