ಪರಮೇಶ್ವರ್ ಹಠಾವೋ ಕಾಂಗ್ರೆಸ್ ಬಚಾವೋ- ಡಿಸಿಎಂಗೆ ತುಮಕೂರಲ್ಲಿ ಭಾರೀ ಮುಖಭಂಗ

Public TV
1 Min Read
tmk param 2

ತುಮಕೂರು: ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ದೇವೇಗೌಡರು ಪರಾಭವಗೊಳ್ಳುತಿದ್ದಂತೆ ಚುನಾವಣೆಯ ಉಸ್ತುವಾರಿ ಹೊತ್ತ ಡಿಸಿಎಂ ಜಿ.ಪರಮೇಶ್ವರ್ ವಿರುದ್ಧದ ಕೂಗು ಕೇಳಿ ಬರುತ್ತಿದೆ. ಪರಮೇಶ್ವರ್ ಹಠಾವೋ ಕಾಂಗ್ರೆಸ್ ಬಚಾವೋ ಎಂಬ ಪೋಸ್ಟರ್ ಅಂಟಿಸುವ ಮೂಲಕ ಕೈ ಕಾರ್ಯಕರ್ತರು ಜಿ.ಪರಮೇಶ್ವರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ತುಮಕೂರಿನ ವಾಲ್ಮೀಕಿ ನಗರದ ಪ್ರವೇಶದ್ವಾರ ಬಳಿ ‘ಪರಮೇಶ್ವರ್ ಹಠಾವೋ ಎಂಬ ಕಾಂಗ್ರೆಸ್ ಬಚಾವೋ’ ಎಂಬ ಭಿತ್ತಿ ಪತ್ರ ಅಂಟಿಸಿ ಪರಮೇಶ್ವರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೋಸ್ಟರ್ ಕೆಳಗಡೆ ನೊಂದ ಕಾಂಗ್ರೆಸ್ ಕಾರ್ಯಕರ್ತರು ಎಂದು ಒಕ್ಕಣಿಕೆ ಬರೆಯಲಾಗಿದೆ.

tmk param 1

ಆಪ್ತ ಮುದ್ದಹನುಮೇಗೌಡರಿಗೆ ಟಿಕೆಟ್ ಕೊಡಿಸುವಲ್ಲಿ ಜಿ.ಪರಮೇಶ್ವರ್ ವಿಫಲವಾಗಿದ್ದರಿಂದ ಸಹಜವಾಗಿಯೇ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಾಧಾನ ಇತ್ತು. ಮುದ್ದಹನುಮೇಗೌಡರು ಸ್ಪರ್ಧಿಸಿದರೆ ಚುನಾವಣೆಯಲ್ಲಿ ಗೆಲ್ಲುತ್ತಿದ್ದರು ಎಂಬ ನಂಬಿಕೆ ಕೈ ಕಾರ್ಯಕರ್ತರದ್ದಾಗಿತ್ತು. ಈಗ ಲೋಕಸಭಾ ಕ್ಷೇತ್ರ ಬಿಜೆಪಿ ಪಾಲಾಗಿದ್ದು ಕೈ ಕಾರ್ಯಕರ್ತರು ನೊಂದು ಡಿಸಿಎಂ ಜಿ.ಪರಮೇಶ್ವರ್ ವಿರುದ್ಧ ಪೋಸ್ಟರ್ ಹಾಕಿದ್ದಾರೆ ಎನ್ನಲಾಗಿದೆ.

ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು 5,96,231 ಮತಗಳನ್ನು ಪಡೆದಿದ್ದರೆ, ದೇವೇಗೌಡರು 5,83,344 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಬಸವರಾಜು ಅವರು 12,887 ಬಹುಮತಗಳ ಅಂತರದಲ್ಲಿ ಗೆಲವು ಸಾಧಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *