Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkaballapur

ಹೆತ್ತ ಮಗಳನ್ನೇ ಕೊಂದ ತಂದೆ, ತಾಯಿ, ದೊಡ್ಡಪ್ಪ – ಮರ್ಯಾದಾ ಹತ್ಯಾ ಪ್ರಕರಣ ಬಯಲು

Public TV
Last updated: September 27, 2021 3:16 pm
Public TV
Share
4 Min Read
muder chikkabalapura w
SHARE

ಚಿಕ್ಕಬಳ್ಳಾಪುರ: ಹೆತ್ತ ತಂದೆ,ತಾಯಿ ಹಾಗೂ ದೊಡ್ಡಪ್ಪ ಸೇರಿ ಮಗಳನ್ನು ಕೊಲೆ ಮಾಡಿದ್ದು, ಪೊಲೀಸರ ತನಿಖೆಯಲ್ಲಿ ಮರ್ಯಾದಾ ಹತ್ಯಾ ಪ್ರಕರಣ ಬಯಲಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

Contents
ಕೊಲೆ ಯಾಕೆ?ಮೃತದೇಹವನ್ನ ಬಾವಿಯಲ್ಲಿ ಬಿಸಾಡಿದರು!ಆತ್ಮಹತ್ಯೆ ಎಂದೇ ಭಾವಿಸಿದ್ದ ಪೊಲೀಸರು!ಪೊಲೀಸರಿಗೆ ಎಸ್‍ಪಿ ಪ್ರಶಂಸೆ!

ಹೆತ್ತ ತಂದೆ, ತಾಯಿ ಮತ್ತು ದೊಡ್ಡಪ್ಪನಿಂದಲೇ ಹತಳಾದ ದುರ್ದೈವಿಯ ಹೆಸರು ಪರ್ವಿನಾ ಬಾನು. ಆಕೆಯ ತಾಯಿ ಗುಲ್ಜಾರ್, ತಂದೆ ಫಯಾಜ್ ಹಾಗೂ ದೊಡ್ಡಪ್ಪ ಪ್ಯಾರೇಜಾನ್ ಕೊಲೆ ಮಾಡಿದವರು. ಈ ಮೂವರನ್ನು ಬಂಧಿಸಿರುವ ಗೌರಿಬಿದನೂರು ಗ್ರಾಮಾಂತರ ಪೊಲೀಸರು ವಿಚಾರಣೆ ಮುಂದುವರೆಸಿ ತನಿಖೆ ಕೈಗೊಂಡಿದ್ದಾರೆ.

chikkabalapura murder 1

ಕೊಲೆ ಯಾಕೆ?

ಫಯಾಜ್ ಹಾಗೂ ಗುಲ್ಜಾರ್ ಮಗಳಾದ ಪರ್ವಿನಾ ಬಾನುವಿಗೆ 10 ವರ್ಷಗಳ ಹಿಂದೆ ತಮ್ಮದೇ ಸಮುದಾಯದ ಯುವಕನ ಜೊತೆ ಮದುವೆ ಮಾಡಿದ್ದರು. ಆದರೆ ಮದುವೆ ಮೊದಲ ದಿನವೇ ಗಂಡನನ್ನು ತೊರೆದು ಬಂದ ಪರ್ವಿನಾ ಬಾನು ಅನ್ಯ ಧರ್ಮದ ಪ್ರಿಯಕರ ಮಣಿವಾಲ ಗ್ರಾಮದ ಶಿವಪ್ಪ ಎಂಬಾತನ ಜೊತೆ ಸಂಸಾರ ಸಾಗಿಸುತ್ತಿದ್ದಳು. ಇದನ್ನೂ ಓದಿ: ಪ್ರತಿಭಟನೆ ನಡೆದರೂ ಚಿಕ್ಕಬಳ್ಳಾಪುರದಲ್ಲಿ KSRTC ಬಸ್ಸುಗಳಿಗೆ ಇಲ್ಲ ಬಂದ್’

chikkabalapura murder

ಶಿಲ್ಪಾ ಎಂದು ಮರುನಾಮಕರಣವನ್ನು ಸಹ ಮಾಡಿಕೊಂಡಿದ್ದರು. ಇವರಿಬ್ಬರ ಸುಖ ದಾಂಪತ್ಯ ಎಂಬಂತೆ ಗಂಡು ಮಗು ಸಹ ಆಗಿತ್ತು. ಆದರೆ ಅನಾರೋಗ್ಯದ ಕಾರಣ ಶಿವಪ್ಪ ತೀರಿಕೊಂಡ ನಂತರ ಮಣಿವಾಲ ತೊರೆದ ಪರ್ವಿನಾ ಬಾನು ಆಲಿಯಾಸ್ ಶಿಲ್ಪಾ ಮುಸಲ್ಮಾನರಹಳ್ಳಿಗೆ ಬಂದು ನೆಲೆಸಿದ್ದಳು. ಗಾರ್ಮೆಂಟ್ಸ್ ಕೆಲಸಕ್ಕೆ ಎಂದು ಹೋಗುತ್ತಿದ್ದ ಈಕೆ ವಾಟದಹೊಸಹಳ್ಳಿಯ ವಿನಯ್ ಜೊತೆ ಲಿವಿಂಗ್ ಟುಗೆದರ್ ರಿಲೇಶನ್ ಶಿಪ್ ಬೆಳೆಸಿಕೊಂಡಿದ್ದಳು.

ಈ ವಿನಯ್ ಸಹ ಅಚಾನಾಕ್ಕಾಗಿ ಬೈಕ್ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ ಮೃತಪಡುತ್ತಾನೆ. ಇದರಿಂದ ಈಕೆಯ ಜೊತೆ ಸಂಬಂಧ ಬೆಳೆಸಿದವರೆಲ್ಲಾ ಸಾಯುತ್ತಾರೆ ಎಂದು ಈಕೆಯ ಪರಿಚಯಸ್ಥರು ಎಲ್ಲರೂ ಮಾತನಾಡಿಕೊಂಡು ಅನುಮಾನಿಸಲು ಶುರು ಮಾಡಿದ್ರು. ಇದರಿಂದ ನೊಂದಿದ್ದ ಪರ್ವಿನಾ ಬಾನು ಸೆ.04 ರಂದು ತನ್ನ ತಂದೆ, ತಾಯಿ ಹಾಗೂ ದೊಡ್ಡಪ್ಪ ಕೆಲಸ ಮಾಡ್ತಿದ್ದ ಶ್ರೀನಿವಾಸಚಾರ್ಲಹಳ್ಳಿಯ ಮಾವಿನ ತೋಟಕ್ಕೆ ಹೋಗಿದ್ದಾಳೆ. ಇದನ್ನೂ ಓದಿ:  ಹೊಸ ಸಂಸತ್ ಭವನ ನಿರ್ಮಾಣದ ಸ್ಥಳಕ್ಕೆ ರಾತ್ರಿ ದಿಢೀರ್ ಭೇಟಿ ಕೊಟ್ಟ ಮೋದಿ

ಈ ವೇಳೆ ತಾಯಿ ಗುಲ್ಜಾರ್ ಹಾಗೂ ದೊಡ್ಡಪ್ಪನಾದ ಪ್ಯಾರೇಜಾನ್ ಜೊತೆ ಅಕ್ರಮ ಸಂಬಂಧ ಹೊಂದಿರೋ ವಿಷಯ ತಿಳಿದುಕೊಂಡಿದ್ದಾಳೆ. ಈ ವೇಳೆ ಇವಳು ಇದ್ರೆ ನಮ್ಮ ಸಂಬಂಧಕ್ಕೂ ಅಡ್ಡಿ ಹಾಗೂ ಮೊದಲೇ ನಮ್ಮ ಸಮುದಾಯ ಬಿಟ್ಟು ಬೇರೆ ಸಮುದಾಯದವನ ಜೊತೆ ಹೋಗಿ ಈಗ ಬಂದಿದ್ದಾಳೆ ಎಂದು ಗಲಾಟೆ ಮಾಡಿ ಪರ್ವಿನಾ ಬಾನು ಧರಿಸಿದ್ದ ಜಾಕೆಟ್ ನ ದಾರದಿಂದಲೇ ಕುತ್ತಿಗೆ ಬಿಗಿದು ಆಕೆಯ ಕೊಲೆ ಮಾಡಿದ್ದಾರೆ.

ಮೃತದೇಹವನ್ನ ಬಾವಿಯಲ್ಲಿ ಬಿಸಾಡಿದರು!

ತದನಂತರ ಬಂದ ತಂದೆಗೂ ವಿಷಯ ತಿಳಿಸಿ ಮೂವರು ಸೇರಿ ಗಾಡಿಯಲ್ಲಿ ಮೃತದೇಹವನ್ನ ರಾತ್ರಿ ವೇಳೆ ತೆಗೆದುಕೊಂಡು ಹೋಗಿ ವಾಟದಹೊಸಹಳ್ಳಿ ಬಳಿಯ ಬಾವಿಯಲ್ಲಿ ಬಿಸಾಡಿದ್ದಾರೆ. ಇದು ಆತ್ಮಹತ್ಯೆ ಎಂದು ಬಿಂಬಿಸೋಕೆ ಬಾವಿಗೆ ಹೊಂದಿಕೊಂಡ ಕೊಂಬೆ ಕಟಾವು ಮಾಡಿ ಮೃತದೇಹದ ಮೇಲೆ ಬಿಸಾಡಿ ಬಂದಿದ್ದರು.

chikkabalapura murder 2 1

ಯಾರಿಗೂ ಗೊತ್ತಾಗಲ್ಲ ಎಂದು ತಮ್ಮ ಪಾಡಿಗೆ ತಾವಿದ್ದರು. ಇನ್ನೂ ಸ್ಥಳೀಯರ ಮಾಹಿತಿ ಮೇರೆಗೆ ಸೆ.05 ರಂದು ಗೌರಿಬಿದನೂರು ಗ್ರಾಮಾಂತರ ಪೊಲೀಸರು ಬಾವಿಯಿಂದ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ ಮಾಡಿ ತಂದೆ ತಾಯಿಗೆ ಮೃತದೇಹ ತಗೊಂಡು ಹೋಗುವಂತೆ ಹೇಳಿದ್ರು. ಆದರೆ ಆಕೆಯ ಪೋಷಕರು ಮೃತದೇಹ ತೆಗೆದುಕೊಂಡು ಹೋಗಲಿಲ್ಲ. ಪೊಲೀಸರ ಅನಾಥ ಶವ ಎಂದು ಅಂತ್ಯಸಂಸ್ಕಾರ ಕಾರ್ಯ ನೇರವೇರಿಸಿದ್ದರು. ಇದನ್ನೂ ಓದಿ: ಪೊಲೀಸ್ ನೇಮಕಾತಿ ಪರೀಕ್ಷೆ ವೇಳೆ ವಂಚನೆ – ಐವರು ಅರೆಸ್ಟ್

ಪರ್ವಿನಾ ಬಾನು ಗಂಡ ಹಾಗೂ ಪ್ರಿಯಕರನ ಸಾವಿನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಅಂದಾಜಿಸಿದ್ರು. ಇನ್ನೂ ಪರ್ವಿನಾ ವಾಸವಿದ್ದ ಮನೆಯಲ್ಲಿ ಐ ಮಿಸ್ ಯೂ ವಿಜೆ ನಾನು ನಿನ್ನ ಹತ್ರ ಬರ್ತೀದ್ದೀನಿ ಅನ್ನೋ ಬರಹ ಕೂಡ ಇತ್ತು. ಇದ್ರಿಂದ ಗಂಡ ಪ್ರಿಯಕರನ ಸಾವುಗಳಿಂದ ನೊಂದಿದ್ದ ಪರ್ವಿನಾ ಆತ್ಮಹತ್ಯೆ ಅಂತಲೇ ಎಲ್ಲರೂ ಅಂದುಕೊಂಡಿದ್ರು.

ಆತ್ಮಹತ್ಯೆ ಎಂದೇ ಭಾವಿಸಿದ್ದ ಪೊಲೀಸರು!

ಪರ್ವಿನಾ ಬಾನು ಬಾವಿಯಲ್ಲಿ ಬಿದ್ದ ಜಾಗ ಹಾಗೂ ಆಕೆಯ ಕುತ್ತಿಗೆ ಬಿಗಿದಿದ್ದ ಮಾರ್ಕ್ ಹಾಗೂ ಮರಕ್ಕೆ ನೇಣು ಹಾಕಿಕೊಂಡು ಮೃತಪಟ್ಟಿದ್ರೆ ಕೊಂಬೆ ಮುರಿದು ಬಾವಿಯಲ್ಲಿ ಬಿದ್ದಿರುವ ರೀತಿ ಅದು ಕಾಣಿಸುತ್ತಿರಲಿಲ್ಲ. ಕೊಂಬೆಯನ್ನ ಯಾರೂ ಮಚ್ಚಿನಲ್ಲಿ ಕಟಾವು ಮಾಡಿದ ಹಾಗೆ ಇತ್ತು. ಕಟಾವು ಮಾಡಿದ್ದು ಯಾರು? ಕುತ್ತಿಗೆಗೆ ಬಿಗಿದುಕೊಂಡಿದ್ರೆ ದಾರ ಎಲ್ಲಿ ಹೋಯ್ತು? ಎಂಬ ಅನುಮಾನಗಳು ಮೂಡಿ ಇದು ಆತ್ಮಹತ್ಯೆ ಅಲ್ಲ ಕೊಲೆ ಎಂಬ ಅನುಮಾನ ಸಿಪಿಐ ಶಶಿಧರ್ ಅವರಿಗೆ ಮೂಡಿತ್ತು. ಹೀಗಾಗಿ ಘಟನೆಯನ್ನು ಆಳವಾಗಿ ತನಿಖೆ ಕೈಗೊಂಡ ಪೊಲೀಸರಿಗೆ ತಂದೆ, ತಾಯಿ ಹಾಗೂ ಅಕೆಯ ದೊಡ್ಡಪ್ಪನೇ ಈ ಕೊಲಗಾರರು ಎಂದು ಗೊತ್ತಾಗಿದೆ. ಸದ್ಯ ಮೂವರು ಆರೋಪಿಗಳು ಪೊಲೀಸರ ಅತಿಥಿಗಳಾಗಿ ಜೈಲು ಸೇರುವಂತಾಗಿದೆ. ಇದನ್ನೂ ಓದಿ: ಸಿಎಂ ಜಿಲ್ಲೆಯಲ್ಲಿ ಮರಳು ಸಾಗಾಣಿಕೆಗೆ ಮಕ್ಕಳ ಬಳಕೆ – ಕಣ್ಣುಮುಚ್ಚಿ ಕುಳಿತ ಪೊಲೀಸ್ ಇಲಾಖೆ

ಪೊಲೀಸರಿಗೆ ಎಸ್‍ಪಿ ಪ್ರಶಂಸೆ!

ಆರಂಭದಲ್ಲಿ ಆತ್ಮಹತ್ಯೆ ಎಂದೇ ಎಲ್ಲರೂ ಅಂದುಕೊಂಡಿದ್ದರು. ಇಲ್ಲ ಇದು ಕೊಲೆ ಇರಬಹುದು ಎಂದು ಅನುಮಾನದ ಮೇರೆಗೆ ತನಿಖೆ ಮಾಡಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ಬಿಯಾದ ಸಿಪಿಐ ಶಶಿಧರ್ ಹಾಗೂ ಪಿ.ಎಸ್.ಐ ವಿಜಯ್ ಕುಮಾರ್ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿಯ ಕಾರ್ಯಕ್ಕೆ ಎಸ್‍ಪಿ ಮಿಥುನ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿ ಬಹುಮಾನ ಘೋಷಣೆ ಮಾಡಿದ್ದಾರೆ.

TAGGED:chikkaballapurMurderPublic TVಕೊಲೆಚಿಕ್ಕಬಳ್ಳಾಪುರಪಬ್ಲಿಕ್ ಟಿವಿಮರ್ಯಾದಾ ಹತ್ಯಾ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Actor Jaggesh at mantralaya 1
ರಾಯರ ಮಧ್ಯಾರಾಧನೆಯಲ್ಲಿ ನಟ ಜಗ್ಗೇಶ್ ಭಾಗಿ
Cinema Districts Latest Raichur Sandalwood Top Stories
rana daggubati
ಆನ್‌ಲೈನ್ ಬೆಟ್ಟಿಂಗ್ – ಇ.ಡಿ ವಿಚಾರಣೆಗೆ ಹಾಜರಾದ ನಟ ರಾಣಾ ದಗ್ಗುಬಾಟಿ
Cinema Latest Top Stories
Dhruva Sarja Raghavendra Hegde
ಧ್ರುವ ಬಳಗದ ಆರೋಪಕ್ಕೆ ನಿರ್ದೇಶಕ ರಾಘವೇಂದ್ರ ಹೆಗಡೆ ಸ್ಪಷ್ಟನೆ
Cinema Latest Sandalwood Top Stories
darshan 28 years cinema journey
ದರ್ಶನ್ ಸಿನಿ ಜರ್ನಿಗೆ 28 ವರ್ಷ: ‘ಡಿ’ ಫ್ಯಾನ್ಸ್ ಸಂಭ್ರಮ
Cinema Latest Sandalwood Top Stories
Shoba Karandlaje
ವಿಷ್ಣು ಸಮಾಧಿ ಸ್ಥಳವನ್ನು ಕಲಾಗ್ರಾಮವನ್ನಾಗಿ ಮಾಡಿ – ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ
Bengaluru City Cinema Karnataka Latest Sandalwood States Top Stories

You Might Also Like

Ranganath
Bengaluru City

ರಾಜಣ್ಣ ವಜಾ ಬೆನ್ನಲ್ಲೇ ಹೊಸ ಬಾಂಬ್‌ ಸಿಡಿಸಿದ ಕುಣಿಗಲ್‌ ರಂಗನಾಥ್‌

Public TV
By Public TV
12 minutes ago
Shobha Karandlaje
Bengaluru City

ರಾಜಣ್ಣ ಕಿಕ್‌ಔಟ್‌ | ಕಾಂಗ್ರೆಸ್‍ನಲ್ಲಿ ಸತ್ಯವಂತರಿಗೆ ಕಾಲವಿಲ್ಲ: ಶೋಭಾ ಕರಂದ್ಲಾಜೆ

Public TV
By Public TV
18 minutes ago
PM Modi 1
Latest

ಸಂಸದರಿಗೆ 184 ಫ್ಲ್ಯಾಟ್‌ ಉದ್ಘಾಟಿಸಿದ ಮೋದಿ – 4 ಟವರ್‌ಗಳಿಗೆ 4 ನದಿಗಳ ಹೆಸರು

Public TV
By Public TV
19 minutes ago
KN Rajanna
Bengaluru City

ರಾಜಣ್ಣ ರಾಜೀನಾಮೆ ಅಲ್ಲ, ಸಂಪುಟದಿಂದಲೇ ಕಿಕ್‌ಔಟ್‌

Public TV
By Public TV
24 minutes ago
Ramanagara Gas Refilling
Crime

Ramanagara | ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ – ಇಬ್ಬರ ಮೇಲೆ ಪ್ರಕರಣ ದಾಖಲು

Public TV
By Public TV
42 minutes ago
DOGS
Court

ದೆಹಲಿ | ಯಾವುದೇ ಕಾರಣಕ್ಕೂ ಚಿಕ್ಕ ಮಕ್ಕಳು ರೇಬಿಸ್‌ನಿಂದ ಸಾಯಬಾರದು: ಸುಪ್ರೀಂ ಕೋರ್ಟ್‌ ಖಡಕ್‌ ಆದೇಶ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?