Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಟ್ಟ ಮೇಲೂ ಬುದ್ಧಿ ಕಲಿಯದ ರಾಜ್ಯ ಕಾಂಗ್ರೆಸ್ ನಾಯಕರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆಟ್ಟ ಮೇಲೂ ಬುದ್ಧಿ ಕಲಿಯದ ರಾಜ್ಯ ಕಾಂಗ್ರೆಸ್ ನಾಯಕರು!

Bengaluru City

ಕೆಟ್ಟ ಮೇಲೂ ಬುದ್ಧಿ ಕಲಿಯದ ರಾಜ್ಯ ಕಾಂಗ್ರೆಸ್ ನಾಯಕರು!

Public TV
Last updated: January 15, 2020 10:02 pm
Public TV
Share
3 Min Read
congress leaders 1
SHARE

ವಿಧಾನಸಭೆ, ಲೋಕಸಭೆ ಮತ್ತು ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ರಾಜ್ಯದಲ್ಲಿ ಹೀನಾಯವಾಗಿ ಸೋತಿರುವ ಕಾಂಗ್ರೆಸ್ ಪಕ್ಷದ ಮುಖಂಡರು ಇನ್ನೂ ಬುದ್ಧಿ ಕಲಿತಂತಿಲ್ಲ. ಸೋತಿರುವ ಪಕ್ಷಕ್ಕೆ ಪುನಶ್ಚೇತನ ಕೊಡಿಸುವುದನ್ನು ಬಿಟ್ಟು ಬೀದಿ ಕಾಳಗದಲ್ಲಿ ತೊಡಗಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಆದ ಹಿನ್ನಡೆಯ ಬಳಿಕ ಎಚ್ಚೆತ್ತುಕೊಂಡು, ತಪ್ಪಿನ ಅರಿವಾಗಿ ಲೋಪ ಸರಿಪಡಿಸುವ ಅವಕಾಶ ಇತ್ತು. ಆದ್ರೆ ಅನಿರೀಕ್ಷಿತ ಬೆಳವಣಿಗೆಯಿಂದಾಗಿ ಜೆಡಿಎಸ್ ಜೊತೆ ಸರ್ಕಾರ ರಚಿಸಿದ ಕಾಂಗ್ರೆಸ್ ನಾಯಕರು, ಪಕ್ಷವನ್ನು ಕಟ್ಟುವುದನ್ನು ಮರೆತೇಬಿಟ್ಟರು. ಜೆಡಿಎಸ್ ಜೊತೆ ಸಮನ್ವಯ ಸಾಧಿಸಲು ಹೆಣಗಾಡಿದ್ದು ಒಂದೆಡೆಯಾದರೆ, ಪಕ್ಷದೊಳಗಿನ ಪರ-ವಿರೋಧ ಗುಂಪುಗಳ ದ್ವಂದ್ವ ನಿಲುವಿನ ಪರಿಣಾಮ ಪಕ್ಷದ ವರ್ಚಸ್ಸು ಪಾತಾಳಕ್ಕೆ ಹೋಗಿದ್ದಂತೂ ನಿಜ. ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರ ಕೆಡವಲು ವ್ಯೂಹ ರಚಿಸಿದರು ಎಂಬ ಆರೋಪ ಒಂದು ಕಡೆಯಾದರೆ, ಡಾ.ಪರಮೇಶ್ವರ್ ಮತ್ತು ಡಿಕೆ ಶಿವಕುಮಾರ್ ಸರ್ಕಾರಕ್ಕೆ ಅಂಟಿಕೊಂಡು ನಿಂತರು. ಆವಾಗಲೂ ಪಕ್ಷದ ಹಿತವನ್ನು ಎರಡು ಬಣವೂ ಕಡೆಗಣಿಸಿತ್ತು.

congress Leaders

ಕಳೆದ ವರ್ಷ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಡೆದ ಹೈಡ್ರಾಮಾಗಳು ಕಾಂಗ್ರೆಸ್ಸನ್ನು ಅಧೋಗತಿಗೆ ತಂದು ನಿಲ್ಲಿಸಿತು. 28 ಕ್ಷೇತ್ರಗಳ ಪೈಕಿ ಕೇವಲ ಒಂದು ಸ್ಥಾನವನ್ನು ಗೆದ್ದು ಕಾಂಗ್ರೆಸ್ ಮಕಾಡೆ ಮಲಗಿತು. ಆತ್ಮಾವಲೋಕನಕ್ಕೆ ಸೂಕ್ತ ಕಾಲವೆಂದು ಅರಿತು ಜಾಗೃತರಾಗಬೇಕಿದ್ದ ರಾಜ್ಯ ನಾಯಕರು, ಒಣಪ್ರತಿಷ್ಠೆಯಿಂದ ಕಚ್ಚಾಡುತ್ತಾ ಕಾಲ ಕಳೆದರು. ಪಕ್ಷದ ಶಾಸಕರ ಬೇಸರ, ಅಸಮಾಧಾನವನ್ನು ಊಹಿಸುವ ಗೋಜಿಗೂ ಅವರು ಹೋಗಲಿಲ್ಲ, ಕಾರ್ಯಕರ್ತರ ಬವಣೆಯನ್ನೂ ಕೇಳಿಸಿಕೊಳ್ಳಲಿಲ್ಲ. ಕೆಲವು ಶಾಸಕರು ಬಂಡಾಯವೆದ್ದು ಪಕ್ಷ ಬಿಟ್ಟಾಗಲೂ ಜಾಗೃತರಾಗದ ರಾಜ್ಯ ಕಾಂಗ್ರೆಸ್ ನಾಯಕರು ಕೈಚೆಲ್ಲಿದ್ದು ಗೊತ್ತೇ ಇದೆ. ಹಾಗೋ ಹೀಗೋ ಇದ್ದ ಸರ್ಕಾರವನ್ನು ಉಳಿಸಿಕೊಳ್ಳಲಾಗದೇ, ಪಕ್ಷದ ನೆಲೆಯನ್ನೂ ಗಟ್ಟಿಗೊಳಿಸದೇ ಮೈಮರೆತಿದ್ದೂ ಹೌದು.

ನಂತರ 15 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲೂ ಒಗ್ಗಟ್ಟಾಗದೇ ಒಣಪ್ರತಿಷ್ಠೆ ಮಾಡಿಕೊಂಡು ಹೀನಾಯವಾಗಿ ಪಕ್ಷಕ್ಕೆ ಸೋಲಾಗುವಂತಾಯಿತು. ಇದಕ್ಕೂ ರಾಜ್ಯದ ನಾಯಕರ ಬಳಿ ಉತ್ತರವಿಲ್ಲ, ಪಶ್ಚಾತ್ತಾಪವಿಲ್ಲ. ಒಂದು ಆತ್ಮಾವಲೋಕನವೂ ಇಲ್ಲ. ಅಂದರೆ ಪಕ್ಷದ ಸ್ಥಿತಿ ಪಾತಾಳಕ್ಕಿಳಿಯುತ್ತಿದ್ದರೂ ನಾಯಕರು ಎಚ್ಚೆತ್ತುಕೊಳ್ಳುವ ಪ್ರಯತ್ನ ಮಾಡುತ್ತಲೇ ಇಲ್ಲ. ಕೆಪಿಸಿಸಿ ಅಧ್ಯಕ್ಷ ಗಾದಿಗೆ ದಿನೇಶ್ ಗುಂಡೂರಾವ್ ಮತ್ತು ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಸೋಲಿನ ನೈತಿಕ ಹೊಣೆ ಹೊತ್ತರು. ಆದ್ರೆ ಆಗಿರುವ ತಪ್ಪನ್ನು ಸರಿಪಡಿಸುವ ಗೋಜಿಗೆ ಯಾರೂ ಹೋಗಿಲ್ಲ. ಹಿಂದಿನ ಎಲ್ಲಾ ಚುನಾವಣೆಯ ವೇಳೆ ತಮ್ಮ ತಮ್ಮ ಸೋಲಿಗೆ ಕಾರಣ ಯಾರು, ಪಕ್ಷದೊಳಗಿನ ಮೋಸಗಾರರು ಯಾರು ಅಂತಾ ಬಹಿರಂಗವಾಗಿ ಟೀಕಿಸುತ್ತಾ ಕಾಲಕಳೆದರೇ ವಿನಃ ಪಕ್ಷ ಬಲಪಡಿಸುವ ಪ್ರಯತ್ನ ನಡೆಸಲೇ ಇಲ್ಲ.

congress 3

ವಿಪರ್ಯಾಸ ಅಂದ್ರೆ, ಇಷ್ಟೆಲ್ಲಾ ಕೆಟ್ಟ ಪರಿಸ್ಥಿತಿ ಇದ್ದಾಗಲೂ ಕೆಪಿಸಿಸಿ ಅಧ್ಯಕ್ಷ ಗಾದಿ ಮತ್ತು ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಆಯ್ಕೆ ಸಂಬಂಧ ಪರಸ್ಪರ ಕಾಲೆಳೆಯುತ್ತಾ ಕಾಲಕಳೆಯುತ್ತಿದ್ದಾರೆಯೇ ಹೊರತು, ಕನಿಷ್ಠ ಪಕ್ಷದ ಸ್ಥಿತಿಗತಿ ಸುಧಾರಣೆಯ ಬಗ್ಗೆ ಚಿಂತಿಸುತ್ತಲೂ ಇಲ್ಲ. ಇನ್ನೂ ಕಿತ್ತಾಟ, ತೆರೆಮರೆಯ ಕಸರತ್ತು, ಅದೂ ಇದೂ ಅಂತಾ ಡ್ರಾಮಾ ಮಾಡುತ್ತಲೇ ಇರುವ ರಾಜ್ಯ ಕಾಂಗ್ರೆಸ್ ನಾಯಕರು ನಿದ್ದೆಯಿಂದ ಎಚ್ಚೆತ್ತಿಲ್ಲ. ಆಳುವ ಸರ್ಕಾರ, ಪ್ರಬಲ ವಿರೋಧಿ ಬಿಜೆಪಿಯನ್ನು ಹಣಿಯುವ ಹತ್ತು ಹಲವು ಅವಕಾಶಗಳನ್ನು ಕೈಚೆಲ್ಲಿ ಮೈಮರೆತಿರುವ ಕಾಂಗ್ರೆಸ್ಸಿಗರಿಗೆ ಕೆಟ್ಟ ಮೇಲೂ ಬುದ್ಧಿ ಬಂದಿಲ್ಲ ಅಂತಷ್ಟೇ ಹೇಳಬಹುದು.

Congress flag 2 e1573529275338

ಲೋಕಸಭೆ, ವಿಧಾನಸಭೆ ಚುನಾವಣೆಗಳಂತೂ ಸದ್ಯಕ್ಕಿಲ್ಲ. ಕೆಲವೇ ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಬರುತ್ತಿದೆ. ಅದು ಪಕ್ಷದ ಬೇರುಗಳಾದ ಕಾರ್ಯಕರ್ತರ ಚುನಾವಣೆ. ಅದರ ಪರಿವೆಯೂ ಕಾಂಗ್ರೆಸ್ ನಾಯಕರಿಗೆ ಇದ್ದಂತಿಲ್ಲ. ಏಳೆಂಟು ತಿಂಗಳ ಬಳಿಕ ಬಿಬಿಎಂಪಿ ಚುನಾವಣೆ ಇದೆ. ಅದಕ್ಕೂ ಸಿದ್ಧತೆ ಆರಂಭಿಸಿಲ್ಲ. ಯುದ್ಧಕಾಲದಲ್ಲಿ ಶಸ್ತ್ರಾಭ್ಯಾಸ ಎಂಬಂತೆ ನಡೆದುಕೊಳ್ಳುತ್ತಿರುವ ಕಾಂಗ್ರೆಸ್ ನಾಯಕರು ಹೀಗೆಯೇ ಮುಂದುವರಿದರೆ ಮತ್ತೊಂದು ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿ ಬಾಯಿ ಬಡ್ಕೊಳ್ಳೋದು ಮಾತ್ರ ಬಾಕಿ ಉಳಿದಿರುತ್ತದೆ. ರಾಷ್ಟ್ರೀಯ ಪಕ್ಷವೊಂದರ ನಾಯಕರ ಧೋರಣೆ, ಕಾರ್ಯಕರ್ತರನ್ನು ಚಿಂತೆಗೀಡು ಮಾಡುತ್ತಿದ್ದು ಏನು ಮಾಡಬೇಕೆಂದು ತೋಚದೇ ಚಿಂತಾಕ್ರಾಂತರಾಗಿದ್ದಾರೆ. ನೂತನ ಅಧ್ಯಕ್ಷರು ಮತ್ತು ವಿರೋಧ ಪಕ್ಷ ನಾಯಕನ ಸ್ಥಾನದ ಗೊಂದಲ ನಿವಾರಣೆ ಬಳಿಕವಾದ್ರೂ ಪಕ್ಷದ ನಾಯಕರಲ್ಲಿ ಒಮ್ಮತ ಮೂಡುತ್ತಾ ಅಥವಾ ಮತ್ತೆ ಅದೇ ಹಳೇ ಚಾಳಿ ಮುಂದುವರಿಸುತ್ತಾರಾ ಅನ್ನೋದು ಕಾರ್ಯಕರ್ತರ ಚಿಂತೆ.

TAGGED:Karnataka CongressPoll electionPublic TVಉಪಚುನಾವಣೆಕಾಂಗ್ರೆಸ್ಲೋಕಸಭೆವಿಧಾನಸಭೆ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

nobody told me its a dangerous profession jokes Donald Trump after WHCD event shooting Hilton Hotel
Latest

ಅಧ್ಯಕ್ಷ ಹುದ್ದೆ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ಗುಂಡಿನ ದಾಳಿಯ ನಂತರ ಟ್ರಂಪ್ ವ್ಯಂಗ್ಯ

Public TV
By Public TV
4 seconds ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
2 minutes ago
teacher committed suicide by being shot in madikeri
Crime

ಪ್ರೀತಿಯ ವಿದ್ಯಾರ್ಥಿಗಳೆ ನಿಮಗೆ ವಿದಾಯ ಎಂದು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

Public TV
By Public TV
2 minutes ago
Rising temperature In Bagalkot the historical Muchakhandi lake has dried up 2
Bagalkot

ಬಾಗಲಕೋಟೆಯಲ್ಲಿ ಸುಡುವ ಬಿಸಿಲು: ಬತ್ತಿ ಬರಿದಾದ ಐತಿಹಾಸಿಕ ಮುಚಖಂಡಿ ಕೆರೆ!

Public TV
By Public TV
1 hour ago
IPL 2026 Preity Zinta Punches Priyansh Arya After Punjab Kings Historic Win
Cricket

ಗೆದ್ದ ಬಳಿಕ `ಪ್ರೀತಿʼಯ ಪಂಚ್‌ – ಪ್ರಿಯಾಂಶ್‌ ಆರ್ಯ ಶಾಕ್!

Public TV
By Public TV
1 hour ago
Delhi Airport SWISS Flight Fire
Latest

ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ – 6 ಮಂದಿಗೆ ಗಾಯ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?