ಕಾರವಾರ: ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜನವರಿ 29ರಂದು ನಡೆಯುವ ‘ಪರೀಕ್ಷಾ ಕಿ ಬಾತ್ ಪಿಎಂ ಕೆ ಸಾಥ್’ ಕಾರ್ಯಕ್ರಮಕ್ಕೆ ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ.
ಪೂರ್ವಿ ಸುಂದರ್ ಶಾನಭಾಗ್ ಉತ್ತರ ಕನ್ನಡ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿ. ಪೂರ್ವಿ ಶಾನಬಾಗ್ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನವೋದಯ ಶಾಲೆಯ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಶಾಲೆಯ ಸಹಪಾಠಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
- Advertisement 2
- Advertisement 3
ನಮ್ಮ ಶಾಲೆಯಿಂದ ಒಟ್ಟು 110 ವಿದ್ಯಾರ್ಥಿಗಳು ಆನ್ಲೈನ್ ನಲ್ಲಿ ನಡೆಯುವ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ಅವರಲ್ಲಿ ಪೂರ್ವಿ ಸುಂದರ್ ಶಾನಭಾಗ್ ಆಯ್ಕೆಯಾಗಿದ್ದಾಳೆ. ಹೀಗಾಗಿ ದೆಹಲಿಯಲ್ಲಿ ನಡೆಯುವ ‘ಪರೀಕ್ಷಾ ಕಿ ಬಾತ್ ಪಿಎಂ ಕೆ ಸಾಥ್’ ಕಾರ್ಯಕ್ರಮದಲ್ಲಿ ಭಾಗವಹಿಸಲು ಪೂರ್ವಿ ತಮ್ಮ ಪೋಷಕರೊಂದಿಗೆ ಇಂದು ದೆಹಲಿಗೆ ಹೊರಟಿದ್ದಾರೆ ಎಂದು ಶಾಲೆಯ ಪ್ರಾಚಾರ್ಯ ವಿ.ಬಿ.ಲಮಾಣಿ ತಿಳಿಸಿದ್ದಾರೆ.
- Advertisement 4
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv