ಮಡಿಕೇರಿ: ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕೊಡಗು (Kodagu) ಜಿಲ್ಲೆಯ ಕುಶಾಲನಗರ ಪಟ್ಟಣದ ನೇತಾಜಿ ಬಡಾವಣೆಯಲ್ಲಿ ಮಂಗಳವಾರ ನಡೆದಿದೆ.
ಬಡಾವಣೆ ನಿವಾಸಿ ಎಲ್ಐಸಿ ಏಜೆಂಟ್ ಸಂತೋಷ್ ಎಂಬವರ ಪುತ್ರಿ ಜಸ್ಮಿತಾ (19) ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ. ಈಕೆ ಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ (Para Medical) ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಇದನ್ನೂ ಓದಿ: ಮಂಡ್ಯದಲ್ಲಿ ಮಲಗಿದ್ದಲ್ಲೇ ಒಂಟಿ ಮಹಿಳೆ ಸುಟ್ಟು ಕರಕಲು
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಕುಶಾಲನಗರ ಟೌನ್ ಪೊಲೀಸ್ ಪಿಎಸ್ಐ ಅಪ್ಪಾಜಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿದ್ಯಾರ್ಥಿನಿಯ ಸಾವಿನ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಮೆಟ್ರೋ ಪಿಲ್ಲರ್ ಕುಸಿತ – ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ : BMRCL
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k