– ನಿರಾಕರಿಸಿದ ಮುಖ್ಯೋಪಾಧ್ಯಾಯರ ಮೇಲೆ ಹಲ್ಲೆ
ವಿಜಯಪುರ: ಅಪ್ರಾಪ್ತ ಬಾಲಕಿಯ ಜನ್ಮ ದಿನಾಂಕ ತಿದ್ದುಪಡಿಗೆ ನಿರಾಕರಿಸಿದ್ದಕ್ಕೆ ಶಾಲಾ ಮುಖ್ಯೋಪಾಧ್ಯಾಯರ ಮೇಲೆ ಬಾಲಕಿ ಪೋಷಕರು ಹಲ್ಲೆ ಮಾಡಿರುವ ಘಟನೆ ವಿಜಯಪುರದ ಸಿಂದಗಿ ತಾಲೂಕಿನ ಹಚ್ಯಾಳ ಗ್ರಾಮದಲ್ಲಿ ನಡೆದಿದೆ.
ರಾಜು ಮೇಲಿನಮನೆ ಎಂಬವರು ತಮ್ಮ ಮಗಳ ವಿವಾಹವನ್ನ ತಮ್ಮ ಗ್ರಾಮದಲ್ಲಿ ನಡೆಯುತ್ತಿದ್ದ ಸಾಮೂಹಿಕ ಮದುವೆ ಕಾರ್ಯಕ್ರಮದಲ್ಲಿ ಮಾಡಲು ಮುಂದಾಗಿದ್ದರು. ಆದ್ರೆ ಬಾಲಕಿ ಅಪ್ರಾಪ್ತ ವಯಸ್ಕಳಾಗಿರುವುದರಿಂದ ಹಚ್ಯಾಳ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಹುಸೇನಸಾಬ್ಗೆ ಆಕೆಯ ಜನ್ಮದಿನಾಂಕ ತಿದ್ದುಪಡಿ ಮಾಡಿಕೊಡಲು ಒತ್ತಾಯಿಸಿದ್ದಾರೆ. ಆಗ ಮುಖ್ಯೋಪಾಧ್ಯಾಯರು ಈ ಕೆಲಸ ಮಾಡಿಕೊಡಲು ನಿರಾಕರಿದ್ದರು.
ಎಷ್ಟೇ ಒತ್ತಾಯಿಸಿದರು ಮುಖ್ಯೋಪಾಧ್ಯಾಯರು ಮಾತ್ರ ಜನ್ಮ ದಿನಾಂಕ ತಿದ್ದುಪಡಿ ಮಾಡಿಕೊಡಲ್ಲ ಎಂದು ಹೇಳಿದ್ದಾರೆ. ಇಷ್ಟಕ್ಕೆ ಕೋಪಗೊಂಡ ಬಾಲಕಿ ಪೋಷಕರು ಮುಖ್ಯೋಪಾಧ್ಯಾಯರ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾರೆ. ಸದ್ಯ ಮುಖ್ಯೋಪಾಧ್ಯಾಯ ಹುಸೇನಸಾಬ್ ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಘಟನೆ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv