ಪವರ್ ಶೇರಿಂಗ್ ಬಗ್ಗೆ ಪಕ್ಷ ತೀರ್ಮಾನಿಸುತ್ತೆ: ಕೃಷ್ಣ ಭೈರೇಗೌಡ

Public TV
2 Min Read
Krishna Byre Gowda

ಬೆಂಗಳೂರು: ಪವರ್ ಶೇರಿಂಗ್ (Power Sharing) ವಿಚಾರದ ಬಗ್ಗೆ ಏನೇ ಇದ್ದರೂ ಅದು ಪಕ್ಷ ತೀರ್ಮಾನ ಮಾಡುತ್ತದೆ ಎಂದು ಸಚಿವ ಕೃಷ್ಣಭೈರೇಗೌಡ (Krishna Byre Gowda) ಹೇಳಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಸಮಯ ಬಂದಾಗ ಪಕ್ಷದಲ್ಲಿ ಇದರ ಬಗ್ಗೆ ತೀರ್ಮಾನ ಮಾಡುತ್ತೇವೆ. ನಮ್ಮ ಹಾಗೂ ನಿಮ್ಮ ಗಮನ ಜನರ ಕಲ್ಯಾಣದ ಕಡೆ, ಅಭಿವೃದ್ಧಿ ಕಡೆ ಇರಬೇಕು. ಜನರಿಗೆ ಒಳ್ಳೆದು ಆಗೋದನ್ನು ನೋಡಬೇಕು. ಅಧಿಕಾರ ಬರುತ್ತೆ, ಹೋಗುತ್ತೆ. ಜನರಿಗೆ ಒಳ್ಳೆದು ಆಗೋದನ್ನ ನೋಡಿಕೊಳ್ಳಬೇಕು. ನೀವು ನಾವು ಸೇರಿ ಒಳ್ಳೆದನ್ನು ಮಾಡೋಣ. ಜನರಿಗೆ ಸರ್ಕಾರ ಯಾವ ರೀತಿ ಕೆಲಸ ಮಾಡುತ್ತಿದೆ ಅನ್ನೋದು ಮುಖ್ಯ ಎಂದರು. ಇದನ್ನೂ ಓದಿ: ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ಶಾಸಕರ ಹೇಳಿಕೆಗಳು ಒಬ್ಬೊಬ್ಬರದ್ದು ಒಂದೊಂದು ರೀತಿ ಇದೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವಕಾಶವಿದೆ. ಪಕ್ಷ ಎಲ್ಲಾ ತೀರ್ಮಾನವನ್ನು ತೆಗೆದುಕೊಳ್ಳುತ್ತದೆ. ಪಕ್ಷದ ವರಿಷ್ಠರು ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ. ಎಲ್ಲಾ ರೀತಿಯ ಆಗು ಹೋಗುಗಳನ್ನ ಗಮನಿಸಿಸುತ್ತಾರೆ. ಯಾವುದು ಒಳ್ಳೆಯದೋ ಅದನ್ನು ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿಯವರಿಗೆ ಬೇರೆಯವರ ಕೆರೆಯಲ್ಲಿ ಮೀನು ಹಿಡಿಯುವುದೇ ಕೆಲಸ: ವೀರಪ್ಪ ಮೊಯ್ಲಿ

ಆಪರೇಷನ್ ಕಮಲ (Operation Kamala) ಅನ್ನೋದು ಬಿಜೆಪಿಯವರ (BJP) ಡಿಎನ್‌ಎಯಲ್ಲೇ ಇದೆ. ಬಿಜೆಪಿ ಒಂದು ಬಾರಿ ಅಲ್ಲ, ಅನೇಕ ಬಾರಿ ಬೇರೆ ಶಾಸಕರನ್ನು ದುಡ್ಡು ಕೊಟ್ಟು ಖರೀದಿ ಮಾಡಿದೆ. 2008ರಲ್ಲಿ, 2018ರಲ್ಲಿ ಮಾಡಿತ್ತು. ಅವರ ಜಾಯಮಾನದಲ್ಲೇ ಇದು ನಡೆದಿದೆ. ಮಹಾರಾಷ್ಟ್ರ, ಗೋವಾ, ರಾಜಸ್ಥಾನ ಎಲ್ಲಾ ಕಡೆ ಆಪರೇಷನ್ ಆಗಿದೆ. ಎಲ್ಲಿ ಅಧಿಕಾರದಲ್ಲಿದ್ದಾರೆ ಅಲ್ಲಿ ಆಪರೇಷನ್ ಆಗಿದೆ ಎಂದು ಅವರ ಮುಖ್ಯಸ್ಥರೇ ಹೇಳಿದ್ದಾರೆ. ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡೋದು ಅವರ ಚಾಳಿ. ಬಿಜೆಪಿ ಅವರು ಸಂವಿಧಾನಕ್ಕೂ ಗೌರವ ಕೊಡಲ್ಲ. ವಾಮಮಾರ್ಗ ಅವರ ರಾಜಮಾರ್ಗ. ಅವರು ಅಸಾಧ್ಯವಾದದ್ದನ್ನು ಮಾಡುತ್ತಾರೆ. ಆಪರೇಷನ್ ಮಾಡುವುದು ಅವರ ಡಿಎನ್‌ಎಯಲ್ಲೇ ಇದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಶಾಸಕರನ್ನು ಖರೀದಿಸಿ ಅಡ್ಡದಾರಿಯಲ್ಲಿ ಅಧಿಕಾರಕ್ಕೆ ಬರೋದು ಬಿಜೆಪಿ ಕೆಲಸ: ಆರ್‌ಬಿ ತಿಮ್ಮಾಪುರ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article