ಮೈಸೂರು: ಭವಾನಿ ರೇವಣ್ಣ (Bhavani Revanna) ಸ್ಪರ್ಧೆ ಮಾಡುವುದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಜೆಡಿಎಸ್ (JDS) ಯುವ ನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹಾಸನದಿಂದ ಭವಾನಿ ರೇವಣ್ಣ ಸ್ಪರ್ಧೆ ವಿಚಾರದ ಕುರಿತು ಮಾತನಾಡಿ, ಪಕ್ಷದ ವರಿಷ್ಠರು, ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ತೀರ್ಮಾನವಾಗಲಿದೆ. ನಮ್ಮದು ಪ್ರಾದೇಶಿಕ ಪಕ್ಷ, ನಾನು ಮಾತನಾಡುವುದು ಸೂಕ್ತವಲ್ಲ. ಹೆಚ್ಡಿಕೆ, ವರಿಷ್ಠರು ಹಾಗೂ ರಾಜ್ಯಾಧ್ಯಕ್ಷರು ಇದಕ್ಕೆಲ್ಲ ಉತ್ತರ ನೀಡುತ್ತಾರೆ. ಹಾಸನದ ಕಾರ್ಯಕರ್ತರ ಮನಸನಲ್ಲಿರುವುದನ್ನ ತಿಳಿದು ವರಿಷ್ಠರು ತೀರ್ಮಾನಕ್ಕೆ ಬರುತ್ತಾರೆ ಎಂದರು. ಇದನ್ನೂ ಓದಿ: ರಂಗೇರಿದ ಚಾಮುಂಡೇಶ್ವರಿ ಕ್ಷೇತ್ರ- ಸಿದ್ದರಾಮಯ್ಯ ಬೆಂಬಲಿಗರಿಗೆ ಜಿಟಿಡಿ ಸೆಡ್ಡು
ಹೆಚ್ ಡಿಕೆ ವಿರುದ್ಧ ರೇವಣ್ಣ (HD Revanna) ಪುತ್ರ ಸೂರಜ್ (Suraj Revanna) ಹೇಳಿಕೆ ವಿಚಾರದ ಕುರಿತು ಮಾತನಾಡಿ, ನಾವೆಲ್ಲ ಅಣ್ಣ-ತಮ್ಮಂದಿರು, ಒಂದೇ ಮನೆಯ ಮಕ್ಕಳು. ಒಂದು ಮಾತು ಬರಲಿದೆ ಹೋಗಲಿದೆ ಎಂದು ಹೆಚ್ಡಿಕೆ (HD Kumaraswamy) ಹೇಳಿದ್ದಾರೆ. ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಬಿಂಬಿಸುವುದು ಸರಿಯಲ್ಲ. ಸೂರಜ್ ಪ್ರಬುದ್ಧರಿದ್ದಾರೆ. ಈ ವಿಚಾರದಲ್ಲಿ ಯಾರೋ ಶಕುನಿಗಳು ದಿಕ್ಕು ತಪ್ಪುಸಬಹುದು. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ನಾನೊಬ್ಬ ಪಕ್ಷದ ಕಾರ್ಯಕರ್ತ ಅಷ್ಟೇ ಎಂದು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k